ಬ್ರೇಕಿಂಗ್ ನ್ಯೂಸ್
11-07-22 06:06 pm Mangalore Correspondent ಕ್ರೈಂ
ಮಂಗಳೂರು, ಜುಲೈ 11: ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ, ಪ್ರೀತಿಸುವ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ವೆನ್ಲಾಕ್ ಆಸ್ಪತ್ರೆಯಲ್ಲಿ ಗುತ್ತಿಗೆ ವೈದ್ಯನಾಗಿರುವ ಡಾ.ಅನುಷ್ ನಾಯ್ಕ ಎಂಬಾತನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
2021ರ ಮಾರ್ಚ್ ತಿಂಗಳಿನಲ್ಲಿ ಬಂಟ್ವಾಳ ತಾಲೂಕಿನ ಮಾಣಿಯಲ್ಲಿರುವ ಸರಕಾರಿ ಆಸ್ಪತ್ರೆಯ ಬಳಿ ಸಿಕ್ಕಿದ್ದ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದು ಪ್ರೀತಿಸುವ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಇತ್ತೀಚೆಗೆ ವೈದ್ಯನಿಗೆ ಬೇರೆ ಮದುವೆಯಾಗಿದ್ದು, ಈ ಬಗ್ಗೆ ಫೋನ್ ಮಾಡಿದ್ದ ಹುಡುಗಿಯನ್ನು ಗದರಿಸಿದ್ದಾನೆ. ಅಲ್ಲದೆ, ಫೋನ್ ಕಟ್ ಮಾಡದಿದ್ದರೆ ನೀನು ಮತ್ತು ನಿನ್ನ ತಂದೆ, ತಾಯಿಯನ್ನು ಕೊಂದು ಹಾಕುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಬಾಲಕಿಯ ತಾಯಿ ಜುಲೈ 10ರಂದು ವಿಟ್ಲ ಠಾಣೆಗೆ ದೂರು ನೀಡಿದ್ದರು.
ಅದರಂತೆ, ವಿಟ್ಲ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಇಂದು ವಿಟ್ಲ ಪೊಲೀಸರು ಮಾಣಿ ಬಳಿಯಿಂದ ಆರೋಪಿ ವೈದ್ಯನನ್ನು ಬಂಧಿಸಿದ್ದಾರೆ. ಅನುಷ್ ನಾಯ್ಕ ಮಾಣಿ ಗ್ರಾಮದ ನಿವಾಸಿಯಾಗಿದ್ದು, ಮಂಗಳೂರಿನ ವೆನ್ಲಾಕ್ ಸರಕಾರಿ ಜಿಲ್ಲಾಸ್ಪತ್ರೆಯಲ್ಲಿ ಗುತ್ತಿಗೆ ಆಧಾರದಲ್ಲಿ ವೈದ್ಯನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ. ಈ ಹಿಂದೆ ಒಂದು ಮದುವೆಯಾಗಿ ಆಕೆಯನ್ನು ತ್ಯಜಿಸಿದ್ದ ಅನುಷ್ ನಾಯ್ಕ ಇತ್ತೀಚೆಗೆ ಎರಡನೇ ಮದುವೆಯಾಗಿದ್ದ. ಬಾಲಕಿಯು ಒಂದು ವರ್ಷದ ಹಿಂದಿನ ವಿಚಾರಕ್ಕೆ ಈಗ ಪೊಲೀಸ್ ದೂರು ನೀಡಿದ್ದು, ಆರೋಪಿ ವೈದ್ಯ ಜೈಲು ಪಾಲಾಗುವಂತೆ ಮಾಡಿದ್ದಾಳೆ.
Mangalore Wenlock doctor arrested by Vitla police for sexual harassment. The arrested has been identified as Dr Anush.
13-01-26 12:57 pm
Bangalore Correspondent
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm