ಬ್ರೇಕಿಂಗ್ ನ್ಯೂಸ್
26-07-22 10:17 pm Mangalore Correspondent ಕ್ರೈಂ
ಪುತ್ತೂರು, ಜುಲೈ 26: ನಾಲ್ಕು ದಿನಗಳ ಹಿಂದೆ ಬೆಳ್ಳಾರೆಯಲ್ಲಿ ನಡೆದಿದ್ದ ಮಸೂದ್ ಎಂಬ ಯುವಕನ ಕೊಲೆಗೆ ಪ್ರತೀಕಾರ ಎನ್ನುವಂತೆ ಬಿಜೆಪಿ ಯುವಮೋರ್ಚಾ ಕಾರ್ಯಕರ್ತನನ್ನು ಕಡಿದು ಹತ್ಯೆ ಮಾಡಲಾಗಿದೆ.
ದ.ಕ. ಜಿಲ್ಲಾ ಯುವಮೋರ್ಚಾ ಕಾರ್ಯಕಾರಿಣಿ ಸದಸ್ಯ, ಸ್ಥಳೀಯವಾಗಿ ಸಾಮಾಜಿಕ ಚಟುವಟಿಕೆಯಲ್ಲಿ ಸಕ್ರಿಯವಾಗಿದ್ದ ಪ್ರವೀಣ್ ಕುಮಾರ್ ನೆಟ್ಟಾರು (31) ಎಂಬ ಯುವಕನನ್ನು ಭೀಕರವಾಗಿ ಕಡಿದು ಹತ್ಯೆ ಮಾಡಲಾಗಿದೆ. ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಪ್ರವೀಣ್, ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಅಂಗಡಿ ಮುಚ್ಚಿ ತೆರಳಲು ಅನುವಾದ ಸಂದರ್ಭದಲ್ಲಿಯೇ ಬೈಕಿನಲ್ಲಿ ಬಂದಿದ್ದ ಮೂವರು ತಲವಾರಿನಿಂದ ಮಾರಣಾಂತಿಕ ದಾಳಿ ನಡೆಸಿದ್ದಾರೆ. ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದ ಪ್ರವೀಣ್ ಅವರನ್ನು ಆಸ್ಪತ್ರೆಗೆ ಒಯ್ಯುವ ದಾರಿಯಲ್ಲೇ ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ.


ನಾಲ್ಕು ದಿನಗಳ ಹಿಂದೆ ಕಾಸರಗೋಡು ಮೂಲದ ಮಸೂದ್ ಎನ್ನುವ ಯುವಕನ ಮೇಲೆ ಎಂಟು ಜನರು ಗುಂಪು ಹಲ್ಲೆ ನಡೆಸಿತ್ತು. ತಲೆಯ ಭಾಗಕ್ಕೆ ಬಾಟಲಿಯಿಂದ ಹಲ್ಲೆ ನಡೆಸಿದ್ದರಿಂದ ಎರಡು ದಿನಗಳ ನಂತರ ಮಂಗಳೂರಿನ ಆಸ್ಪತ್ರೆಯಲ್ಲಿ ಮಸೂದ್ ಸಾವನ್ನಪ್ಪಿದ್ದ. ಈ ಘಟನೆ ಬಗ್ಗೆ ಮುಸ್ಲಿಂ ಸಂಘಟನೆಗಳು, ನಾಯಕರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದರು. ಜಾಲತಾಣದಲ್ಲಿ ಇದಕ್ಕೆ ಪ್ರತೀಕಾರ ತೀರಿಸಿಯೇ ಸಿದ್ಧ ಎನ್ನುವ ಪೋಸ್ಟ್ ಗಳು ಹರಿದಾಡಿದ್ದವು. ಎರಡೇ ದಿನದ ಅಂತರದಲ್ಲಿ ಬಿಜೆಪಿ ಕಾರ್ಯಕರ್ತನನ್ನು ಕಡಿದು ಕೊಲ್ಲಲಾಗಿದೆ. ಮಸೂದ್ ನನ್ನು ಹೊಡೆದು ಹಾಕಿದ್ದ ಯುವಕರು ಹಿಂದು ಸಂಘಟನೆಯ ಕಾರ್ಯಕರ್ತರು ಎನ್ನುವ ಆರೋಪವೂ ಕೇಳಿಬಂದಿತ್ತು. ಅದೇ ಘಟನೆಗೆ ಈಗ ಕಾಸರಗೋಡಿನಿಂದ ಬಂದಿದ್ದ ಯುವಕರು ಪ್ರತೀಕಾರ ತೀರಿಸಿದ್ದಾರೆ ಎನ್ನುವ ಮಾತು ಕೇಳಿಬಂದಿದೆ.


ಪುತ್ತೂರಿನ ಆಸ್ಪತ್ರೆಯಲ್ಲಿ ಪ್ರವೀಣ್ ಅಸುನೀಗಿದ್ದಾರೆ. ವಿಷಯ ತಿಳಿಯುತ್ತಲೇ ಭಾರೀ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದಾರೆ. ಪುತ್ತೂರು ನಗರ ಮತ್ತು ಬೆಳ್ಳಾರೆ ಪೇಟೆಯಲ್ಲಿ ಪೊಲೀಸರು ಅಂಗಡಿಗಳನ್ನು ಮುಚ್ಚಿಸಿದ್ದಾರೆ. ರಾತ್ರಿಯೇ ಉದ್ವಿಗ್ನ ಸ್ಥಿತಿ ನೆಲೆಸಿದೆ.
Bellare BJP leader Brutally murdered in Sullia. The deceased has been identified as Praveen. He was a BJP Yuva Morcha District Secretary. Revenge murder suspected. Recently a gang attacked a Mulsim youth brutally over a trivial reason in Kalenja of Bellare.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm