ಬ್ರೇಕಿಂಗ್ ನ್ಯೂಸ್
21-07-22 06:03 pm Mangalore Correspondent ಕ್ರೈಂ
ಪುತ್ತೂರು, ಜುಲೈ 21: ಎರಡು ದಿನಗಳ ಹಿಂದೆ ಬೆಳ್ಳಾರೆ ಬಳಿ ಮಾರಣಾಂತಿಕ ಹಲ್ಲೆಗೊಳಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಸೂದ್ ಎಂಬ ಯುವಕ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ.
ಮಸೂದ್ (18) ಕಾಸರಗೋಡು ಜಿಲ್ಲೆಯ ಮೊಗ್ರಾಲ್ ಪುತ್ತೂರು ನಿವಾಸಿಯಾಗಿದ್ದು, ಒಂದು ತಿಂಗಳ ಹಿಂದೆ ಸುಳ್ಯ ತಾಲೂಕಿನ ಕಳಂಜ ಗ್ರಾಮದ ಅಜ್ಜನ ಮನೆಗೆ ಬಂದಿದ್ದು ಸ್ಥಳೀಯವಾಗಿ ಕೂಲಿ ಕೆಲಸಕ್ಕೆ ಹೋಗುತ್ತಿದ್ದ. ಜುಲೈ 19ರಂದು ಸಂಜೆ ಮಸೂದ್ ಪೇಟೆಯಲ್ಲಿದ್ದಾಗ, ಸುಧೀರ್ ಮತ್ತಿತರರ ಜೊತೆ ಮಾತಿಗೆ ಮಾತು ಬೆಳೆದು ಹೊಡೆದಾಟ ನಡೆಸಿದ್ದರು. ಇದೇ ವಿಚಾರದಲ್ಲಿ ಮಸೂದ್ ನನ್ನು ಮಾತನಾಡುವುದಕ್ಕೆ ಕರೆತರುವಂತೆ ಕಳಂಜ ನಿವಾಸಿ ಇಬ್ರಾಹಿಂ ಶನೀಫ್ ಎಂಬಾತನಿಗೆ ಅಭಿಲಾಷ್, ಸುಧೀರ್ ಮತ್ತು ಇನ್ನಿತರರು ಹೇಳಿದ್ದರು. ಇವತ್ತೇ ಮಾತನಾಡಿ ಮುಗಿಸೋಣ ಎಂದು ಕರೆತರಲು ಸೂಚಿಸಿದ್ದರು.


ಇದರಂತೆ, ಇಬ್ರಾಹಿಂ ಶನೀಫ್ ಅದೇ ದಿನ ರಾತ್ರಿ 11 ಗಂಟೆಗೆ ಮಸೂದ್ ನನ್ನು ಕರೆತಂದಿದ್ದು, ಮಾತುಕತೆ ಮೂಲಕ ವಿವಾದ ಬಗೆಹರಿಸಲು ಮುಂದಾಗಿದ್ದರು. ಆದರೆ, ಈ ವೇಳೆ ಆರೋಪಿಗಳು ಒಟ್ಟು ಸೇರಿ ಮಸೂದ್ ಮೇಲೆ ಹಲ್ಲೆ ನಡೆಸಿದ್ದಾರೆ. ಆನಂತರ, ತಳ್ಳಾಟ ನಡೆದಿದ್ದು ಇಬ್ರಾಹಿಂ, ಮಸೂದ್ ಮೇಲೆ ಹಲ್ಲೆ ನಡೆಸದಂತೆ ಪ್ರಯತ್ನ ಪಟ್ಟಿದ್ದು, ಈ ವೇಳೆ ನೆಲಕ್ಕೆ ಬಿದ್ದ ಇಬ್ಬರ ಮೇಲೆ ಆರೋಪಿಗಳು ಕಾಲಿನಿಂದ ತುಳಿದು ಹಾಕಿದ್ದರು. ಅಲ್ಲದೆ, ನೆಲಕ್ಕೆ ಬಿದ್ದ ಮಸೂದ್ ತಲೆಗೆ ಅಭಿಲಾಷ್ ಎಂಬಾತ ಬಾಟಲಿಯಲ್ಲಿ ಹಲ್ಲೆ ನಡೆಸಿದ್ದಾನೆ. ಆನಂತರ, ಇಬ್ರಾಹಿಂ ಮತ್ತು ಮಸೂದ್ ಓಡಿ ತಪ್ಪಿಸಿಕೊಂಡಿದ್ದರು. ಬಳಿಕ ಹುಡುಕಾಟ ನಡೆಸಿದಾಗ, ಮಸೂದ್ ಅಲ್ಲಿಯೇ ಸನಿಹದಲ್ಲಿ ಅಬುಬಕ್ಕರ್ ಎಂಬವರ ಮನೆ ಬಳಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದು ತೀವ್ರ ರಕ್ತಸ್ರಾವಕ್ಕೆ ಒಳಗಾಗಿದ್ದ. ಆನಂತರ, ಇಬ್ರಾಹಿಂ ಮತ್ತು ಇತರರು ಸೇರಿ ಸುಳ್ಯ ಕೆವಿಜಿ ಆಸ್ಪತ್ರೆಗೆ ಮಸೂದನ್ನು ಕರೆದೊಯ್ದಿದ್ದರು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಗೆ ದಾಖಲಿಸಲಾಗಿತ್ತು.


ಘಟನೆ ಸಂಬಂಧಿಸಿ ಬೆಳ್ಳಾರೆ ಪೊಲೀಸರು ಕೊಲೆಯತ್ನ ಪ್ರಕರಣ ದಾಖಲಿಸಿ, ಅಭಿಲಾಷ್, ಸುನಿಲ್, ಸುಧೀರ್, ಶಿವ, ರಂಜಿತ್, ಸದಾಶಿವ, ಜಿಮ್ ರಂಜಿತ್, ಭಾಸ್ಕರ ಎಂಬ ಎಂಟು ಮಂದಿಯನ್ನು ಬಂಧಿಸಿದ್ದರು. ಗಾಯಗೊಂಡಿದ್ದ ಯುವಕ ಮಸೂದ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದು, ಆರೋಪಿಗಳ ವಿರುದ್ಧ ಕೊಲೆ ಪ್ರಕರಣ ದಾಖಲಾಗಲಿದೆ.
A day after a gang attacked a youth brutally over a trivial reason in Kalenja of Bellare, he died after failing to respond to the treatment in a hospital. The deceased youth is Masood (18). It may be recalled that a gang of eight members had attacked Masood on July 19 night in Vishnunagara of Kalanja village. Masood was a resident of Mogral Puthur in Kasargod. As he was severely injured after he was assaulted with a soda bottle, he was shifted to a hospital in Mangaluru. He was treated in the Intensive Care Unit in a private hospital but he succumbed to the injury.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 12:42 pm
HK News Staffer
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm