ಬ್ರೇಕಿಂಗ್ ನ್ಯೂಸ್
22-07-22 10:32 pm HK News Desk ಕ್ರೈಂ
ಜಮ್ಶೆಡ್ಪುರ ,ಜುಲೈ 22: ಮಹಿಳಾ ಪೊಲೀಸ್ ಕಾನ್ಸ್ಟೆಬಲ್, 10 ವರ್ಷದ ಮಗಳು ಮತ್ತು ತಾಯಿಯ ಮೃತದೇಹ ನಿಗೂಢ ರೀತಿಯಲ್ಲಿ ಫ್ಲ್ಯಾಟ್ನಲ್ಲಿ ಪತ್ತೆಯಾಗಿರುವ ಘಟನೆ ಜಾರ್ಖಂಡ್ನ ಜಮ್ಶೆಡ್ಪುರದಲ್ಲಿ ನಡೆದಿದೆ.
ಸವಿತಾ ರಾಣಿ ಹೆಂಬ್ರಾಮ್, ತಾಯಿ ಲಖಿಯಾ ಹೆಂಬ್ರಾಮ್ ಮತ್ತು ಸವಿತಾ ಅವರ ಮಗಳ ಮೃತದೇಹ ಪತ್ತೆಯಾಗಿದ್ದು, ಕೊಲೆಯಾಗಿರುವ ಶಂಕೆ ಉಂಟಾಗಿದೆ.
ಮಹಿಳಾ ಪೊಲೀಸ್ ಕಾನ್ಸ್ಟೆಬಲ್, 10 ವರ್ಷದ ಮಗಳು ಮತ್ತು ತಾಯಿಯ ಮೃತದೇಹಗಳು ಪೊಲೀಸ್ ಕ್ವಾರ್ಟ್ರಸ್ನಲ್ಲಿಯೇ ಪತ್ತೆಯಾಗಿದ್ದು ಪ್ರಕರಣ ಸಂಚಲನ ಉಂಟುಮಾಡಿದೆ. ಸುದ್ದಿ ತಿಳಿದ ತಕ್ಷಣ ಪೊಲೀಸ್ ಸಿಬ್ಬಂದಿ ಸ್ಥಳದಲ್ಲಿ ಬೀಡುಬಿಟ್ಟಿದ್ದು, ವಿಧಿವಿಜ್ಞಾನ ತಂಡ ತನಿಖೆ ಕೈಗೊಂಡಿದೆ. ಮೂವರು ಕೊಲೆ ಆಗಿರಬಹುದೆಂದು ಪೊಲೀಸ್ ಅಧಿಕಾರಿಗಳು ಶಂಕಿಸಿದ್ದಾರೆ.
ನಕ್ಸಲ್ ದಾಳಿಯಲ್ಲಿ ಪತಿ ಸಾವನ್ನಪ್ಪಿದ ನಂತರ ಅನುಕಂಪದ ಆಧಾರದ ಮೇಲೆ ಸವಿತಾ ಅವರಿಗೆ ಕೆಲಸ ಸಿಕ್ಕಿತ್ತು. ಅವರನ್ನು ಎಸ್ಎಸ್ಪಿ ಕಚೇರಿಯಲ್ಲಿ ನಿಯೋಜನೆ ಮಾಡಲಾಗಿತ್ತು. ತಾಯಿ ಮತ್ತು ಮಗಳೊಂದಿಗೆ ವಾಸಿಸುತ್ತಿದ್ದ ಸವಿತಾ ಮನೆಗೆ ಕಳೆದ ಎರಡು ದಿನಗಳಿಂದ ಹೊರಗಿನಿಂದ ಬೀಗ ಹಾಕಲಾಗಿತ್ತು. ಮನೆಗೆ ಬೀಗ ಹಾಕಿದ್ದರಿಂದ ಅಕ್ಕಪಕ್ಕದ ಜನರಿಗೆ ಅನುಮಾನ ಮೂಡಿದೆ. ಗುರುವಾರ ಮನೆಯಿಂದ ದುರ್ವಾಸನೆ ಬರುತ್ತಿದ್ದಾಗ ಜನರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮೂವರ ಮೃತದೇಹಗಳು ಕೋಣೆಯಲ್ಲಿ ದೊರೆತಿವೆ. ದೇಹದ ಮೇಲೆ ದಾಳಿಯ ಗುರುತುಗಳಿವೆ. ಮೇಲ್ನೋಟಕ್ಕೆ ಇದೊಂದು ಕೊಲೆ ಪ್ರಕರಣ ಎಂದು ತೋರುತ್ತದೆ. ಎಲ್ಲಾ ಆಯಾಮಗಳಲ್ಲಿಯೂ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
The body of a woman, her mother and her daughter was recovered from the locked house in Police Line staff quarter under Golmuri Police Station jurisdiction late on Thursday night.The deceased have been identified as Constable Savita Mahato posted in SSP Office, her mother and daughter.Police suspect it as a case of murder as the house was locked from outside.As per reports, the house of Savita was found locked from the last couple of days and following complaints by the neighbours of a foul smell emanating from the closed house of woman cop Savita Mahato, police reached the spot and initiated investigation into a possible triple murder case.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm