ಬ್ರೇಕಿಂಗ್ ನ್ಯೂಸ್
02-10-20 06:32 pm Udupi Reporter ಕ್ರೈಂ
ಉಡುಪಿ, ಅ.2: ಹಿರಿಯಡ್ಕ ಪೇಟೆಯಲ್ಲಿ ಸೆ.24ರಂದು ಹಾಡಹಗಲೇ ನಡೆದ ರೌಡಿ ಶೀಟರ್ ಕಿಶನ್ ಹೆಗ್ಡೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಈ ಮೂಲಕ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಒಟ್ಟು ಒಂಭತ್ತಕ್ಕೇರಿದೆ.
ಕಾಟಿಪಳ್ಳ ಒಂದನೆ ಬ್ಲಾಕ್ನ ಸಚಿನ್ ಡಿ.ಅಮೀನ್(37), ಮೂರನೆ ಬ್ಲಾಕ್ನ ಅಕ್ಷಯ್ ಶೆಟ್ಟಿಗಾರ್(26), ಜೋಕಟ್ಟೆಯ ಚೇತನ್ ಯಾನೆ ಚೇತು (23), ಕಾಟಿಪಳ್ಳ ಒಂದನೆ ಬ್ಲಾಕ್ನ ಸಂಜಿತ್ ಯಾನೆ ಶೈಲೇಶ್(19) ಬಂಧಿತ ಆರೋಪಿಗಳು.

ಇವರನ್ನು ಅ.2ರಂದು ಸುರತ್ಕಲ್ ಬಳಿ ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕ ಅನಂತ ಪದ್ಮನಾಭ ಹಾಗೂ ಬ್ರಹ್ಮಾವರ ಎಸ್ಸೈ ರಾಘವೇಂದ್ರ ಸಿ. ನೇತೃತ್ವದ ವಿಶೇಷ ತಂಡ ಬಂಧಿಸಿದೆ. ಬಂಧಿತರ ಪೈಕಿ ಸಚಿನ್ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ರೌಡಿ ಶೀಟರ್ ಆಗಿದ್ದು, ಆತನ ವಿರುದ್ಧ ಕೊಲೆ, ಕೊಲೆಗೆ ಯತ್ನ, ಅಪರಹಣ, ಹಲ್ಲೆ, ಇಸಿ ಕಾಯಿದೆಯಡಿ ಪ್ರಕರಣಗಳು ದಾಖಲಾಗಿವೆ.
ಬಂಧಿತರಿಂದ ಕೃತ್ಯಕ್ಕೆ ಬಳಸಿದ ಮಾರುತಿ ಸ್ವಿಫ್ಟ್ ಕಾರು, ಮಾರುತಿ ರಿಟ್ಝ್ ಕಾರು, ಇನೋವಾ ಕಾರು, ಎರಡು ಪಲ್ಸರ್ ಬೈಕ್, ಮಂಡೆ ಕತ್ತಿ, ಸುತ್ತಿಗೆ, ತಲವಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇವುಗಳ ಒಟ್ಟು ಮೌಲ್ಯ 19.50 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಈ ಪ್ರಕರಣದಲ್ಲಿ ಈಗಾಗಲೇ ಬಂಧಿತರ ಪೈಕಿ ಮೂವರು ನ್ಯಾಯಾಂಗ ಬಂಧನ, ಇಬ್ಬರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
18-02-26 06:03 pm
HK News Desk
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:19 am
Mangaluru Staffer
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
18-02-26 01:52 pm
Udupi Staffer
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm