ಬ್ರೇಕಿಂಗ್ ನ್ಯೂಸ್
11-07-22 06:06 pm Mangalore Correspondent ಕ್ರೈಂ
ಮಂಗಳೂರು, ಜುಲೈ 11: ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ, ಪ್ರೀತಿಸುವ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ವೆನ್ಲಾಕ್ ಆಸ್ಪತ್ರೆಯಲ್ಲಿ ಗುತ್ತಿಗೆ ವೈದ್ಯನಾಗಿರುವ ಡಾ.ಅನುಷ್ ನಾಯ್ಕ ಎಂಬಾತನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
2021ರ ಮಾರ್ಚ್ ತಿಂಗಳಿನಲ್ಲಿ ಬಂಟ್ವಾಳ ತಾಲೂಕಿನ ಮಾಣಿಯಲ್ಲಿರುವ ಸರಕಾರಿ ಆಸ್ಪತ್ರೆಯ ಬಳಿ ಸಿಕ್ಕಿದ್ದ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದು ಪ್ರೀತಿಸುವ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಇತ್ತೀಚೆಗೆ ವೈದ್ಯನಿಗೆ ಬೇರೆ ಮದುವೆಯಾಗಿದ್ದು, ಈ ಬಗ್ಗೆ ಫೋನ್ ಮಾಡಿದ್ದ ಹುಡುಗಿಯನ್ನು ಗದರಿಸಿದ್ದಾನೆ. ಅಲ್ಲದೆ, ಫೋನ್ ಕಟ್ ಮಾಡದಿದ್ದರೆ ನೀನು ಮತ್ತು ನಿನ್ನ ತಂದೆ, ತಾಯಿಯನ್ನು ಕೊಂದು ಹಾಕುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಬಾಲಕಿಯ ತಾಯಿ ಜುಲೈ 10ರಂದು ವಿಟ್ಲ ಠಾಣೆಗೆ ದೂರು ನೀಡಿದ್ದರು.
ಅದರಂತೆ, ವಿಟ್ಲ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಇಂದು ವಿಟ್ಲ ಪೊಲೀಸರು ಮಾಣಿ ಬಳಿಯಿಂದ ಆರೋಪಿ ವೈದ್ಯನನ್ನು ಬಂಧಿಸಿದ್ದಾರೆ. ಅನುಷ್ ನಾಯ್ಕ ಮಾಣಿ ಗ್ರಾಮದ ನಿವಾಸಿಯಾಗಿದ್ದು, ಮಂಗಳೂರಿನ ವೆನ್ಲಾಕ್ ಸರಕಾರಿ ಜಿಲ್ಲಾಸ್ಪತ್ರೆಯಲ್ಲಿ ಗುತ್ತಿಗೆ ಆಧಾರದಲ್ಲಿ ವೈದ್ಯನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ. ಈ ಹಿಂದೆ ಒಂದು ಮದುವೆಯಾಗಿ ಆಕೆಯನ್ನು ತ್ಯಜಿಸಿದ್ದ ಅನುಷ್ ನಾಯ್ಕ ಇತ್ತೀಚೆಗೆ ಎರಡನೇ ಮದುವೆಯಾಗಿದ್ದ. ಬಾಲಕಿಯು ಒಂದು ವರ್ಷದ ಹಿಂದಿನ ವಿಚಾರಕ್ಕೆ ಈಗ ಪೊಲೀಸ್ ದೂರು ನೀಡಿದ್ದು, ಆರೋಪಿ ವೈದ್ಯ ಜೈಲು ಪಾಲಾಗುವಂತೆ ಮಾಡಿದ್ದಾಳೆ.
Mangalore Wenlock doctor arrested by Vitla police for sexual harassment. The arrested has been identified as Dr Anush.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm