ಬ್ರೇಕಿಂಗ್ ನ್ಯೂಸ್
06-08-22 01:32 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 6: ನಂಬಿಕಸ್ಥರಂತೆ ನಟಿಸಿದ್ದಲ್ಲದೆ, ಮಹಾರಾಷ್ಟ್ರದಲ್ಲಿ ಫಾರ್ಮ್ ಡೈರಿ ಮಾಡುತ್ತಿದ್ದೇವೆಂದು ಹೇಳಿ 1.75 ಕೋಟಿ ಬ್ಯಾಂಕ್ ಸಾಲ ಪಡೆದು ಅದಕ್ಕೆ ಜಾಮೀನು ನಿಲ್ಲಿಸಿ ಮೋಸಗೈದ ಬಗ್ಗೆ ವ್ಯಕ್ತಿಯೊಬ್ಬರು ಮಂಗಳೂರಿನ ಸೈಬರ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಮಧ್ವರಾಯ ಭಟ್ ಎಂಬವರು ಮೋಸ ಹೋದವರಾಗಿದ್ದು, ಮೂವರ ವಿರುದ್ಧ ಕೇಸು ದಾಖಲಿಸಿದ್ದಾರೆ. ರಕ್ಷಾ ಬಾಳಿಗ, ನಿಧಿ ವಾಸುದೇವ ಕಾಮತ್ ಮತ್ತು ವಾಸುದೇವ ಕಾಮತ್ ಎಂಬ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ವಾಸುದೇವ ಕಾಮತ್ ನಿವೃತ್ತ ಬ್ಯಾಂಕ್ ಮ್ಯಾನೇಜರ್ ಆಗಿದ್ದು, ಮಧ್ವರಾಯ ಭಟ್ ಅವರಿಗೆ ಪರಿಚಿತರೇ ಆಗಿದ್ದರು. ಹೀಗಾಗಿ ಮಹಾರಾಷ್ಟ್ರದಲ್ಲಿ ಡೈರಿ ಫಾರ್ಮ್ ಮಾಡುತ್ತಿದ್ದೇವೆಂದು ಹೇಳಿ ನಂಬಿಸಿದ್ದಲ್ಲದೆ, ಮಂಗಳೂರಿನ ಭಾರತ್ ಕೋ ಆಪರೇಟಿವ್ ಬ್ಯಾಂಕಿನಲ್ಲಿ 1.75 ಕೋಟಿ ರುಪಾಯಿ ಸಾಲ ಪಡೆದಿದ್ದಾರೆ.
ಸಾಲದ ಮೊತ್ತಕ್ಕೆ ಮಧ್ವರಾಯ ಭಟ್ ಅವರನ್ನು ಜಾಮೀನು ನಿಲ್ಲುವಂತೆ ಪುಸಲಾಯಿಸಿದ್ದು ಭಟ್ ಅವರಿಗೆ ಸೇರಿದ 2.5 ಕೋಟಿ ಮೌಲ್ಯದ ಆಸ್ತಿಯ ದಾಖಲೆಯನ್ನು ಭದ್ರತೆಯಾಗಿ ಇರಿಸಿದ್ದರು. ಆರು ತಿಂಗಳಿಗಷ್ಟೇ ನಿಮ್ಮ ಭದ್ರತೆ ಸಾಕು, ಆಮೇಲೆ ನಾವು ಜಾಮೀನಿಗೆ ಬೇರೆ ವ್ಯವಸ್ಥೆ ಮಾಡುವುದಾಗಿ ಹೇಳಿದ್ದರು. ಅದರಂತೆ, ವಿಶ್ವಾಸದಲ್ಲಿ ನಂಬಿದ್ದ ಮಧ್ವರಾಯ ಭಟ್ ಭದ್ರತೆ ನಿಲ್ಲುವುದಕ್ಕೆ ಒಪ್ಪಿದ್ದರು. ಆದರೆ, ವಾಸುದೇವ ಕಾಮತ್ ಮತ್ತು ಇತರರು ಬ್ಯಾಂಕಿಗೆ ಸಾಲ ಪಾವತಿ ಮಾಡದೆ ಮೋಸ ಮಾಡಿದ್ದಾರೆ. ಬ್ಯಾಂಕಿನಿಂದ ಮಧ್ವರಾಯ ಭಟ್ ಗೆ ನೋಟೀಸ್ ಬಂದಿದ್ದು, ಈ ಬಗ್ಗೆ ಆ ಮೂವರ ಗಮನಕ್ಕೆ ತಂದಾಗ ಬೆದರಿಸಿದ್ದಾರೆ. ಜೀವ ಬೆದರಿಕೆ ಒಡ್ಡಿದ್ದಲ್ಲದೆ, ನಾಪತ್ತೆಯಾಗಿದ್ದಾರೆ.
ನಂಬಿಕಸ್ಧರಂತೆ ನಟಿಸಿ ಮೋಸಗೈದ ಮೂವರು ಆರೋಪಿಗಳ ವಿರುದ್ಧ ಮಧ್ವರಾಯ ಭಟ್ ಪೊಲೀಸರಿಗೆ ದೂರು ನೀಡಿದ್ದಾರೆ. ಅಲ್ಲದೆ, ಬ್ಯಾಂಕಿನಿಂದ ಸಾಲ ತೆಗೆದುಕೊಂಡವರು ನಾಪತ್ತೆಯಾಗಿದ್ದರಿಂದ ಭಟ್ ಅವರಿಗೆ ನೋಟೀಸ್ ಬಂದಿದ್ದು ನೀವೇ ಸಾಲ ಪಾವತಿ ಮಾಡುವಂತೆ ಸೂಚಿಸಿದೆ. ಹೀಗಾಗಿ ಮಧ್ವರಾಯ ಭಟ್ ಕಂಗಾಲಾಗಿದ್ದಾರೆ.
A man filed complaint over three people of cheating his faith in them in posing as a guarantor for their bank loan by pledging his property worth Rs 2.5 crore. Madhwaraya Bhat is the person who is taken for ride by Raksha Baliga, Nidhi Vasudeva Kamath and Vasudeva Kamath.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm