ಬ್ರೇಕಿಂಗ್ ನ್ಯೂಸ್
31-07-22 12:47 pm Mangalore Correspondent ಕ್ರೈಂ
ಮಂಗಳೂರು, ಜುಲೈ 31 : ಸುರತ್ಕಲ್ ನಲ್ಲಿ ಭೀಕರ ಹತ್ಯೆಗೊಳಗಾದ ಮಹಮ್ಮದ್ ಫಾಜಿಲ್ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಕೃತ್ಯಕ್ಕೆ ಬಳಸಿದ್ದ ಕಾರಿನ ಮಾಲಕನನ್ನು ಬಂಧಿಸಿದ್ದಾರೆ.
ಸುರತ್ಕಲ್ ಬಳಿಯ ನಿವಾಸಿ ಅಜಿತ್ ಡಿಸೋಜ ಬಂಧಿತನಾಗಿದ್ದು ಆತ ತನ್ನ ಹುಂಡೈ ಇಯೋನ್ ಕಾರನ್ನು ಬಾಡಿಗೆ ಕೊಟ್ಟಿದ್ದ. ಆರೋಪಿಗಳು ಕಾರನ್ನು ಪಡೆದು ಕೊಲೆ ಕೃತ್ಯ ಎಸಗಿದ್ದರು. ಸಿಸಿಟಿವಿಯಲ್ಲಿ ದಾಖಲಾದ ದೃಶ್ಯಗಳನ್ನು ಆಧರಿಸಿ ಹುಂಡೈ ಇಯೋನ್ ಕಾರು ಎನ್ನುವುದು ತಿಳಿದುಬಂದಿತ್ತು. ಆದರೆ ಕಾರಿನ ನಂಬರ್ ಸ್ಪಷ್ಟವಾಗಿ ತಿಳಿದುಬಂದಿರಲಿಲ್ಲ. ಹೀಗಾಗಿ ಆ ಮಾಡೆಲಿನಲ್ಲಿ ಮಂಗಳೂರಿನಲ್ಲಿ ನೋಂದಣಿಯಾದ ಕಾರುಗಳ ಬಗ್ಗೆ ಮಾಹಿತಿ ಸಂಗ್ರಹಿಸಿ ಹಲವರನ್ನು ವಿಚಾರಣೆಗೊಳಪಡಿಸಿದ್ದೆವೆ. ಎಂಟಕ್ಕೂ ಹೆಚ್ಚು ಕಾರುಗಳನ್ನು ವಶಕ್ಕೆ ಪಡೆಯಲಾಗಿತ್ತು. ಕೆಲವನ್ನು ಸುರತ್ಕಲ್ ಠಾಣೆಯಲ್ಲಿ ಇರಿಸಲಾಗಿದೆ.
ಕೊನೆಗೆ, ಅಜಿತ್ ಡಿಸೋಜ ಕಾರನ್ನು ಬಾಡಿಗೆ ಕೊಡುವ ಮಾಹಿತಿ ಪಡೆದು ವಿಚಾರಣೆ ನಡೆಸಲಾಗಿತ್ತು. ಆತನ ಕಾರನ್ನು ಬಾಡಿಗೆ ಪಡೆದವರೇ ಕೃತ್ಯ ಎಸಗಿದ್ದರು ಎನ್ನೋದು ಖರೆಯಾಗುತ್ತಲೇ ಕಾರಿನ ಮಾಲಕನನ್ನು ಅರೆಸ್ಟ್ ಮಾಡಿದ್ದೇವೆ. ಆದರೆ ಕೃತ್ಯಕ್ಕೆ ಬಳಸಿದ್ದ ಕಾರು ಇನ್ನೂ ಪೊಲೀಸರ ವಶಕ್ಕೆ ಸಿಕ್ಕಿಲ್ಲ. ಅದು ಇನ್ನೂ ಆರೋಪಿಗಳ ಬಳಿಯೇ ಇರುವ ಶಂಕೆಯಿದೆ. ಆರೋಪಿಗಳ ಬಗ್ಗೆ ಖಚಿತ ಮಾಹಿತಿ ಸಿಕ್ಕಿದ್ದು ಶೋಧ ನಡೆಸಲಾಗಿದೆ. ನಾವು ಬಂಧಿಸುತ್ತೇವೆ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ಹೇಳಿದ್ದಾರೆ.
ಸದ್ಯಕ್ಕೆ ಬಂಧಿಸಿರುವ ಆರೋಪಿಯನ್ನು ಇನ್ನೂ ವಿಚಾರಣೆಗೆ ಒಳಪಡಿಸಲಿದ್ದು ಕೋರ್ಟಿಗೆ ಹಾಜರುಪಡಿಸಿ ಕಸ್ಟಡಿಗೆ ಪಡೆಯುತ್ತೇವೆ. ಈತನಿಗೆ ಒಬ್ಬ ಆರೋಪಿಯ ಪರಿಚಯ ಇದೆ, ಆ ವ್ಯಕ್ತಿ ಯಾವಾಗಲೂ ಕಾರು ತೆಗೆದುಕೊಂಡು ಹೋಗುತ್ತಿದ್ದ. ಅದರ ಆಧಾರದಲ್ಲಿ ನಾವು ತನಿಖೆ ನಡೆಸ್ತೀವಿ. ಶೀಘ್ರದಲ್ಲೇ ಆರೋಪಿಗಳ ಬಂಧನ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
Surathkal Fazil Murder case, car owner Ajith Dsouza who had rented the car for the murder has been arrested Mangalore Police. The car is still missing as the accused have escaped using the car. The police are in search of the missing car and the accused.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm