ಬ್ರೇಕಿಂಗ್ ನ್ಯೂಸ್
11-07-22 03:40 pm HK News Desk ಕ್ರೈಂ
ಕಾಸರಗೋಡು, ಜುಲೈ 11: ಬೇಕಲ ಕೋಟೆ ಬಳಿಯಿರುವ ರೆಸಾರ್ಟ್ ನಲ್ಲಿ ಕಳವು ನಡೆದ ಪ್ರಕರಣಕ್ಕೆ ಸಂಬಂಧಿಸಿ ಚಿತ್ರದುರ್ಗ ಮೂಲದ ಗಂಡ- ಹೆಂಡತಿಯನ್ನು ಬೇಕಲ ಪೊಲೀಸರು ಬಂಧಿಸಿದ್ದಾರೆ.
ಪ್ರದೀಪ್ (26) ಮತ್ತು ಆತನ ಪತ್ನಿ ನಿವೇದಿತಾ (25) ಬಂಧಿತರು. ಬೇಕಲದ ಕಾಫಿಲ್ ಬೀಚ್ ನಲ್ಲಿರುವ ಹೋಮ್ ಸ್ಟೇ ರೆಸಾರ್ಟ್ ನಲ್ಲಿ ಕೆಲಸಕ್ಕಿದ್ದ ದಂಪತಿ, ಅಲ್ಲಿಂದಲೇ 6 ಲಕ್ಷ ನಗದು ಕದ್ದಿರುವ ಬಗ್ಗೆ ಪೊಲೀಸ್ ದೂರು ದಾಖಲಾಗಿತ್ತು. ಕಪ್ ಬೋರ್ಡ್ ಒಳಗಡೆ ಇಟ್ಟಿದ್ದ 6 ಲಕ್ಷ ನಗದು ಕಳವಾದ ಬಗ್ಗೆ ರೆಸಾರ್ಟ್ ಮಾಲೀಕ ಪ್ರದೀಪ್ ಬೇಕಲ ಠಾಣೆಗೆ ದೂರು ನೀಡಿದ್ದರು. ತಮ್ಮಲ್ಲಿಯೇ ಕೆಲಸ ಮಾಡುತ್ತಿದ್ದ ಇಬ್ಬರು ನಾಪತ್ತೆಯಾಗಿದ್ದು, ಅವರ ಬಗ್ಗೆ ಶಂಕೆ ಇದೆ ಎಂದು ತಿಳಿಸಿದ್ದರು.

ಅದರಂತೆ, ಬೇಕಲ ಪೊಲೀಸರು ಇಬ್ಬರ ಮೊಬೈಲ್ ನೆಟ್ವರ್ಕ್ ಟ್ರೇಮ್ ಮಾಡಿದಾಗ, ಚಿತ್ರದುರ್ಗದಲ್ಲಿ ತೋರಿಸಿತ್ತು. ದಂಪತಿ ಚಿತ್ರದುರ್ಗ ಮೂಲದವರಾಗಿದ್ದು, ಬೇಕಲ ರೆಸಾರ್ಟಿನಲ್ಲಿ ಕೆಲಸ ಮಾಡುತ್ತಿದ್ದರು. ಬೇಕಲ ಎಸ್ಐ ರಜನೀಶ್ ನೇತೃತ್ವದ ತಂಡ ಚಿತ್ರದುರ್ಗಕ್ಕೆ ತೆರಳಿ, ದಂಪತಿಯನ್ನು ಬಂಧಿಸಿ ಕರೆತಂದಿದ್ದಾರೆ.
ಕಳವುಗೈದ ಹಣದಲ್ಲಿ ದಂಪತಿ 2.10 ಲಕ್ಷ ರೂ. ಕೊಟ್ಟು ಹೊಸತಾಗಿ ಬೈಕ್ ಖರೀದಿಸಿದ್ದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಅಲ್ಲದೆ, ಎರಡು ಹೊಸ ಮೊಬೈಲ್ ಖರೀದಿಸಿದ್ದರು. ಇವನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಚಿತ್ರದುರ್ಗ ಪೊಲೀಸ್ ಠಾಣೆಯಲ್ಲಿ ಇರಿಸಿದ್ದಾರೆ. ದಂಪತಿಯನ್ನು ಬೇಕಲ ಠಾಣೆಗೆ ಕರೆತಂದಿದ್ದು ವಿಚಾರಣೆ ನಡೆಸುತ್ತಿದ್ದಾರೆ.
The Bekal police arrested a Chitradurga native couple, who were working with Bekal Resort on the accusation of stealing Rs 6 lac from there.Pradeep (26) and his wife Nivedita (25) are the accused who are in police custody. They had allegedly stolen cash from Bekal Home Stay resort on Kafil beach road.The cash which was kept in the cupboard of the resort went missing a few days ago. Owner Pradeep had complained to the police and suspected his staff behind the act. Further, the couple had also absconded from the resort.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm