ಬ್ರೇಕಿಂಗ್ ನ್ಯೂಸ್
02-10-20 06:32 pm Udupi Reporter ಕ್ರೈಂ
ಉಡುಪಿ, ಅ.2: ಹಿರಿಯಡ್ಕ ಪೇಟೆಯಲ್ಲಿ ಸೆ.24ರಂದು ಹಾಡಹಗಲೇ ನಡೆದ ರೌಡಿ ಶೀಟರ್ ಕಿಶನ್ ಹೆಗ್ಡೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಈ ಮೂಲಕ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಒಟ್ಟು ಒಂಭತ್ತಕ್ಕೇರಿದೆ.
ಕಾಟಿಪಳ್ಳ ಒಂದನೆ ಬ್ಲಾಕ್ನ ಸಚಿನ್ ಡಿ.ಅಮೀನ್(37), ಮೂರನೆ ಬ್ಲಾಕ್ನ ಅಕ್ಷಯ್ ಶೆಟ್ಟಿಗಾರ್(26), ಜೋಕಟ್ಟೆಯ ಚೇತನ್ ಯಾನೆ ಚೇತು (23), ಕಾಟಿಪಳ್ಳ ಒಂದನೆ ಬ್ಲಾಕ್ನ ಸಂಜಿತ್ ಯಾನೆ ಶೈಲೇಶ್(19) ಬಂಧಿತ ಆರೋಪಿಗಳು.

ಇವರನ್ನು ಅ.2ರಂದು ಸುರತ್ಕಲ್ ಬಳಿ ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕ ಅನಂತ ಪದ್ಮನಾಭ ಹಾಗೂ ಬ್ರಹ್ಮಾವರ ಎಸ್ಸೈ ರಾಘವೇಂದ್ರ ಸಿ. ನೇತೃತ್ವದ ವಿಶೇಷ ತಂಡ ಬಂಧಿಸಿದೆ. ಬಂಧಿತರ ಪೈಕಿ ಸಚಿನ್ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ರೌಡಿ ಶೀಟರ್ ಆಗಿದ್ದು, ಆತನ ವಿರುದ್ಧ ಕೊಲೆ, ಕೊಲೆಗೆ ಯತ್ನ, ಅಪರಹಣ, ಹಲ್ಲೆ, ಇಸಿ ಕಾಯಿದೆಯಡಿ ಪ್ರಕರಣಗಳು ದಾಖಲಾಗಿವೆ.
ಬಂಧಿತರಿಂದ ಕೃತ್ಯಕ್ಕೆ ಬಳಸಿದ ಮಾರುತಿ ಸ್ವಿಫ್ಟ್ ಕಾರು, ಮಾರುತಿ ರಿಟ್ಝ್ ಕಾರು, ಇನೋವಾ ಕಾರು, ಎರಡು ಪಲ್ಸರ್ ಬೈಕ್, ಮಂಡೆ ಕತ್ತಿ, ಸುತ್ತಿಗೆ, ತಲವಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇವುಗಳ ಒಟ್ಟು ಮೌಲ್ಯ 19.50 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಈ ಪ್ರಕರಣದಲ್ಲಿ ಈಗಾಗಲೇ ಬಂಧಿತರ ಪೈಕಿ ಮೂವರು ನ್ಯಾಯಾಂಗ ಬಂಧನ, ಇಬ್ಬರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
13-03-26 04:18 pm
HK News Staffer
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
13-03-26 10:04 pm
Mangaluru Staffer
ಬಿಲ್ ಕಟ್ಟದ ನೆಪದಲ್ಲಿ ಕೊರಗ ಸಮುದಾಯಕ್ಕೆ ನೀರಿನ ಸಂಪ...
13-03-26 09:58 pm
ರಸ್ತೆ ಬದಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮ ಜರುಗಿ...
13-03-26 09:38 pm
ಭ್ರಷ್ಟ ಅಬಕಾರಿ ಡೀಸಿ ಶ್ರೀನಿವಾಸ್ ; ಲೋಕಾಯುಕ್ತ ದಾಳ...
13-03-26 08:27 pm
Shiradi Ghat Accident, Mangalore: ಶಿರಾಡಿ - ಗು...
13-03-26 05:41 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm