ಬ್ರೇಕಿಂಗ್ ನ್ಯೂಸ್
05-08-22 03:55 pm Bangalore Correspondent ಕ್ರೈಂ
ಬೆಂಗಳೂರು, ಆಗಸ್ಟ್ 5: ಸಿಲಿಕಾನ್ ಸಿಟಿಯಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ಜನ್ಮಕೊಟ್ಟ ತಾಯಿಯೇ ಮಗುವನ್ನು ಅಪಾರ್ಟ್ಮೆಂಟ್ ನಾಲ್ಕನೇ ಮಹಡಿಯಿಂದ ಕೆಳಕ್ಕೆಸೆದು ಹತ್ಯೆಗೈದ ಘಟನೆ ನಡೆದಿದೆ.
ಬುದ್ದಿಮಾಂದ್ಯ ಮಗು ಎಂದು ಸ್ವತಃ ತಾಯಿಯೇ ನಾಲ್ಕನೇ ಮಹಡಿಯಿಂದ ಮಗುವನ್ನು ಕೆಳಕ್ಕೆಸೆದು ಕೊಂದಿದ್ದಾಳೆ. ಎತ್ತರದಿಂದ ಬಿದ್ದ ಐದು ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟಿದೆ. ಭಯಾನಕ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಘಟನೆ ಸಿಲಿಕಾನ್ ಸಿಟಿಯ ಸಂಪಂಗಿ ರಾಮನಗರದ ಅಪಾರ್ಟ್ ಮೆಂಟ್ ಒಂದರಲ್ಲಿ ನಡೆದಿದೆ.
ಸ್ವತಃ ವೈದ್ಯೆಯೂ ಆಗಿರುವ ತಾಯಿ ಮೂರು ತಿಂಗಳ ಹಿಂದೆಯೇ ಮಗುವನ್ನು ರೈಲ್ವೆ ಸ್ಟೇಷನ್ ನಲ್ಲಿ ಬಿಟ್ಟು ಬಂದಿದ್ದಳು. ಬಳಿಕ ತಂದೆಯೇ ಮಗುವನ್ನು ಹುಡುಕಿ ಕರೆದುಕೊಂಡು ಬಂದಿದ್ದರು. ಈ ಬಾರಿ ಅಪಾರ್ಟ್ಮೆಂಟ್ ಕಟ್ಟಡದಿಂದ ಮಗುವನ್ನು ಎಸೆದು ತಾನೂ ಕೂಡ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಹಾರಲು ಯೋಚನೆ ಮಾಡುತ್ತಿದ್ದಾಗಲೇ ಪಕ್ಕದ ಮನೆಯವರು ಬಂದು ಆಕೆಯನ್ನು ರಕ್ಷಿಸಿದ್ದಾರೆ.
ಯುವತಿ ಸುಷ್ಮಾ ಎಂಬವಳಾಗಿದ್ದು ದಂತ ವೈದ್ಯಯಾಗಿ ಪ್ರಾಕ್ಟೀಸ್ ಮಾಡುತ್ತಿದ್ದಳು. ಆಕೆಯ ಪತಿ ಖಾಸಗಿ ಕಂಪನಿಯಲ್ಲಿ ಇಂಜೀನಿಯರ್ ಆಗಿದ್ದ. ಆರೋಪಿ ಸುಷ್ಮಾ ವಿರುದ್ದ ಸಂಪಂಗಿ ರಾಮನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೊರಗಡೆ ಸುತ್ತಾಡಲು ಅಡ್ಡಿಯಾಗಿತ್ತಂತೆ ಮಗು !
ಕಿರಣ್ ಹಾಗೂ ಆರೋಪಿ ಸುಷ್ಮಾ 11 ವರ್ಷಗಳ ಹಿಂದೆ ಮದುವೆಯಾಗಿದ್ದರು. ಆದ್ರೆ ಸುಷ್ಮಾಗೆ ಮಗುವನ್ನು ಮಾಡಿಕೊಳ್ಳೋದು ಇಷ್ಟವಿರಲಿಲ್ಲ.
ಆದ್ರಿಂದ ಮದ್ವೆಯಾಗಿ ಏಳು ವರ್ಷವಾದ್ರು ಮಕ್ಕಳು ಮಾಡಿಕೊಂಡಿರಲಿಲ್ಲ. ಸುಷ್ಮಾ ನಿತ್ಯ ಹೊರಗಡೆ ಸುತ್ತಾಡುವುದು, ಮೋಜು ಮಾಡುವುದು ಅಭ್ಯಾಸ ಮಾಡಿಕೊಂಡಿದ್ದಳು. ಆದರೆ ಮನೆಯವರ ಒತ್ತಾಯದಿಂದ ನಾಲ್ಕು ವರ್ಷದ ಹಿಂದೆ ಹೆಣ್ಣು ಮಗು ಜನಿಸಿತ್ತು. ಒಂದುವರೆ ವರ್ಷದವರೆಗೂ ಚೆನ್ನಾಗಿದ್ದ ಮಗು ಬಳಿಕ ಬುದ್ಧಿಮಾಂದ್ಯ ರೀತಿ ಲಕ್ಷಣ ತೋರಿಸಿತ್ತು. ಇದರಿಂದ ಚಿಂತೆಗೊಳಗಾಗಿದ್ದ ಮಗುವಿನ ತಂದೆ, ಮಗು ಗುಣಮುಖವಾಗಲೆಂದು ಆಸ್ಪತ್ರೆ ಸುತ್ತುತ್ತಿದ್ದ. ಪತಿ ಕಿರಣ್ ಆಸ್ಪತ್ರೆ ಅಲೆದಾಡುವುದು ಪತ್ನಿಗೆ ಇಷ್ಟವಿರಲಿಲ್ಲ. ಇದರಿಂದ ಸಮಯ ವ್ಯರ್ಥ ಎಂದು ಹೇಳುತ್ತಿದ್ದಳು. ಮಗು ಆದಬಳಿಕ ಹೊರಗಡೆ ಸುತ್ತಾಡಲು ಆಗುತ್ತಿಲ್ಲ ಎಂದು ನೊಂದುಕೊಂಡಿದ್ದಳು. ತನ್ನ ಸುಖ ಜೀವನಕ್ಕೆ ಅಡ್ಡಿಯೆಂದು ಮಗುವನ್ನೇ ಕೊಲೆ ಮಾಡಿರೋದಾಗಿ ಕಿರಣ್ ಕುಟುಂಬಸ್ಥರು ಆರೋಪಿಸಿದ್ದಾರೆ.
Shocking Mother throws her 11-year-old mentally ill child from the apartment in Bangalore. Mother is said to be a doctor by profession. After seven years of marriage, she delivered a child but the child turned to be mentally ill. After throwing the child even she tries to attempt suicide but was held by the neighbors. She was irritated to go shopping or elsewhere because if this child that's the reason she committed this crime says police report.
22-06-25 07:52 pm
HK News Desk
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
24-06-25 12:03 pm
HK News Desk
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
24-06-25 11:19 am
Mangalore Correspondent
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
Journalist Vijay Kotian, Brand Mangalore Awar...
23-06-25 09:48 pm
Mangalore, Lokayukta Raid, MCC: ಮಂಗಳೂರು ಪಾಲಿಕ...
23-06-25 06:56 pm
23-06-25 08:51 pm
HK News Desk
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm