ಬ್ರೇಕಿಂಗ್ ನ್ಯೂಸ್
01-10-20 02:30 pm Headline Karnataka News Network ಕ್ರೈಂ
ಬಲರಾಂಪುರ, ಅಕ್ಟೋಬರ್ 1: ಹತ್ರಾಸ್ ಅತ್ಯಾಚಾರ ಪ್ರಕರಣ ವಿರುದ್ಧ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿರುವ ನಡುವೆಯೇ ಈ ಘಟನೆ ನಡೆದಿದೆ. ಕಾಲೇಜಿನ ಅಡ್ಮೀಷನ್ಗೆ ಹೋದ ಯುವತಿ ಹಿಂತಿರುಗುವ ವೇಳೆ ಇಬ್ಬರು ಪುರುಷರು ದಲಿತ ಜನಾಂಗಕ್ಕೆ ಸೇರಿದ ಯುವತಿಯ ಮೇಲೆ ಎರಗಿದ್ದು ಗಂಭೀರ ಸ್ಥಿತಿಯಲ್ಲಿ ಈಕೆ ಮನೆ ಸೇರಿದ್ದಳು ಎಂದು ಕುಟುಂಬದವರು ತಿಳಿಸಿರುವುದಾಗಿ ಪೊಲೀಸ್ ವರಿಷ್ಠಾಧಿಕಾರಿ ದೇವ್ ರಂಜನ್ ವರ್ಮ ಹೇಳಿದ್ದಾರೆ.
ಸಮೀಪದ ಆಸ್ಪತ್ರೆಗೆ ಆಕೆಯನ್ನು ಕರೆದೊಯ್ಯುವಾಗ ಮಾರ್ಗ ಮಧ್ಯೆ ಯುವತಿ ಮೃತಪಟ್ಟಳು ಎಂದು ಅವರು ತಿಳಿಸಿದ್ದಾರೆ. ಆಸ್ಪತ್ರೆಯವರು ಪೊಲೀಸರಿಗೆ ವಿಷಯ ವರದಿ ಮಾಡಿದಾಗ ಯುವತಿಯ ಕುಟುಂಬದವರು ಆಕೆ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದಳು ಎಂದು ತಿಳಿಸಿದರು. ಆರೋಪಿಗಳಾದ ಶಾಹಿದ್ ಮತ್ತು ಸಾಹಿಲ್ ಎಂಬುವರನ್ನು ಬಂಧಿಸಲಾಗಿದೆ ಎಂದು ವರ್ಮ ಹೇಳಿದ್ದಾರೆ. ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್, ಹತ್ರಾಸ್ ಘಟನೆ ಬಳಿಕ ಮತ್ತೊಬ್ಬ ಮಗಳು ಬಲರಾಂಪುರದಲ್ಲಿ ಸಾಮೂಹಿಕ ಅತ್ಯಾಚಾರದಿಂದ ಸಾವಿಗೀಡಾಗಿದ್ದಾಳೆ. ಶ್ರದ್ಧಾಂಜಲಿ! ಎಂದು ಟ್ವಿಟರ್ನಲ್ಲಿ ಪ್ರತಿಕ್ರಿಯಿಸಿದ್ದಾರೆ.

ಇಂಜೆಕ್ಷನ್ ನೀಡಿ ಅತ್ಯಾಚಾರ:
ಬುಧವಾರ ರಾತ್ರಿ ಸುದ್ದಿಗಾರರ ಜತೆ ಮಾತನಾಡಿದ ಸಂತ್ರಸ್ತೆ ತಾಯಿ, ‘ಅತ್ಯಾಚಾರಿಗಳು ಮಗಳ ಕಾಲು ಮತ್ತು ಬೆನ್ನನ್ನು ಮುರಿದಿದ್ದಾರೆ’ ಎಂದು ಆರೋಪಿಸಿದ್ದಾರೆ. ಆದರೆ ಪೊಲೀಸರು ಇದನ್ನು ಅಲ್ಲಗಳೆದಿದ್ದಾರೆ. ಶವ ಪರೀಕ್ಷೆಯಲ್ಲಿ ಇದು ದೃಢಪಟ್ಟಿಲ್ಲ ಎಂದಿದ್ದಾರೆ.
ಕಾಲೇಜಿಗೆ ಸೇರಲು ನನ್ನ ಮಗಳು ಹೋಗಿದ್ದಳು. ಬರುವಾಗ ಮೂವರು ಅವಳನ್ನು ಅಪಹರಿಸಿ ತಮ್ಮ ಕೊಠಡಿಗೆ ಒಯ್ದಿದ್ದಾರೆ. ಅಲ್ಲಿ ಅವಳಿಗೆ ಇಂಜೆಕ್ಷನ್ ನೀಡಿ ಅತ್ಯಾಚಾರ ಮಾಡಿದ್ದಾರೆ. ನಂತರ ಅವಳನ್ನು ಇ– ರಿಕ್ಷಾದಲ್ಲಿ ಮನೆಗೆ ಕಳುಹಿಸಿದ್ದಾರೆ. ಅವಳನ್ನು ಮನೆಯ ಹತ್ತಿರ ಬಿಟ್ಟು ರಿಕ್ಷಾ ತೆರಳಿದೆ. ನನ್ನ ಮಗಳು ನಿಂತುಕೊಳ್ಳುವ ಮತ್ತು ಮಾತನಾಡುವ ಸ್ಥಿತಿಯಲ್ಲಿ ಇರಲಿಲ್ಲ‘ ಎಂದು ತಾಯಿ ವಿವರಿಸಿದ್ದಾರೆ.
ಶವಪರೀಕ್ಷೆ ಬಳಿಕ ಕುಟುಂಬ ಸದಸ್ಯರ ಸಮ್ಮುಖದಲ್ಲಿ ಬುಧವಾರ ಅಂತ್ಯಸಂಸ್ಕಾರ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗುರುವಾರ ಬೆಳಿಗ್ಗೆ ಜಿಲ್ಲಾಧಿಕಾರಿ, ಎಸ್ಪಿ ಹಾಗೂ ಸ್ಥಳೀಯ ಮುಖಂಡರು ಸಂತ್ರಸ್ತೆ ಮನೆಗೆ ತೆರಳಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ಭರವಸೆ ನೀಡಿದರು. ಅಲ್ಲದೆ ರೂ. 6 ಲಕ್ಷ ಆರ್ಥಿಕ ನೆರವು ಒದಗಿಸುವ ಪತ್ರವನ್ನು ನೀಡಿ, ತಾಯಿಯ ಹೆಸರಿಗೆ ಹಣವನ್ನು ಮಧ್ಯಾಹ್ನದ ವೇಳೆಗೆ ವರ್ಗಾಯಿಸಲಾಗುವುದು ಎಂದು ಆಶ್ವಾಸನೆ ನೀಡಿದರು.
29-07-26 01:52 pm
HK News Staffer
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶ...
25-07-26 03:06 pm
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
28-07-26 10:28 pm
HK News Desk
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
ಜಾಲತಾಣದಲ್ಲಿ ಜೆನ್ ಜೀಗಳ ಅಬ್ಬರ ; ಕಾಕ್ರೋಚ್ ಬೆನ್ನಲ...
27-07-26 09:48 pm
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
29-07-26 01:53 pm
HK News Staffer
ಹಿಟ್& ರನ್ ಪ್ರಕರಣ ; ಕಾರು ಡಿಕ್ಕಿ ರಭಸಕ್ಕೆ ಎರಡೂ ಕ...
29-07-26 10:40 am
ಪತ್ನಿಗೆ ನೇಣು ಬಿಗಿದು ವಿಡಿಯೋ ಕಾಲ್ನಲ್ಲಿ ಅತ್ತೆ-ಮ...
28-07-26 08:11 pm
Lavanya Murder Case, News: ಲಾವಣ್ಯ ಹತ್ಯೆ ಪ್ರಕರ...
28-07-26 07:07 pm
ವಿಚ್ಛೇದಿತ ಮಹಿಳೆಗೆ ಫೇಸ್ಬುಕ್ನಲ್ಲಿ ಪ್ರೀತಿಯ ನಾಟ...
28-07-26 12:28 pm