ಬ್ರೇಕಿಂಗ್ ನ್ಯೂಸ್
11-07-22 03:40 pm HK News Desk ಕ್ರೈಂ
ಕಾಸರಗೋಡು, ಜುಲೈ 11: ಬೇಕಲ ಕೋಟೆ ಬಳಿಯಿರುವ ರೆಸಾರ್ಟ್ ನಲ್ಲಿ ಕಳವು ನಡೆದ ಪ್ರಕರಣಕ್ಕೆ ಸಂಬಂಧಿಸಿ ಚಿತ್ರದುರ್ಗ ಮೂಲದ ಗಂಡ- ಹೆಂಡತಿಯನ್ನು ಬೇಕಲ ಪೊಲೀಸರು ಬಂಧಿಸಿದ್ದಾರೆ.
ಪ್ರದೀಪ್ (26) ಮತ್ತು ಆತನ ಪತ್ನಿ ನಿವೇದಿತಾ (25) ಬಂಧಿತರು. ಬೇಕಲದ ಕಾಫಿಲ್ ಬೀಚ್ ನಲ್ಲಿರುವ ಹೋಮ್ ಸ್ಟೇ ರೆಸಾರ್ಟ್ ನಲ್ಲಿ ಕೆಲಸಕ್ಕಿದ್ದ ದಂಪತಿ, ಅಲ್ಲಿಂದಲೇ 6 ಲಕ್ಷ ನಗದು ಕದ್ದಿರುವ ಬಗ್ಗೆ ಪೊಲೀಸ್ ದೂರು ದಾಖಲಾಗಿತ್ತು. ಕಪ್ ಬೋರ್ಡ್ ಒಳಗಡೆ ಇಟ್ಟಿದ್ದ 6 ಲಕ್ಷ ನಗದು ಕಳವಾದ ಬಗ್ಗೆ ರೆಸಾರ್ಟ್ ಮಾಲೀಕ ಪ್ರದೀಪ್ ಬೇಕಲ ಠಾಣೆಗೆ ದೂರು ನೀಡಿದ್ದರು. ತಮ್ಮಲ್ಲಿಯೇ ಕೆಲಸ ಮಾಡುತ್ತಿದ್ದ ಇಬ್ಬರು ನಾಪತ್ತೆಯಾಗಿದ್ದು, ಅವರ ಬಗ್ಗೆ ಶಂಕೆ ಇದೆ ಎಂದು ತಿಳಿಸಿದ್ದರು.

ಅದರಂತೆ, ಬೇಕಲ ಪೊಲೀಸರು ಇಬ್ಬರ ಮೊಬೈಲ್ ನೆಟ್ವರ್ಕ್ ಟ್ರೇಮ್ ಮಾಡಿದಾಗ, ಚಿತ್ರದುರ್ಗದಲ್ಲಿ ತೋರಿಸಿತ್ತು. ದಂಪತಿ ಚಿತ್ರದುರ್ಗ ಮೂಲದವರಾಗಿದ್ದು, ಬೇಕಲ ರೆಸಾರ್ಟಿನಲ್ಲಿ ಕೆಲಸ ಮಾಡುತ್ತಿದ್ದರು. ಬೇಕಲ ಎಸ್ಐ ರಜನೀಶ್ ನೇತೃತ್ವದ ತಂಡ ಚಿತ್ರದುರ್ಗಕ್ಕೆ ತೆರಳಿ, ದಂಪತಿಯನ್ನು ಬಂಧಿಸಿ ಕರೆತಂದಿದ್ದಾರೆ.
ಕಳವುಗೈದ ಹಣದಲ್ಲಿ ದಂಪತಿ 2.10 ಲಕ್ಷ ರೂ. ಕೊಟ್ಟು ಹೊಸತಾಗಿ ಬೈಕ್ ಖರೀದಿಸಿದ್ದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಅಲ್ಲದೆ, ಎರಡು ಹೊಸ ಮೊಬೈಲ್ ಖರೀದಿಸಿದ್ದರು. ಇವನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಚಿತ್ರದುರ್ಗ ಪೊಲೀಸ್ ಠಾಣೆಯಲ್ಲಿ ಇರಿಸಿದ್ದಾರೆ. ದಂಪತಿಯನ್ನು ಬೇಕಲ ಠಾಣೆಗೆ ಕರೆತಂದಿದ್ದು ವಿಚಾರಣೆ ನಡೆಸುತ್ತಿದ್ದಾರೆ.
The Bekal police arrested a Chitradurga native couple, who were working with Bekal Resort on the accusation of stealing Rs 6 lac from there.Pradeep (26) and his wife Nivedita (25) are the accused who are in police custody. They had allegedly stolen cash from Bekal Home Stay resort on Kafil beach road.The cash which was kept in the cupboard of the resort went missing a few days ago. Owner Pradeep had complained to the police and suspected his staff behind the act. Further, the couple had also absconded from the resort.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am