ಪ್ರವೀಣ್ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ, ಎಸ್ಡಿಪಿಐ ಕಾರ್ಯಕರ್ತರೆಂಬ ಶಂಕೆ ! 

28-07-22 01:52 pm       Mangalore Correspondent   ಕ್ರೈಂ

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. 

ಸುಳ್ಯ, ಜುಲೈ 28 : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. 

ದಕ್ಷಿಣ ಕನ್ನಡ ಎಸ್ಪಿ ಹೃಷಿಕೇಶ್ ಸೋನಾವಣೆ ಈ ಬಗ್ಗೆ ಮಾಹಿತಿ ನೀಡಿದ್ದು ಝಾಕೀರ್ (29) ಸವಣೂರು ಮತ್ತು ಶಫೀಕ್ (27) ಬೆಳ್ಳಾರೆ ಬಂಧಿತರು. ಪ್ರಕರಣದ ಬಗ್ಗೆ ಇನ್ನಷ್ಟು ತನಿಖೆ ನಡೆಸಬೇಕಾಗಿದೆ. ಈ ಹಂತದಲ್ಲಿ ಬೇರೆ ಯಾವುದೇ ಮಾಹಿತಿ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. 

ಆರೋಪಿಗಳನ್ನು ಇಂದೇ ನ್ಯಾಯಾಲಯಕ್ಕೆ ಹಾಜರು ಮಾಡುತ್ತೇವೆ. ಪ್ರಕರಣ ತನಿಖೆಯಲ್ಲಿರುವುದರಿಂದ ಇಷ್ಟು ಮಾತ್ರ ಈಗ ಹೇಳಬಲ್ಲೆ ಎಂದು ಎಸ್ಪಿ ಋಷಿಕೇಶ್ ಸೋನಾವಣೆ ಬೆಳ್ಳಾರೆಯಲ್ಲಿ ಮಾಹಿತಿ ನೀಡಿದ್ದಾರೆ. ಇಬ್ಬರು ಕೂಡ ಸ್ಥಳೀಯವಾಗಿ ಎಸ್ಡಿಪಿಐ ಪಕ್ಷದಲ್ಲಿ ಗುರುತಿಸಿಕೊಂಡವರು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

BJP Praveen Bellare Murder case, two arrested by Mangalore Police. The arrested have been identified as Zakir from Savanur and Shaffiq from Bellare. The reason for his murder is yet to be know. Police are still searching for more accused who have escaped. Praveen was brutally murdered by bike borne miscreants at Bellare.