ಬ್ರೇಕಿಂಗ್ ನ್ಯೂಸ್
03-10-20 10:31 am Headline Karnataka News Network ಕ್ರೈಂ
ನವದೆಹಲಿ, ಅಕ್ಟೋಬರ್ 3: ದಲಿತ ಯುವತಿಯ ಅತ್ಯಾಚಾರ ಪ್ರಕರಣ ದೇಶಾದ್ಯಂತ ಸಂಚಲನ ಎಬ್ಬಿಸಿರುವಾಗಲೇ ಹತ್ರಾಸ್ ಜಿಲ್ಲೆಯ ಎಸ್ಪಿ ಸೇರಿ ನಾಲ್ವರು ಪೊಲೀಸ್ ಅಧಿಕಾರಿಗಳನ್ನು ಉತ್ತರ ಪ್ರದೇಶ ಸರಕಾರ ಸಸ್ಪೆಂಡ್ ಮಾಡಿದೆ.
ರಾಜ್ಯ ಸರಕಾರ ಪ್ರಕರಣದ ತನಿಖೆಗೆ ನಿಯೋಜಿಸಿರುವ ಎಸ್ಐಟಿ ತಂಡ ನೀಡಿದ ಪ್ರಾಥಮಿಕ ಮಾಹಿತಿಯಂತೆ ಈ ಕ್ರಮ ಕೈಗೊಳ್ಳಲಾಗಿದೆ. ಪ್ರಕರಣ ವಿಚಾರದಲ್ಲಿ ನಿರ್ಲಕ್ಷ್ಯ ತೋರಿದ ಹಿನ್ನೆಲೆಯಲ್ಲಿ ಹತ್ರಾಸ್ ಎಸ್ಪಿ ವಿಕ್ರಾಂತ್ ವೀರ್ ಅವರನ್ನು ಅಮಾನತು ಮಾಡಲಾಗಿದೆ. ಅಲ್ಲದೆ, ಸರ್ಕಲ್ ಇನ್ಸ್ ಪೆಕ್ಟರ್ ರಾಮ್ ಶಬ್ದ್ , ಇನ್ಸ್ ಪೆಕ್ಟರ್ ದಿನೇಶ್ ಕುಮಾರ್ ವರ್ಮಾ, ಸಬ್ ಇನ್ಸ್ ಪೆಕ್ಟರ್ ಜಗವೀರ್ ಸಿಂಗ್ ಮತ್ತು ಹೆಡ್ ಕಾನ್ಸ್ ಟೇಬಲ್ ಮಹೇಶ್ ಪಾಲ್ ಅವರನ್ನು ಅಮಾನತ್ತಿನಲ್ಲಿಡಲಾಗಿದೆ.

ಪ್ರಕರಣದ ಬಗ್ಗೆ ಏಳು ದಿನಗಳಲ್ಲಿ ವರದಿ ನೀಡುವಂತೆ ಸಿಎಂ ಯೋಗಿ ಆದಿತ್ಯನಾಥ್, ಹೋಮ್ ಸೆಕ್ರೆಟರಿ ಭಗವಾನ್ ಸ್ವರೂಪ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಿದ್ದಾರೆ. ಯುವತಿಯ ಶವವನ್ನು ಕುಟುಂಬಕ್ಕೆ ಹಸ್ತಾಂತರಿಸದೆ ಅಂತ್ಯಕ್ರಿಯೆ ನಡೆಸಿದ್ದರಲ್ಲಿ ಪೊಲೀಸರ ಲೋಪ ಕಂಡುಬಂದಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳ ವಿರುದ್ಧ ಎಸ್ಐಟಿ ತಂಡ ಕ್ರಮಕ್ಕೆ ಶಿಫಾರಸು ಮಾಡಿದೆ ಎನ್ನಲಾಗ್ತಿದೆ. ಇದೇ ವೇಳೆ, ಪ್ರಕರಣಕ್ಕೆ ಸಂಬಂಧಿಸಿ ಸಂಶಯಿತ ಆರೋಪಿಗಳನ್ನು ನಾರ್ಕೋ ಅನಾಲಿಸಿಸ್ ಪಾಲಿಗ್ರಾಫ್ ಪರೀಕ್ಷೆಗೆ ಒಳಪಡಿಸಲು ರಾಜ್ಯ ಸರಕಾರ ಆದೇಶ ಮಾಡಿದೆ. ಇದಲ್ಲದೆ, ಮಹಿಳೆಯರ ವಿಚಾರದಲ್ಲಿ ಯಾವುದೇ ಅಸಭ್ಯ ನಡೆಗಳನ್ನು ಸಹಿಸಿಕೊಳ್ಳಲ್ಲ. ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ನಿಶ್ಚಿತ ಎಂದು ಸಿಎಂ ಯೋಗಿ ಪುನರುಚ್ಚರಿಸಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm