ಬ್ರೇಕಿಂಗ್ ನ್ಯೂಸ್
11-07-22 06:06 pm Mangalore Correspondent ಕ್ರೈಂ
ಮಂಗಳೂರು, ಜುಲೈ 11: ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ, ಪ್ರೀತಿಸುವ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ವೆನ್ಲಾಕ್ ಆಸ್ಪತ್ರೆಯಲ್ಲಿ ಗುತ್ತಿಗೆ ವೈದ್ಯನಾಗಿರುವ ಡಾ.ಅನುಷ್ ನಾಯ್ಕ ಎಂಬಾತನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
2021ರ ಮಾರ್ಚ್ ತಿಂಗಳಿನಲ್ಲಿ ಬಂಟ್ವಾಳ ತಾಲೂಕಿನ ಮಾಣಿಯಲ್ಲಿರುವ ಸರಕಾರಿ ಆಸ್ಪತ್ರೆಯ ಬಳಿ ಸಿಕ್ಕಿದ್ದ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದು ಪ್ರೀತಿಸುವ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಇತ್ತೀಚೆಗೆ ವೈದ್ಯನಿಗೆ ಬೇರೆ ಮದುವೆಯಾಗಿದ್ದು, ಈ ಬಗ್ಗೆ ಫೋನ್ ಮಾಡಿದ್ದ ಹುಡುಗಿಯನ್ನು ಗದರಿಸಿದ್ದಾನೆ. ಅಲ್ಲದೆ, ಫೋನ್ ಕಟ್ ಮಾಡದಿದ್ದರೆ ನೀನು ಮತ್ತು ನಿನ್ನ ತಂದೆ, ತಾಯಿಯನ್ನು ಕೊಂದು ಹಾಕುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಬಾಲಕಿಯ ತಾಯಿ ಜುಲೈ 10ರಂದು ವಿಟ್ಲ ಠಾಣೆಗೆ ದೂರು ನೀಡಿದ್ದರು.
ಅದರಂತೆ, ವಿಟ್ಲ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಇಂದು ವಿಟ್ಲ ಪೊಲೀಸರು ಮಾಣಿ ಬಳಿಯಿಂದ ಆರೋಪಿ ವೈದ್ಯನನ್ನು ಬಂಧಿಸಿದ್ದಾರೆ. ಅನುಷ್ ನಾಯ್ಕ ಮಾಣಿ ಗ್ರಾಮದ ನಿವಾಸಿಯಾಗಿದ್ದು, ಮಂಗಳೂರಿನ ವೆನ್ಲಾಕ್ ಸರಕಾರಿ ಜಿಲ್ಲಾಸ್ಪತ್ರೆಯಲ್ಲಿ ಗುತ್ತಿಗೆ ಆಧಾರದಲ್ಲಿ ವೈದ್ಯನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ. ಈ ಹಿಂದೆ ಒಂದು ಮದುವೆಯಾಗಿ ಆಕೆಯನ್ನು ತ್ಯಜಿಸಿದ್ದ ಅನುಷ್ ನಾಯ್ಕ ಇತ್ತೀಚೆಗೆ ಎರಡನೇ ಮದುವೆಯಾಗಿದ್ದ. ಬಾಲಕಿಯು ಒಂದು ವರ್ಷದ ಹಿಂದಿನ ವಿಚಾರಕ್ಕೆ ಈಗ ಪೊಲೀಸ್ ದೂರು ನೀಡಿದ್ದು, ಆರೋಪಿ ವೈದ್ಯ ಜೈಲು ಪಾಲಾಗುವಂತೆ ಮಾಡಿದ್ದಾಳೆ.
Mangalore Wenlock doctor arrested by Vitla police for sexual harassment. The arrested has been identified as Dr Anush.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm