ಬ್ರೇಕಿಂಗ್ ನ್ಯೂಸ್
11-07-22 01:36 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 11 : ಯುವಕನನ್ನು ಹನಿಟ್ರಾಪ್ ಮಾಡಿದ ತಂಡವೊಂದು ಸಿಬಿಐ ದಾಳಿ ಹೆಸರಲ್ಲಿ ಐದು ಲಕ್ಷ ರೂಪಾಯಿ ಪೀಕಿಸಿ ವಂಚಿಸಿದ ಬಗ್ಗೆ ಬೆಂಗಳೂರಿನ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರಿನ ಯುವಕನೊಬ್ಬ ಫೇಸ್ ಬುಕ್ ನಲ್ಲಿ ಪರಿಚಯ ಆಗಿದ್ದ ಯುವತಿಯ ಜೊತೆ ಚಾಟ್ ಮಾಡುತ್ತಾ ಹತ್ತಿರವಾಗಿದ್ದ. ಆನಂತರ ವಿಡಿಯೋ ಕರೆ ಮಾಡುತ್ತಿದ್ದು, ಆಕೆಯ ಒತ್ತಾಸೆಯಂತೆ ಇಬ್ಬರೂ ಬೆತ್ತಲಾಗಿದ್ದರು. ಈ ವೇಳೆ, ಯುವಕನ ಬೆತ್ತಲೆ ವಿಡಿಯೋವನ್ನು ಚಿತ್ರೀಕರಿಸಿದ್ದ ಯುವತಿ ಮತ್ತು ಆಕೆಯ ಕಡೆಯವರು ಹಣ ನೀಡುವಂತೆ ಬೇಡಿಕೆಯಿಟ್ಟಿದ್ದರು.

ಯುವಕ ಹಣ ನೀಡದೇ ಇದ್ದಾಗ ಆಕೆಯ ಜೊತೆಗಿದ್ದ ಇತರ ಆರೋಪಿಗಳು, ಯುವಕನಿಗೆ ಕರೆ ಮಾಡಿ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಬಿಂಬಿಸಿದ್ದಾರೆ. ಪ್ರಕರಣ ಸಿಬಿಐಗೆ ಹೋಗಿದ್ದು ಅಲ್ಲಿ ಎಫ್ ಐಆರ್ಗೆ ದಾಖಲಾಗಿದೆ ಎಂದು ತಿಳಿಸಿದ್ದಾರೆ. ಅಲ್ಲದೆ, ಎಫ್ ಐಆರ್ ನಲ್ಲಿ ಸಂತ್ರಸ್ತ ಯುವಕನ ಹೆಸರು ಬರುವಂತೆ ಎಡಿಟ್ ಮಾಡಿ, ಅದನ್ನು ಆತನಿಗೆ ಕಳಿಸಿ ಬೆದರಿಸಿದ್ದಾರೆ. ಸಿಬಿಐ ತಂಡ ದಾಳಿ ನಡೆಸಿ, ನಿನ್ನನ್ನು ಬಂಧಿಸುತ್ತಾರೆಂದು ಹೇಳಿ ಹೆದರಿಕೆ ಹುಟ್ಟಿಸಿದ್ದರು. ಒಂದ್ವೇಳೆ ಹಣ ನೀಡಿದರೆ, ಸಿಬಿಐ ಅಧಿಕಾರಿಗಳು ಬಂಧಿಸದಂತೆ ನೋಡಿಕೊಳ್ಳುತ್ತೇವೆ ಎಂದು ಆರೋಪಿಗಳು ನಂಬಿಸಿದ್ದಾರೆ. ಇದೇ ರೀತಿ ಹೇಳಿ ಪದೇ ಪದೇ ಖಾತೆಗೆ ಹಣ ಹಾಕಿಸಿಕೊಂಡಿದ್ದಾರೆ. 5.58 ಲಕ್ಷ ರೂಪಾಯಿ ಹಣವನ್ನು ವಸೂಲಿ ಮಾಡಿದ್ದು ಇನ್ನೂ ನೀಡುವಂತೆ ಬೆದರಿಸಿದ್ದರು.

ಇಲ್ಲದಿದ್ದರೆ ಸಿಬಿಐ ಅಧಿಕಾರಿಗಳು ನಿಮ್ಮ ಮನೆಗೆ ಬರುತ್ತಾರೆ ಎಂದು ಆರೋಪಿಗಳು ಬೆದರಿಸಿದ್ದರು. ಇದರಿಂದ ಬೇಸತ್ತ ಯುವಕ, ಬೆಂಗಳೂರು ನಗರ ಆಗ್ನೇಯ ವಿಭಾಗದ ಸಿಇಎನ್ ಠಾಣೆಗೆ ದೂರು ನೀಡಿದ್ದು ತನಗಾದ ವಂಚನೆಯ ಬಗ್ಗೆ ತಿಳಿಸಿದ್ದಾನೆ. ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Facebook Blackmail and Honeytrap, lakhs looted in the name of Nude Video, Gang arrested by Bangalore police. Girl who used to chat with young boys tried to make them naked and record the video after which they began to blackmail many.
13-01-26 12:57 pm
Bangalore Correspondent
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm