ಬ್ರೇಕಿಂಗ್ ನ್ಯೂಸ್
23-07-22 05:59 pm HK News Desk ಕ್ರೈಂ
ನವದೆಹಲಿ, ಜುಲೈ 23: ರಾಷ್ಟ್ರ ರಾಜಧಾನಿ ದೆಹಲಿಯ ಪೈಶಾಚಿಕ ಕೃತ್ಯವೊಂದು ವರದಿಯಾಗಿದೆ. ಹೊಸ ರೈಲು ನಿಲ್ದಾಣದ ರೈಲ್ವೆ ಫ್ಲಾಟ್ಫಾರ್ಮ್ನಲ್ಲಿ 30 ವರ್ಷದ ಮಹಿಳೆಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಈ ಸಂಬಂಧ ನಾಲ್ವರು ರೈಲ್ವೆ ಸಿಬ್ಬಂದಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಸತೀಶ್ ಕುಮಾರ್ (35), ವಿನೋದ್ ಕುಮಾರ್ (38), ಮಂಗಲ್ ಚಾಂದ್ (33) ಹಾಗೂ ಜಗದೀಶ್ ಚಾಂದ್ (37) ಎಂದು ಗುರುತಿಸಲಾಗಿದೆ. ನಾಲ್ವರು ಆರೋಪಿಗಳು ಕೂಡ ರೈಲ್ವೆ ಎಲೆಕ್ಟ್ರಿಕಲ್ ವಿಭಾಗದ ಉದ್ಯೋಗಿಗಳು. ಗುರುವಾರ ತಡರಾತ್ರಿ ಪ್ಲಾಟ್ಫಾರ್ಮ್ನಲ್ಲಿರುವ ರೈಲು ದೀಪದ ಗುಡಿಸಲಿನೊಳಗೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಇಬ್ಬರು ಆರೋಪಿಗಳು ಹೊರಗಡೆ ನಿಂತು ಕಾವಲು ಕಾದರೆ, ಇನ್ನುಳಿದ ಇಬ್ಬರು ಆರೋಪಿಗಳು ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.
ಸಂತ್ರಸ್ತ ಮಹಿಳೆ ಬೆಳಗಿನ ಜಾವ 3.27ಕ್ಕೆ ಠಾಣೆಗೆ ಕರೆ ಮಾಡಿ, ಘಟನೆಯ ಬಗ್ಗೆ ಮಾಹಿತಿ ನೀಡಿದಳು. ಪೊಲೀಸರು ತಕ್ಷಣ ಘಟನಾ ಸ್ಥಳಕ್ಕೆ ತೆರಳಿ ಮಹಿಳೆಯನ್ನು ರಕ್ಷಿಸಿದ್ದಾರೆ ಎಂದು ರೈಲ್ವೆ ಡಿಸಿಪಿ ಹರೇಂದ್ರ ಸಿಂಗ್ ಮಾಹಿತಿ ನೀಡಿದ್ದಾರೆ.

ಸಂತ್ರಸ್ತೆಯು ಹರಿಯಾಣದ ಫರಿದಾಬಾದ್ನಲ್ಲಿ ವಾಸವಿದ್ದಾರೆ. ಎರಡು ವರ್ಷಗಳ ಹಿಂದೆ ಗಂಡನಿಂದ ಪ್ರತ್ಯೇಕವಾಗಿದ್ದು, ಕೆಲಸಕ್ಕಾಗಿ ಹುಡುಕಾಟ ನಡೆಸುತ್ತಿದ್ದಾರೆ. ಸಂತ್ರಸ್ತೆಗೆ ಸ್ನೇಹಿತರೊಬ್ಬರಿಂದ ಆರೋಪಿಗಳಲ್ಲಿ ಒಬ್ಬನಾಗಿರುವ ಸತೀಶ್ ಪರಿಚಯವಾಗಿತ್ತು. ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಆತ ಭರವಸೆ ನೀಡಿದ್ದ ಎಂದು ಸಂತ್ರಸ್ತೆ ಪೊಲೀಸರ ಮುಂದೆ ಹೇಳಿಕೊಂಡಿದ್ದಾರೆ.
ಸಂತ್ರಸ್ತ ಮಹಿಳೆಗೆ ಕರೆ ಮಾಡಿದ ಸತೀಶ್, ಗುರುವಾರ ನಮ್ಮ ಹೊಸ ಮನೆಯಲ್ಲಿ ಮಗನ ಬರ್ತಡೇ ಪಾರ್ಟಿ ಇದೆ ಎಂದು ಆಹ್ವಾನಿಸಿದ್ದಾನೆ. ಅಂದು ರಾತ್ರಿ 10.30ಕ್ಕೆ ಸಂತ್ರಸ್ತೆ ಕೀರ್ತಿ ನಗರ್ ಮೆಟ್ರೋ ನಿಲ್ದಾಣದಲ್ಲಿ ಭೇಟಿಯಾಗಿದ್ದಾಳೆ. ಬಳಿಕ ಆಕೆಯನ್ನು ಅಲ್ಲಿಂದ ದೆಹಲಿಯ ರೈಲು ನಿಲ್ದಾಣವೊಂದಕ್ಕೆ ಕರೆದೊಯ್ದು ಇನ್ನುಳಿದ ಆರೋಪಿಗಳಿಗೆ ಪರಿಚಯ ಮಾಡಿದ್ದಾನೆ. ಇದಾದ ಬಳಿಕ ರೈಲು ದೀಪದ ಗುಡಿಸಲಿನೊಳಗೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾಗಿ ಸಂತ್ರಸ್ತೆ ದೂರಿದ್ದಾರೆ.
ಘಟನೆ ನಡೆದ ಎರಡೇ ಗಂಟೆಯಲ್ಲಿ ನಾಲ್ವರು ಆರೋಪಿಗಳನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.
DCP (Railways) Harendra Singh has informed that the four accused were railway employees and have been arrested.The four accused identified as Satish Kumar (35), Vinod Kumar (38), Mangal Chand Meena (33) and Jagdish Chand (37) were arrested within two hours of an FIR being registered against them.According to the police, the woman was rescued by police from the station where she made the help call.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm