ಬ್ರೇಕಿಂಗ್ ನ್ಯೂಸ್
03-07-22 08:30 pm HK News Desk ಕ್ರೈಂ
ಮಂಗಳೂರು, ಜುಲೈ 3: ನಗರ ಹೊರವಲಯದ ಅರ್ಕುಳದಲ್ಲಿ ಮನೆಯಲ್ಲೇ ದನ ಕಡಿದು ಮಾಂಸ ಮಾಡುತ್ತಿದ್ದಾಗ ಕಂಕನಾಡಿ ಗ್ರಾಮಾಂತರ ಠಾಣೆಯ ಪೊಲೀಸರು ದಾಳಿ ನಡೆಸಿದ್ದಾರೆ. ಭಾನುವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ಪೊಲೀಸರು ದಾಳಿ ನಡೆಸಿದ್ದು ಮನೆ ಮಾಲೀಕ ಸಾಬಿತ್(40) ಎಂಬಾತನನ್ನು ಬಂಧಿಸಿದ್ದಾರೆ.
ಮನೆಯ ಬಳಿಯ ಶೆಡ್ ಒಂದರಲ್ಲಿ ಸಾಬಿತ್ ಮತ್ತು ಇನ್ನೊಬ್ಬ ಬಶೀರ್ ಮಾಂಸ ಮಾಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದು ಪೊಲೀಸರು ದಾಳಿ ನಡೆಸಿದ್ದು 95 ಕೇಜಿ ದನದ ಮಾಂಸವನ್ನು ಸೀಜ್ ಮಾಡಿದ್ದಾರೆ. ಸಾಬಿತ್ ನನ್ನು ವಶಕ್ಕೆ ಪಡೆದಿದ್ದು, ಪೊಲೀಸ್ ದಾಳಿ ವೇಳೆ ಬಶೀರ್ ಓಡಿ ತಪ್ಪಿಸಿಕೊಂಡಿದ್ದಾನೆ. ಮನೆಯನ್ನೇ ಅಕ್ರಮ ಕಸಾಯಿಖಾನೆ ಮಾಡಿಕೊಂಡು ಆಸುಪಾಸಿನಲ್ಲಿ ಅಗತ್ಯ ಇದ್ದವರಿಗೆ ಮಾಂಸವನ್ನು ಪೂರೈಕೆ ಮಾಡುತ್ತಿದ್ದ.
ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಾಗಿರುವುದರಿಂದ ಗೋವನ್ನು ಹತ್ಯೆ ಮಾಡುವುದು, ಮಾಂಸವನ್ನು ಮಾರಾಟ ಮಾಡುವುದು ಅಪರಾಧವಾಗಿದೆ. ಇತ್ತೀಚೆಗೆ ಬಜರಂಗದಳ ಕಾರ್ಯಕರ್ತರು ಸುದ್ದಿಗೋಷ್ಟಿ ಕರೆದು ಕಟ್ಟುನಿಟ್ಟಾಗಿ ನಿಮಯ ಜಾರಿಗೊಳಿಸಬೇಕೆಂದು ಆಗ್ರಹಿಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ ಎನ್ನಲಾಗುತ್ತಿದೆ. ಉಳ್ಳಾಲ ಠಾಣೆ ವ್ಯಾಪ್ತಿಯ ಚೆಂಬುಗುಡ್ಡೆ ಎಂಬಲ್ಲಿಯೂ ಅಕ್ರಮ ಕಸಾಯಿಖಾನೆ ನಡೆಸುತ್ತಿದ್ದಲ್ಲಿಗೆ ಉಳ್ಳಾಲ ಪೊಲೀಸರು ದಾಳಿ ನಡೆಸಿದ್ದು ವಧಿಸುವುದಕ್ಕಾಗಿ ಇಡಲಾಗಿದೆ ಎನ್ನಲಾಗಿರುವ ದನವನ್ನು ವಶಕ್ಕೆ ಪಡೆದಿದ್ದಾರೆ.
Mangalore police raid illegal slaughterhouses at Arkula, seize 95 kilos of cow meat, one arrested. The arrested has been identified as Sabith. The raid was conducted by Kankanady Rural police.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm