ಬ್ರೇಕಿಂಗ್ ನ್ಯೂಸ್
31-07-22 12:47 pm Mangalore Correspondent ಕ್ರೈಂ
ಮಂಗಳೂರು, ಜುಲೈ 31 : ಸುರತ್ಕಲ್ ನಲ್ಲಿ ಭೀಕರ ಹತ್ಯೆಗೊಳಗಾದ ಮಹಮ್ಮದ್ ಫಾಜಿಲ್ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಕೃತ್ಯಕ್ಕೆ ಬಳಸಿದ್ದ ಕಾರಿನ ಮಾಲಕನನ್ನು ಬಂಧಿಸಿದ್ದಾರೆ.
ಸುರತ್ಕಲ್ ಬಳಿಯ ನಿವಾಸಿ ಅಜಿತ್ ಡಿಸೋಜ ಬಂಧಿತನಾಗಿದ್ದು ಆತ ತನ್ನ ಹುಂಡೈ ಇಯೋನ್ ಕಾರನ್ನು ಬಾಡಿಗೆ ಕೊಟ್ಟಿದ್ದ. ಆರೋಪಿಗಳು ಕಾರನ್ನು ಪಡೆದು ಕೊಲೆ ಕೃತ್ಯ ಎಸಗಿದ್ದರು. ಸಿಸಿಟಿವಿಯಲ್ಲಿ ದಾಖಲಾದ ದೃಶ್ಯಗಳನ್ನು ಆಧರಿಸಿ ಹುಂಡೈ ಇಯೋನ್ ಕಾರು ಎನ್ನುವುದು ತಿಳಿದುಬಂದಿತ್ತು. ಆದರೆ ಕಾರಿನ ನಂಬರ್ ಸ್ಪಷ್ಟವಾಗಿ ತಿಳಿದುಬಂದಿರಲಿಲ್ಲ. ಹೀಗಾಗಿ ಆ ಮಾಡೆಲಿನಲ್ಲಿ ಮಂಗಳೂರಿನಲ್ಲಿ ನೋಂದಣಿಯಾದ ಕಾರುಗಳ ಬಗ್ಗೆ ಮಾಹಿತಿ ಸಂಗ್ರಹಿಸಿ ಹಲವರನ್ನು ವಿಚಾರಣೆಗೊಳಪಡಿಸಿದ್ದೆವೆ. ಎಂಟಕ್ಕೂ ಹೆಚ್ಚು ಕಾರುಗಳನ್ನು ವಶಕ್ಕೆ ಪಡೆಯಲಾಗಿತ್ತು. ಕೆಲವನ್ನು ಸುರತ್ಕಲ್ ಠಾಣೆಯಲ್ಲಿ ಇರಿಸಲಾಗಿದೆ.
ಕೊನೆಗೆ, ಅಜಿತ್ ಡಿಸೋಜ ಕಾರನ್ನು ಬಾಡಿಗೆ ಕೊಡುವ ಮಾಹಿತಿ ಪಡೆದು ವಿಚಾರಣೆ ನಡೆಸಲಾಗಿತ್ತು. ಆತನ ಕಾರನ್ನು ಬಾಡಿಗೆ ಪಡೆದವರೇ ಕೃತ್ಯ ಎಸಗಿದ್ದರು ಎನ್ನೋದು ಖರೆಯಾಗುತ್ತಲೇ ಕಾರಿನ ಮಾಲಕನನ್ನು ಅರೆಸ್ಟ್ ಮಾಡಿದ್ದೇವೆ. ಆದರೆ ಕೃತ್ಯಕ್ಕೆ ಬಳಸಿದ್ದ ಕಾರು ಇನ್ನೂ ಪೊಲೀಸರ ವಶಕ್ಕೆ ಸಿಕ್ಕಿಲ್ಲ. ಅದು ಇನ್ನೂ ಆರೋಪಿಗಳ ಬಳಿಯೇ ಇರುವ ಶಂಕೆಯಿದೆ. ಆರೋಪಿಗಳ ಬಗ್ಗೆ ಖಚಿತ ಮಾಹಿತಿ ಸಿಕ್ಕಿದ್ದು ಶೋಧ ನಡೆಸಲಾಗಿದೆ. ನಾವು ಬಂಧಿಸುತ್ತೇವೆ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ಹೇಳಿದ್ದಾರೆ.
ಸದ್ಯಕ್ಕೆ ಬಂಧಿಸಿರುವ ಆರೋಪಿಯನ್ನು ಇನ್ನೂ ವಿಚಾರಣೆಗೆ ಒಳಪಡಿಸಲಿದ್ದು ಕೋರ್ಟಿಗೆ ಹಾಜರುಪಡಿಸಿ ಕಸ್ಟಡಿಗೆ ಪಡೆಯುತ್ತೇವೆ. ಈತನಿಗೆ ಒಬ್ಬ ಆರೋಪಿಯ ಪರಿಚಯ ಇದೆ, ಆ ವ್ಯಕ್ತಿ ಯಾವಾಗಲೂ ಕಾರು ತೆಗೆದುಕೊಂಡು ಹೋಗುತ್ತಿದ್ದ. ಅದರ ಆಧಾರದಲ್ಲಿ ನಾವು ತನಿಖೆ ನಡೆಸ್ತೀವಿ. ಶೀಘ್ರದಲ್ಲೇ ಆರೋಪಿಗಳ ಬಂಧನ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
Surathkal Fazil Murder case, car owner Ajith Dsouza who had rented the car for the murder has been arrested Mangalore Police. The car is still missing as the accused have escaped using the car. The police are in search of the missing car and the accused.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm