ಬ್ರೇಕಿಂಗ್ ನ್ಯೂಸ್
11-07-22 01:36 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 11 : ಯುವಕನನ್ನು ಹನಿಟ್ರಾಪ್ ಮಾಡಿದ ತಂಡವೊಂದು ಸಿಬಿಐ ದಾಳಿ ಹೆಸರಲ್ಲಿ ಐದು ಲಕ್ಷ ರೂಪಾಯಿ ಪೀಕಿಸಿ ವಂಚಿಸಿದ ಬಗ್ಗೆ ಬೆಂಗಳೂರಿನ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರಿನ ಯುವಕನೊಬ್ಬ ಫೇಸ್ ಬುಕ್ ನಲ್ಲಿ ಪರಿಚಯ ಆಗಿದ್ದ ಯುವತಿಯ ಜೊತೆ ಚಾಟ್ ಮಾಡುತ್ತಾ ಹತ್ತಿರವಾಗಿದ್ದ. ಆನಂತರ ವಿಡಿಯೋ ಕರೆ ಮಾಡುತ್ತಿದ್ದು, ಆಕೆಯ ಒತ್ತಾಸೆಯಂತೆ ಇಬ್ಬರೂ ಬೆತ್ತಲಾಗಿದ್ದರು. ಈ ವೇಳೆ, ಯುವಕನ ಬೆತ್ತಲೆ ವಿಡಿಯೋವನ್ನು ಚಿತ್ರೀಕರಿಸಿದ್ದ ಯುವತಿ ಮತ್ತು ಆಕೆಯ ಕಡೆಯವರು ಹಣ ನೀಡುವಂತೆ ಬೇಡಿಕೆಯಿಟ್ಟಿದ್ದರು.

ಯುವಕ ಹಣ ನೀಡದೇ ಇದ್ದಾಗ ಆಕೆಯ ಜೊತೆಗಿದ್ದ ಇತರ ಆರೋಪಿಗಳು, ಯುವಕನಿಗೆ ಕರೆ ಮಾಡಿ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಬಿಂಬಿಸಿದ್ದಾರೆ. ಪ್ರಕರಣ ಸಿಬಿಐಗೆ ಹೋಗಿದ್ದು ಅಲ್ಲಿ ಎಫ್ ಐಆರ್ಗೆ ದಾಖಲಾಗಿದೆ ಎಂದು ತಿಳಿಸಿದ್ದಾರೆ. ಅಲ್ಲದೆ, ಎಫ್ ಐಆರ್ ನಲ್ಲಿ ಸಂತ್ರಸ್ತ ಯುವಕನ ಹೆಸರು ಬರುವಂತೆ ಎಡಿಟ್ ಮಾಡಿ, ಅದನ್ನು ಆತನಿಗೆ ಕಳಿಸಿ ಬೆದರಿಸಿದ್ದಾರೆ. ಸಿಬಿಐ ತಂಡ ದಾಳಿ ನಡೆಸಿ, ನಿನ್ನನ್ನು ಬಂಧಿಸುತ್ತಾರೆಂದು ಹೇಳಿ ಹೆದರಿಕೆ ಹುಟ್ಟಿಸಿದ್ದರು. ಒಂದ್ವೇಳೆ ಹಣ ನೀಡಿದರೆ, ಸಿಬಿಐ ಅಧಿಕಾರಿಗಳು ಬಂಧಿಸದಂತೆ ನೋಡಿಕೊಳ್ಳುತ್ತೇವೆ ಎಂದು ಆರೋಪಿಗಳು ನಂಬಿಸಿದ್ದಾರೆ. ಇದೇ ರೀತಿ ಹೇಳಿ ಪದೇ ಪದೇ ಖಾತೆಗೆ ಹಣ ಹಾಕಿಸಿಕೊಂಡಿದ್ದಾರೆ. 5.58 ಲಕ್ಷ ರೂಪಾಯಿ ಹಣವನ್ನು ವಸೂಲಿ ಮಾಡಿದ್ದು ಇನ್ನೂ ನೀಡುವಂತೆ ಬೆದರಿಸಿದ್ದರು.

ಇಲ್ಲದಿದ್ದರೆ ಸಿಬಿಐ ಅಧಿಕಾರಿಗಳು ನಿಮ್ಮ ಮನೆಗೆ ಬರುತ್ತಾರೆ ಎಂದು ಆರೋಪಿಗಳು ಬೆದರಿಸಿದ್ದರು. ಇದರಿಂದ ಬೇಸತ್ತ ಯುವಕ, ಬೆಂಗಳೂರು ನಗರ ಆಗ್ನೇಯ ವಿಭಾಗದ ಸಿಇಎನ್ ಠಾಣೆಗೆ ದೂರು ನೀಡಿದ್ದು ತನಗಾದ ವಂಚನೆಯ ಬಗ್ಗೆ ತಿಳಿಸಿದ್ದಾನೆ. ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Facebook Blackmail and Honeytrap, lakhs looted in the name of Nude Video, Gang arrested by Bangalore police. Girl who used to chat with young boys tried to make them naked and record the video after which they began to blackmail many.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm