ಬ್ರೇಕಿಂಗ್ ನ್ಯೂಸ್
26-07-22 10:17 pm Mangalore Correspondent ಕ್ರೈಂ
ಪುತ್ತೂರು, ಜುಲೈ 26: ನಾಲ್ಕು ದಿನಗಳ ಹಿಂದೆ ಬೆಳ್ಳಾರೆಯಲ್ಲಿ ನಡೆದಿದ್ದ ಮಸೂದ್ ಎಂಬ ಯುವಕನ ಕೊಲೆಗೆ ಪ್ರತೀಕಾರ ಎನ್ನುವಂತೆ ಬಿಜೆಪಿ ಯುವಮೋರ್ಚಾ ಕಾರ್ಯಕರ್ತನನ್ನು ಕಡಿದು ಹತ್ಯೆ ಮಾಡಲಾಗಿದೆ.
ದ.ಕ. ಜಿಲ್ಲಾ ಯುವಮೋರ್ಚಾ ಕಾರ್ಯಕಾರಿಣಿ ಸದಸ್ಯ, ಸ್ಥಳೀಯವಾಗಿ ಸಾಮಾಜಿಕ ಚಟುವಟಿಕೆಯಲ್ಲಿ ಸಕ್ರಿಯವಾಗಿದ್ದ ಪ್ರವೀಣ್ ಕುಮಾರ್ ನೆಟ್ಟಾರು (31) ಎಂಬ ಯುವಕನನ್ನು ಭೀಕರವಾಗಿ ಕಡಿದು ಹತ್ಯೆ ಮಾಡಲಾಗಿದೆ. ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಪ್ರವೀಣ್, ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಅಂಗಡಿ ಮುಚ್ಚಿ ತೆರಳಲು ಅನುವಾದ ಸಂದರ್ಭದಲ್ಲಿಯೇ ಬೈಕಿನಲ್ಲಿ ಬಂದಿದ್ದ ಮೂವರು ತಲವಾರಿನಿಂದ ಮಾರಣಾಂತಿಕ ದಾಳಿ ನಡೆಸಿದ್ದಾರೆ. ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದ ಪ್ರವೀಣ್ ಅವರನ್ನು ಆಸ್ಪತ್ರೆಗೆ ಒಯ್ಯುವ ದಾರಿಯಲ್ಲೇ ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ.
ನಾಲ್ಕು ದಿನಗಳ ಹಿಂದೆ ಕಾಸರಗೋಡು ಮೂಲದ ಮಸೂದ್ ಎನ್ನುವ ಯುವಕನ ಮೇಲೆ ಎಂಟು ಜನರು ಗುಂಪು ಹಲ್ಲೆ ನಡೆಸಿತ್ತು. ತಲೆಯ ಭಾಗಕ್ಕೆ ಬಾಟಲಿಯಿಂದ ಹಲ್ಲೆ ನಡೆಸಿದ್ದರಿಂದ ಎರಡು ದಿನಗಳ ನಂತರ ಮಂಗಳೂರಿನ ಆಸ್ಪತ್ರೆಯಲ್ಲಿ ಮಸೂದ್ ಸಾವನ್ನಪ್ಪಿದ್ದ. ಈ ಘಟನೆ ಬಗ್ಗೆ ಮುಸ್ಲಿಂ ಸಂಘಟನೆಗಳು, ನಾಯಕರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದರು. ಜಾಲತಾಣದಲ್ಲಿ ಇದಕ್ಕೆ ಪ್ರತೀಕಾರ ತೀರಿಸಿಯೇ ಸಿದ್ಧ ಎನ್ನುವ ಪೋಸ್ಟ್ ಗಳು ಹರಿದಾಡಿದ್ದವು. ಎರಡೇ ದಿನದ ಅಂತರದಲ್ಲಿ ಬಿಜೆಪಿ ಕಾರ್ಯಕರ್ತನನ್ನು ಕಡಿದು ಕೊಲ್ಲಲಾಗಿದೆ. ಮಸೂದ್ ನನ್ನು ಹೊಡೆದು ಹಾಕಿದ್ದ ಯುವಕರು ಹಿಂದು ಸಂಘಟನೆಯ ಕಾರ್ಯಕರ್ತರು ಎನ್ನುವ ಆರೋಪವೂ ಕೇಳಿಬಂದಿತ್ತು. ಅದೇ ಘಟನೆಗೆ ಈಗ ಕಾಸರಗೋಡಿನಿಂದ ಬಂದಿದ್ದ ಯುವಕರು ಪ್ರತೀಕಾರ ತೀರಿಸಿದ್ದಾರೆ ಎನ್ನುವ ಮಾತು ಕೇಳಿಬಂದಿದೆ.
ಪುತ್ತೂರಿನ ಆಸ್ಪತ್ರೆಯಲ್ಲಿ ಪ್ರವೀಣ್ ಅಸುನೀಗಿದ್ದಾರೆ. ವಿಷಯ ತಿಳಿಯುತ್ತಲೇ ಭಾರೀ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದಾರೆ. ಪುತ್ತೂರು ನಗರ ಮತ್ತು ಬೆಳ್ಳಾರೆ ಪೇಟೆಯಲ್ಲಿ ಪೊಲೀಸರು ಅಂಗಡಿಗಳನ್ನು ಮುಚ್ಚಿಸಿದ್ದಾರೆ. ರಾತ್ರಿಯೇ ಉದ್ವಿಗ್ನ ಸ್ಥಿತಿ ನೆಲೆಸಿದೆ.
Bellare BJP leader Brutally murdered in Sullia. The deceased has been identified as Praveen. He was a BJP Yuva Morcha District Secretary. Revenge murder suspected. Recently a gang attacked a Mulsim youth brutally over a trivial reason in Kalenja of Bellare.
27-08-25 06:21 pm
Bangalore Correspondent
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
ದಸರಾ ಉದ್ಘಾಟಕರ ಆಯ್ಕೆ ವಿವಾದ ; ನೀವು ನಂಬಿರುವ ನಿಮ್...
27-08-25 03:17 pm
Kannada Anchor Anushree, Marriage, Mangalore:...
27-08-25 02:51 pm
ಚಾಮುಂಡಿ ಬೆಟ್ಟ ಪಕ್ಕಾ ಹಿಂದೂಗಳ ಸ್ವತ್ತು, ಮುಸ್ಲಿಮರ...
27-08-25 12:33 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
27-08-25 11:02 pm
Mangalore Correspondent
FIR, Chinnayya, Dharmasthala, Mahesh Thimarod...
27-08-25 09:19 pm
Praveen Nettaru, NIA, Mangalore: ಪ್ರವೀಣ್ ನೆಟ್...
27-08-25 08:46 pm
Pastor John Shamine, BJP, Fake Human Rights:...
26-08-25 10:57 pm
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm