ಬ್ರೇಕಿಂಗ್ ನ್ಯೂಸ್
31-07-22 12:47 pm Mangalore Correspondent ಕ್ರೈಂ
ಮಂಗಳೂರು, ಜುಲೈ 31 : ಸುರತ್ಕಲ್ ನಲ್ಲಿ ಭೀಕರ ಹತ್ಯೆಗೊಳಗಾದ ಮಹಮ್ಮದ್ ಫಾಜಿಲ್ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಕೃತ್ಯಕ್ಕೆ ಬಳಸಿದ್ದ ಕಾರಿನ ಮಾಲಕನನ್ನು ಬಂಧಿಸಿದ್ದಾರೆ.
ಸುರತ್ಕಲ್ ಬಳಿಯ ನಿವಾಸಿ ಅಜಿತ್ ಡಿಸೋಜ ಬಂಧಿತನಾಗಿದ್ದು ಆತ ತನ್ನ ಹುಂಡೈ ಇಯೋನ್ ಕಾರನ್ನು ಬಾಡಿಗೆ ಕೊಟ್ಟಿದ್ದ. ಆರೋಪಿಗಳು ಕಾರನ್ನು ಪಡೆದು ಕೊಲೆ ಕೃತ್ಯ ಎಸಗಿದ್ದರು. ಸಿಸಿಟಿವಿಯಲ್ಲಿ ದಾಖಲಾದ ದೃಶ್ಯಗಳನ್ನು ಆಧರಿಸಿ ಹುಂಡೈ ಇಯೋನ್ ಕಾರು ಎನ್ನುವುದು ತಿಳಿದುಬಂದಿತ್ತು. ಆದರೆ ಕಾರಿನ ನಂಬರ್ ಸ್ಪಷ್ಟವಾಗಿ ತಿಳಿದುಬಂದಿರಲಿಲ್ಲ. ಹೀಗಾಗಿ ಆ ಮಾಡೆಲಿನಲ್ಲಿ ಮಂಗಳೂರಿನಲ್ಲಿ ನೋಂದಣಿಯಾದ ಕಾರುಗಳ ಬಗ್ಗೆ ಮಾಹಿತಿ ಸಂಗ್ರಹಿಸಿ ಹಲವರನ್ನು ವಿಚಾರಣೆಗೊಳಪಡಿಸಿದ್ದೆವೆ. ಎಂಟಕ್ಕೂ ಹೆಚ್ಚು ಕಾರುಗಳನ್ನು ವಶಕ್ಕೆ ಪಡೆಯಲಾಗಿತ್ತು. ಕೆಲವನ್ನು ಸುರತ್ಕಲ್ ಠಾಣೆಯಲ್ಲಿ ಇರಿಸಲಾಗಿದೆ.



ಕೊನೆಗೆ, ಅಜಿತ್ ಡಿಸೋಜ ಕಾರನ್ನು ಬಾಡಿಗೆ ಕೊಡುವ ಮಾಹಿತಿ ಪಡೆದು ವಿಚಾರಣೆ ನಡೆಸಲಾಗಿತ್ತು. ಆತನ ಕಾರನ್ನು ಬಾಡಿಗೆ ಪಡೆದವರೇ ಕೃತ್ಯ ಎಸಗಿದ್ದರು ಎನ್ನೋದು ಖರೆಯಾಗುತ್ತಲೇ ಕಾರಿನ ಮಾಲಕನನ್ನು ಅರೆಸ್ಟ್ ಮಾಡಿದ್ದೇವೆ. ಆದರೆ ಕೃತ್ಯಕ್ಕೆ ಬಳಸಿದ್ದ ಕಾರು ಇನ್ನೂ ಪೊಲೀಸರ ವಶಕ್ಕೆ ಸಿಕ್ಕಿಲ್ಲ. ಅದು ಇನ್ನೂ ಆರೋಪಿಗಳ ಬಳಿಯೇ ಇರುವ ಶಂಕೆಯಿದೆ. ಆರೋಪಿಗಳ ಬಗ್ಗೆ ಖಚಿತ ಮಾಹಿತಿ ಸಿಕ್ಕಿದ್ದು ಶೋಧ ನಡೆಸಲಾಗಿದೆ. ನಾವು ಬಂಧಿಸುತ್ತೇವೆ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ಹೇಳಿದ್ದಾರೆ.


ಸದ್ಯಕ್ಕೆ ಬಂಧಿಸಿರುವ ಆರೋಪಿಯನ್ನು ಇನ್ನೂ ವಿಚಾರಣೆಗೆ ಒಳಪಡಿಸಲಿದ್ದು ಕೋರ್ಟಿಗೆ ಹಾಜರುಪಡಿಸಿ ಕಸ್ಟಡಿಗೆ ಪಡೆಯುತ್ತೇವೆ. ಈತನಿಗೆ ಒಬ್ಬ ಆರೋಪಿಯ ಪರಿಚಯ ಇದೆ, ಆ ವ್ಯಕ್ತಿ ಯಾವಾಗಲೂ ಕಾರು ತೆಗೆದುಕೊಂಡು ಹೋಗುತ್ತಿದ್ದ. ಅದರ ಆಧಾರದಲ್ಲಿ ನಾವು ತನಿಖೆ ನಡೆಸ್ತೀವಿ. ಶೀಘ್ರದಲ್ಲೇ ಆರೋಪಿಗಳ ಬಂಧನ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
Surathkal Fazil Murder case, car owner Ajith Dsouza who had rented the car for the murder has been arrested Mangalore Police. The car is still missing as the accused have escaped using the car. The police are in search of the missing car and the accused.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm