ಬ್ರೇಕಿಂಗ್ ನ್ಯೂಸ್
11-07-22 01:36 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 11 : ಯುವಕನನ್ನು ಹನಿಟ್ರಾಪ್ ಮಾಡಿದ ತಂಡವೊಂದು ಸಿಬಿಐ ದಾಳಿ ಹೆಸರಲ್ಲಿ ಐದು ಲಕ್ಷ ರೂಪಾಯಿ ಪೀಕಿಸಿ ವಂಚಿಸಿದ ಬಗ್ಗೆ ಬೆಂಗಳೂರಿನ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರಿನ ಯುವಕನೊಬ್ಬ ಫೇಸ್ ಬುಕ್ ನಲ್ಲಿ ಪರಿಚಯ ಆಗಿದ್ದ ಯುವತಿಯ ಜೊತೆ ಚಾಟ್ ಮಾಡುತ್ತಾ ಹತ್ತಿರವಾಗಿದ್ದ. ಆನಂತರ ವಿಡಿಯೋ ಕರೆ ಮಾಡುತ್ತಿದ್ದು, ಆಕೆಯ ಒತ್ತಾಸೆಯಂತೆ ಇಬ್ಬರೂ ಬೆತ್ತಲಾಗಿದ್ದರು. ಈ ವೇಳೆ, ಯುವಕನ ಬೆತ್ತಲೆ ವಿಡಿಯೋವನ್ನು ಚಿತ್ರೀಕರಿಸಿದ್ದ ಯುವತಿ ಮತ್ತು ಆಕೆಯ ಕಡೆಯವರು ಹಣ ನೀಡುವಂತೆ ಬೇಡಿಕೆಯಿಟ್ಟಿದ್ದರು.

ಯುವಕ ಹಣ ನೀಡದೇ ಇದ್ದಾಗ ಆಕೆಯ ಜೊತೆಗಿದ್ದ ಇತರ ಆರೋಪಿಗಳು, ಯುವಕನಿಗೆ ಕರೆ ಮಾಡಿ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಬಿಂಬಿಸಿದ್ದಾರೆ. ಪ್ರಕರಣ ಸಿಬಿಐಗೆ ಹೋಗಿದ್ದು ಅಲ್ಲಿ ಎಫ್ ಐಆರ್ಗೆ ದಾಖಲಾಗಿದೆ ಎಂದು ತಿಳಿಸಿದ್ದಾರೆ. ಅಲ್ಲದೆ, ಎಫ್ ಐಆರ್ ನಲ್ಲಿ ಸಂತ್ರಸ್ತ ಯುವಕನ ಹೆಸರು ಬರುವಂತೆ ಎಡಿಟ್ ಮಾಡಿ, ಅದನ್ನು ಆತನಿಗೆ ಕಳಿಸಿ ಬೆದರಿಸಿದ್ದಾರೆ. ಸಿಬಿಐ ತಂಡ ದಾಳಿ ನಡೆಸಿ, ನಿನ್ನನ್ನು ಬಂಧಿಸುತ್ತಾರೆಂದು ಹೇಳಿ ಹೆದರಿಕೆ ಹುಟ್ಟಿಸಿದ್ದರು. ಒಂದ್ವೇಳೆ ಹಣ ನೀಡಿದರೆ, ಸಿಬಿಐ ಅಧಿಕಾರಿಗಳು ಬಂಧಿಸದಂತೆ ನೋಡಿಕೊಳ್ಳುತ್ತೇವೆ ಎಂದು ಆರೋಪಿಗಳು ನಂಬಿಸಿದ್ದಾರೆ. ಇದೇ ರೀತಿ ಹೇಳಿ ಪದೇ ಪದೇ ಖಾತೆಗೆ ಹಣ ಹಾಕಿಸಿಕೊಂಡಿದ್ದಾರೆ. 5.58 ಲಕ್ಷ ರೂಪಾಯಿ ಹಣವನ್ನು ವಸೂಲಿ ಮಾಡಿದ್ದು ಇನ್ನೂ ನೀಡುವಂತೆ ಬೆದರಿಸಿದ್ದರು.

ಇಲ್ಲದಿದ್ದರೆ ಸಿಬಿಐ ಅಧಿಕಾರಿಗಳು ನಿಮ್ಮ ಮನೆಗೆ ಬರುತ್ತಾರೆ ಎಂದು ಆರೋಪಿಗಳು ಬೆದರಿಸಿದ್ದರು. ಇದರಿಂದ ಬೇಸತ್ತ ಯುವಕ, ಬೆಂಗಳೂರು ನಗರ ಆಗ್ನೇಯ ವಿಭಾಗದ ಸಿಇಎನ್ ಠಾಣೆಗೆ ದೂರು ನೀಡಿದ್ದು ತನಗಾದ ವಂಚನೆಯ ಬಗ್ಗೆ ತಿಳಿಸಿದ್ದಾನೆ. ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Facebook Blackmail and Honeytrap, lakhs looted in the name of Nude Video, Gang arrested by Bangalore police. Girl who used to chat with young boys tried to make them naked and record the video after which they began to blackmail many.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am