ಬ್ರೇಕಿಂಗ್ ನ್ಯೂಸ್
11-07-22 01:36 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 11 : ಯುವಕನನ್ನು ಹನಿಟ್ರಾಪ್ ಮಾಡಿದ ತಂಡವೊಂದು ಸಿಬಿಐ ದಾಳಿ ಹೆಸರಲ್ಲಿ ಐದು ಲಕ್ಷ ರೂಪಾಯಿ ಪೀಕಿಸಿ ವಂಚಿಸಿದ ಬಗ್ಗೆ ಬೆಂಗಳೂರಿನ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರಿನ ಯುವಕನೊಬ್ಬ ಫೇಸ್ ಬುಕ್ ನಲ್ಲಿ ಪರಿಚಯ ಆಗಿದ್ದ ಯುವತಿಯ ಜೊತೆ ಚಾಟ್ ಮಾಡುತ್ತಾ ಹತ್ತಿರವಾಗಿದ್ದ. ಆನಂತರ ವಿಡಿಯೋ ಕರೆ ಮಾಡುತ್ತಿದ್ದು, ಆಕೆಯ ಒತ್ತಾಸೆಯಂತೆ ಇಬ್ಬರೂ ಬೆತ್ತಲಾಗಿದ್ದರು. ಈ ವೇಳೆ, ಯುವಕನ ಬೆತ್ತಲೆ ವಿಡಿಯೋವನ್ನು ಚಿತ್ರೀಕರಿಸಿದ್ದ ಯುವತಿ ಮತ್ತು ಆಕೆಯ ಕಡೆಯವರು ಹಣ ನೀಡುವಂತೆ ಬೇಡಿಕೆಯಿಟ್ಟಿದ್ದರು.

ಯುವಕ ಹಣ ನೀಡದೇ ಇದ್ದಾಗ ಆಕೆಯ ಜೊತೆಗಿದ್ದ ಇತರ ಆರೋಪಿಗಳು, ಯುವಕನಿಗೆ ಕರೆ ಮಾಡಿ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಬಿಂಬಿಸಿದ್ದಾರೆ. ಪ್ರಕರಣ ಸಿಬಿಐಗೆ ಹೋಗಿದ್ದು ಅಲ್ಲಿ ಎಫ್ ಐಆರ್ಗೆ ದಾಖಲಾಗಿದೆ ಎಂದು ತಿಳಿಸಿದ್ದಾರೆ. ಅಲ್ಲದೆ, ಎಫ್ ಐಆರ್ ನಲ್ಲಿ ಸಂತ್ರಸ್ತ ಯುವಕನ ಹೆಸರು ಬರುವಂತೆ ಎಡಿಟ್ ಮಾಡಿ, ಅದನ್ನು ಆತನಿಗೆ ಕಳಿಸಿ ಬೆದರಿಸಿದ್ದಾರೆ. ಸಿಬಿಐ ತಂಡ ದಾಳಿ ನಡೆಸಿ, ನಿನ್ನನ್ನು ಬಂಧಿಸುತ್ತಾರೆಂದು ಹೇಳಿ ಹೆದರಿಕೆ ಹುಟ್ಟಿಸಿದ್ದರು. ಒಂದ್ವೇಳೆ ಹಣ ನೀಡಿದರೆ, ಸಿಬಿಐ ಅಧಿಕಾರಿಗಳು ಬಂಧಿಸದಂತೆ ನೋಡಿಕೊಳ್ಳುತ್ತೇವೆ ಎಂದು ಆರೋಪಿಗಳು ನಂಬಿಸಿದ್ದಾರೆ. ಇದೇ ರೀತಿ ಹೇಳಿ ಪದೇ ಪದೇ ಖಾತೆಗೆ ಹಣ ಹಾಕಿಸಿಕೊಂಡಿದ್ದಾರೆ. 5.58 ಲಕ್ಷ ರೂಪಾಯಿ ಹಣವನ್ನು ವಸೂಲಿ ಮಾಡಿದ್ದು ಇನ್ನೂ ನೀಡುವಂತೆ ಬೆದರಿಸಿದ್ದರು.

ಇಲ್ಲದಿದ್ದರೆ ಸಿಬಿಐ ಅಧಿಕಾರಿಗಳು ನಿಮ್ಮ ಮನೆಗೆ ಬರುತ್ತಾರೆ ಎಂದು ಆರೋಪಿಗಳು ಬೆದರಿಸಿದ್ದರು. ಇದರಿಂದ ಬೇಸತ್ತ ಯುವಕ, ಬೆಂಗಳೂರು ನಗರ ಆಗ್ನೇಯ ವಿಭಾಗದ ಸಿಇಎನ್ ಠಾಣೆಗೆ ದೂರು ನೀಡಿದ್ದು ತನಗಾದ ವಂಚನೆಯ ಬಗ್ಗೆ ತಿಳಿಸಿದ್ದಾನೆ. ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Facebook Blackmail and Honeytrap, lakhs looted in the name of Nude Video, Gang arrested by Bangalore police. Girl who used to chat with young boys tried to make them naked and record the video after which they began to blackmail many.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am