ಬ್ರೇಕಿಂಗ್ ನ್ಯೂಸ್
01-10-20 01:19 pm Headline Karnataka News Network ಕ್ರೈಂ
ಲಕ್ನೋ, ಅಕ್ಟೋಬರ್ 1 : ಉತ್ತರ ಪ್ರದೇಶದ ಹತ್ರಾಸ್ನಲ್ಲಿ ನಡೆದ 20 ವರ್ಷದ ದಲಿತ ಯುವತಿಯ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಬಗ್ಗೆ ದೇಶದೆಲ್ಲೆಡೆ ವ್ಯಾಪಕ ಆಕ್ರೋಶದ ಅಲೆ ಎದ್ದಿದೆ.
ಸೆಪ್ಟೆಂಬರ್ 14ರಂದು ಹೊಲಕ್ಕೆ ಹೋಗಿದ್ದಾಗ ಕಾಮುಕರ ಅಟ್ಟಹಾಸದಿಂದ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 20 ವರ್ಷದ ಯುವತಿ ಎರಡು ವಾರಗಳಿಂದ ಜೀವನ್ಮರಣದ ನಡುವೆ ಹೋರಾಡಿ, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ. ಯುವತಿಯನ್ನು ನಾಲ್ಕು ಜನ ಮೇಲ್ಜಾತಿಯ ಯುವಕರು ಅತ್ಯಾಚಾರ ಮಾಡಿದ್ದಲ್ಲದೆ ಆಕೆಯ ನಾಲಿಗೆಯನ್ನು ಹಾಗು ಬೆನ್ನುಹುರಿಯನ್ನು ಸಹ ಕತ್ತರಿಸಿ ಅಟ್ಟಹಾಸ ಮೆರೆದಿದ್ದರು.

ಯುವತಿಯ ಪರಿಸ್ಥಿತಿ ಗಂಭೀರವಾಗಿದ್ದ ಕಾರಣ ಸೆಪ್ಟೆಂಬರ್ 28 ರಂದು ಸಂತ್ರಸ್ತೆಯನ್ನು ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸೆಪ್ಟೆಂಬರ್ 29 ರ ಬೆಳಗ್ಗೆ ಯುವತಿ ಮೃತಪಟ್ಟಿದ್ದಳು.
ಇನ್ನು ಮೃತಪಟ್ಟ ಸಂತ್ರಸ್ತೆಯ ಕುಟುಂಬದವರು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಶವದ ಅಂತ್ಯಕ್ರಿಯೆ ನಡೆಸಲು ಪೊಲೀಸರು ನಮಗೆ ಅವಕಾಶ ನೀಡಲಿಲ್ಲ. ನಮ್ಮ ವಿರೋಧವನ್ನು ಧಿಕ್ಕರಿಸಿ ರಾತ್ರೋರಾತ್ರಿ ಪೊಲೀಸರೇ ಅಂತ್ಯಕ್ರಿಯೆ ನೆರವೇರಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಪ್ರಕರಣದ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ತಪ್ಪಿತಸ್ಥರಿಗೆ ಅತ್ಯಂತ ಕಠಿಣ ಶಿಕ್ಷೆಯನ್ನು ವಿಧಿಸುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಗೆ ಸೂಚನೆ ನೀಡಿದ್ದಾರೆ.

ಪ್ರಕರಣದ ತನಿಖೆಗಾಗಿ ಮೂರು ಸದಸ್ಯರ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಲಾಗಿದ್ದು , 7 ದಿನಗಳ ಒಳಗೆ ವರದಿ ನೀಡುವಂತೆ ಸೂಚಿಸಲಾಗಿದೆ. ಈ ಪ್ರಕರಣವನ್ನು ತ್ವರಿತ ನ್ಯಾಯಾಲಯದ ಮೂಲಕ ವಿಚಾರಣೆ ನಡೆಸಲಾಗುತ್ತದೆ. ಘಟನೆ ಸಂಬಂಧ ನಾಲ್ವರನ್ನು ಬಂಧಿಸಲಾಗಿದ್ದು, ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಯೋಗಿ ತಿಳಿಸಿದ್ದಾರೆ.
ಹತ್ರಾಸ್ ಘಟನೆಯನ್ನು ಪ್ರತಿಭಟಿಸಿ ಉತ್ತರ ಪ್ರದೇಶ, ನವದೆಹಲಿ ಸೇರಿದಂತೆ ದೇಶದ ವಿವಿಧೆಡೆ ವ್ಯಾಪಕ ಆಕ್ರೋಶ ಭುಗಿಲೆದ್ದಿದ್ದು , ಪ್ರತಿಭಟನೆಗಳು ನಡೆಯುತ್ತಿವೆ.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm