ಬ್ರೇಕಿಂಗ್ ನ್ಯೂಸ್
24-07-22 12:53 pm Bangalore Correspondent ಕ್ರೈಂ
bnಬೆಂಗಳೂರು, ಜುಲೈ 24 : ನಗರದ ಇನ್ಫೆಂಟ್ರಿ ರಸ್ತೆಯ ಪೊಲೀಸ್ ಕಮಿಷನರ್ ಕಚೇರಿ ಬಳಿ ಪಾರ್ಕ್ ಮಾಡಿದ್ದ ಕಾರಿನ ಗಾಜು ಒಡೆದು ದುಷ್ಕರ್ಮಿಗಳು ರೂ. 4.50 ಲಕ್ಷ ನಗದು ಇದ್ದ ಬ್ಯಾಗನ್ನು ಕದ್ದುಕೊಂಡು ಪರಾರಿಯಾಗಿದ್ದಾರೆ.
ಹಣ ಕಳೆದುಕೊಂಡ ಲಕ್ಷ್ಮೀಶ್ ಎಂಬವರು ವಿಧಾನಸೌಧ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ. ಓಜಿಕುಪ್ಪಂ ತಂಡದವರು ಕೃತ್ಯ ಎಸಗಿರುವ ಅನುಮಾನವಿದೆ ಎಂದು ವಿಧಾನಸೌಧ ಠಾಣೆ ಪೊಲೀಸರು ತಿಳಿಸಿದ್ದಾರೆ.
ಮನೆ ಸಾಲದ ಕಂತು ಕಟ್ಟಲೆಂದು ಲಕ್ಷ್ಮೀಶ್ ಅವರು ಮಹದೇವಪುರದ ಕೆನರಾ ಬ್ಯಾಂಕ್ ಶಾಖೆಯಲ್ಲಿ ₹ 4.50 ಲಕ್ಷ ಹಣವನ್ನು ಡ್ರಾ ಮಾಡಿಕೊಂಡಿದ್ದರು. ಅದನ್ನು ಬೇರೆ ಬ್ಯಾಂಕ್ಗೆ ಪಾವತಿಸಲು ನಗರಕ್ಕೆ ಬಂದಿದ್ದರು. ಇದರ ನಡುವೆ, ಇನ್ಫೆಂಟ್ರಿ ರಸ್ತೆಯ ಕಾನೂನು ಮಾಪನ ಇಲಾಖೆ ಕಟ್ಟಡದ ಪಾರ್ಕಿಂಗ್ ಜಾಗದಲ್ಲಿ ಕಾರು ನಿಲ್ಲಿಸಿ, ಕೆಲಸದ ನಿಮಿತ್ತ ತನ್ನ ಕಚೇರಿಗೆ ಹೋಗಿದ್ದರು.
ಲಕ್ಷ್ಮೀಶ್ ಕಾರಿನಲ್ಲಿ ಹಣ ಇಟ್ಟಿರುವುದನ್ನು ತಿಳಿದಿದ್ದ ದುಷ್ಕರ್ಮಿಗಳು, ಮಹದೇವಪುರದಿಂದ ಪಲ್ಸರ್ ಬೈಕ್ನಲ್ಲಿ ಹಿಂಬಾಲಿಸಿಕೊಂಡು ಬಂದಿದ್ದರು ಎನ್ನಲಾಗಿದೆ. ಲಕ್ಷ್ಮೀಶ್ ಕಾರು ಪಾರ್ಕಿಂಗ್ ಮಾಡಿದ್ದ ಜಾಗದಲ್ಲಿ ಗಾಜು ಒಡೆದು, ಒಳಗಿದ್ದ ಹಣದ ಬ್ಯಾಗನ್ನು ಲಪಟಾಯಿಸಿ ಪರಾರಿಯಾಗಿದ್ದಾರೆ. ಲಕ್ಷ್ಮೀಶ್ ತನ್ನ ಕೆಲಸ ಮುಗಿಸಿ ವಾಪಸು ಕಾರಿನ ಬಳಿ ಬಂದಾಗ ವಿಷಯ ಗೊತ್ತಾಗಿದೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
Thieves break car parked near Bangalore Commissioner office and take 4.50 lakhs.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm