ಬ್ರೇಕಿಂಗ್ ನ್ಯೂಸ್
18-07-22 12:58 pm Mangalore Correspondent ಕ್ರೈಂ
ಮಂಗಳೂರು, ಜುಲೈ 18 : ತರಕಾರಿ ಅಂಗಡಿಗೆ ಬರುತ್ತಿದ್ದ ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಕಾವೂರಿನ ಪಂಜಿಮೊಗರು ನಿವಾಸಿಯನ್ನು ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮೂಲತಃ ಬೆಳ್ತಂಗಡಿ ತಾಲೂಕಿನ ಉಜಿರೆ ನಿವಾಸಿಯಾಗಿದ್ದು ಪಂಜಿಮೊಗರಿನಲ್ಲಿ ವಾಸ್ತವ್ಯ ಇದ್ದ ಮುಸ್ತಫಾ (35) ಬಂಧಿತ ಆರೋಪಿ. ಈತ ಕಾವೂರಿನ ಗಾಂಧಿ ನಗರದಲ್ಲಿ ತರಕಾರಿ ಅಂಗಡಿ ಹೊಂದಿದ್ದು ಅಲ್ಲಿಗೆ ಬರುತ್ತಿದ್ದ 15 ವರ್ಷದ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಕಿರುಕುಳ ನೀಡಿದ್ದಾನೆ.
ವಿದ್ಯಾರ್ಥಿನಿಗೆ ಜೂನ್ 10 ರಿಂದ ಜುಲೈ 8 ರ ವರೆಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿ ಮಹಿಳಾ ಠಾಣೆಯಲ್ಲಿ ದೂರು ನೀಡಲಾಗಿದೆ. ಜುಲೈ 8ರಂದು ರಾತ್ರಿ ವಿದ್ಯಾರ್ಥಿನಿ ಮನೆಯಲ್ಲಿ ಒಬ್ಬಳೇ ಇರುವುದನ್ನು ತಿಳಿದು ಆರೋಪಿ ನುಗ್ಗಿದ್ದು ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ಬಗ್ಗೆ ಮನೆಯವರಲ್ಲಿ ಹೇಳಬೇಡ. ಹೇಳಿದರೆ ಜೀವ ಸಹಿತ ಬಿಡಲ್ಲ ಎಂದು ಬೆದರಿಸಿದ್ದ. ಇದರಿಂದ ಹೆದರಿದ ವಿದ್ಯಾರ್ಥಿನಿ ಮನೆಯಲ್ಲಿ ವಿಷಯ ತಿಳಿಸಿರಲಿಲ್ಲ. ಈ ನಡುವೆ, ಮೊಬೈಲಿನಲ್ಲಿ ವಿಡಿಯೋ ಕರೆ ಮಾಡುವಂತೆ ಪೀಡಿಸುತ್ತಿದ್ದು ತಾಯಿಗೆ ಸಂಶಯ ಬಂದು ವಿಚಾರಿಸಿದಾಗ ಘಟನೆ ಬೆಳಕಿಗೆ ಬಂದಿದೆ.
ತಾಯಿ ಬಳಿಕ ಮಗಳನ್ನು ಕರೆದೊಯ್ದು ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಆರೋಪಿಯನ್ನು ಬಂಧಿಸಿ ಪೋಕ್ಸೋ ಕೇಸು ದಾಖಲಿಸಿದ್ದಾರೆ.
Mangalore Sexual harassment of minor girl by Vegetable vendor in Kavoor, accused arrested under POCSO act by Mangalore Police. The arrested has been identified as Mustafa.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am