ಬ್ರೇಕಿಂಗ್ ನ್ಯೂಸ್
11-07-22 06:06 pm Mangalore Correspondent ಕ್ರೈಂ
ಮಂಗಳೂರು, ಜುಲೈ 11: ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ, ಪ್ರೀತಿಸುವ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ವೆನ್ಲಾಕ್ ಆಸ್ಪತ್ರೆಯಲ್ಲಿ ಗುತ್ತಿಗೆ ವೈದ್ಯನಾಗಿರುವ ಡಾ.ಅನುಷ್ ನಾಯ್ಕ ಎಂಬಾತನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
2021ರ ಮಾರ್ಚ್ ತಿಂಗಳಿನಲ್ಲಿ ಬಂಟ್ವಾಳ ತಾಲೂಕಿನ ಮಾಣಿಯಲ್ಲಿರುವ ಸರಕಾರಿ ಆಸ್ಪತ್ರೆಯ ಬಳಿ ಸಿಕ್ಕಿದ್ದ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದು ಪ್ರೀತಿಸುವ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಇತ್ತೀಚೆಗೆ ವೈದ್ಯನಿಗೆ ಬೇರೆ ಮದುವೆಯಾಗಿದ್ದು, ಈ ಬಗ್ಗೆ ಫೋನ್ ಮಾಡಿದ್ದ ಹುಡುಗಿಯನ್ನು ಗದರಿಸಿದ್ದಾನೆ. ಅಲ್ಲದೆ, ಫೋನ್ ಕಟ್ ಮಾಡದಿದ್ದರೆ ನೀನು ಮತ್ತು ನಿನ್ನ ತಂದೆ, ತಾಯಿಯನ್ನು ಕೊಂದು ಹಾಕುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಬಾಲಕಿಯ ತಾಯಿ ಜುಲೈ 10ರಂದು ವಿಟ್ಲ ಠಾಣೆಗೆ ದೂರು ನೀಡಿದ್ದರು.
ಅದರಂತೆ, ವಿಟ್ಲ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಇಂದು ವಿಟ್ಲ ಪೊಲೀಸರು ಮಾಣಿ ಬಳಿಯಿಂದ ಆರೋಪಿ ವೈದ್ಯನನ್ನು ಬಂಧಿಸಿದ್ದಾರೆ. ಅನುಷ್ ನಾಯ್ಕ ಮಾಣಿ ಗ್ರಾಮದ ನಿವಾಸಿಯಾಗಿದ್ದು, ಮಂಗಳೂರಿನ ವೆನ್ಲಾಕ್ ಸರಕಾರಿ ಜಿಲ್ಲಾಸ್ಪತ್ರೆಯಲ್ಲಿ ಗುತ್ತಿಗೆ ಆಧಾರದಲ್ಲಿ ವೈದ್ಯನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ. ಈ ಹಿಂದೆ ಒಂದು ಮದುವೆಯಾಗಿ ಆಕೆಯನ್ನು ತ್ಯಜಿಸಿದ್ದ ಅನುಷ್ ನಾಯ್ಕ ಇತ್ತೀಚೆಗೆ ಎರಡನೇ ಮದುವೆಯಾಗಿದ್ದ. ಬಾಲಕಿಯು ಒಂದು ವರ್ಷದ ಹಿಂದಿನ ವಿಚಾರಕ್ಕೆ ಈಗ ಪೊಲೀಸ್ ದೂರು ನೀಡಿದ್ದು, ಆರೋಪಿ ವೈದ್ಯ ಜೈಲು ಪಾಲಾಗುವಂತೆ ಮಾಡಿದ್ದಾಳೆ.
Mangalore Wenlock doctor arrested by Vitla police for sexual harassment. The arrested has been identified as Dr Anush.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm