ಬ್ರೇಕಿಂಗ್ ನ್ಯೂಸ್
08-08-22 10:20 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 8: ಹಿಂದು ಸಂಘಟನೆಯ ಕಾರ್ಯಕರ್ತರನ್ನು ಹಿಂಬಾಲಿಸುವುದು, ಇಂಟರ್ನೆಟ್ ಕರೆ ಮಾಡಿ ಜೀವ ಬೆದರಿಕೆ ಒಡ್ಡುವ ಕೃತ್ಯಗಳು ಮರುಕಳಿಸುತ್ತಿವೆ. ಈ ಬಗ್ಗೆ ಹಿಂದು ಸಂಘಟನೆ ಕಾರ್ಯಕರ್ತರೊಬ್ಬರು ತನಗೆ ಬಂದ ಬೆದರಿಕೆ ಕರೆ ಬಗ್ಗೆ ಕಂಕನಾಡಿ ನಗರ ಠಾಣೆಗೆ ದೂರು ನೀಡಿದ್ದಾರೆ.
ಭಾನುವಾರ ರಾತ್ರಿ 10.30ಕ್ಕೆ ಪಂಪ್ವೆಲ್ ನಿಂದ ಕಾರಿನಲ್ಲಿ ಬಿಕರ್ನಕಟ್ಟೆಯ ತನ್ನ ಮನೆಗೆ ಹೋಗುತ್ತಿದ್ದಾಗ ಬೈಕಿನಲ್ಲಿ ಇಬ್ಬರು ಯುವಕರು ಹಿಂಬಾಲಿಸಿದ್ದಾರೆ. ಮನೆಗೆ ಮುಟ್ಟುವಷ್ಟರಲ್ಲಿ ಇಂಟರ್ನೆಟ್ ಕರೆ ಬಂದಿದ್ದು ನೀನು ಈ ಬಾರಿ ಬಚಾವಾಗಿದ್ದೀಯಾ.. ನಾವು ಬಿಡೋದಿಲ್ಲ. ನೀನು ಸೇರಿ ಮೂವರಿಗೆ ಸ್ಕೆಚ್ ಹಾಕಿದ್ದೇವೆ. ಇವತ್ತಲ್ಲ ನಾಳೆ, ತೆಗೆದೇ ಬಿಡುತ್ತೇವೆ ಎಂದು ತುಳು ಭಾಷೆಯಲ್ಲಿ ಬೆದರಿಕೆ ಹಾಕಿದ್ದಾರೆ ಎಂದು ಕಂಕನಾಡಿ ನಗರ ಠಾಣೆಯಲ್ಲಿ ದೂರು ನೀಡಿದ್ದಾರೆ. ಪೊಲೀಸರು ಜೀವ ಬೆದರಿಕೆ ಬಗ್ಗೆ ಪ್ರಕರಣ ದಾಖಲಿಸಿದ್ದಾರೆ.
ಎರಡು ದಿನಗಳ ಹಿಂದೆ ಬಳ್ಳಾಲ್ ಬಾಗಿನ ಕಾರ್ಯಕರ್ತನಿಗೂ ಇದೇ ರೀತಿ ಬೆದರಿಕೆ ಕರೆ ಬಂದಿತ್ತು. ಕರೆ ಮಾಡಿ, ತುಳು ಭಾಷೆಯಲ್ಲಿ ನಿಂದಿಸಿದ್ದಲ್ಲದೆ, ನಿನ್ನನ್ನು ತೆಗೆಯದೇ ಬಿಡಲ್ಲ ಎಂದು ಬೆದರಿಕೆ ಹಾಕಲಾಗಿತ್ತು. ಬೆದರಿಕೆ ಹಾಕಿದ್ದ ಆಡಿಯೋ ಜಾಲತಾಣದಲ್ಲಿ ವೈರಲ್ ಆಗಿತ್ತು.
ಕಳೆದ ವಾರದ ಉಳ್ಳಾಲ ಠಾಣೆಯಲ್ಲಿ ತನ್ನನ್ನು ಹಿಂಬಾಲಿಸಿಕೊಂಡು ಬಂದ ಬಗ್ಗೆ ವ್ಯಕ್ತಿಯೊಬ್ಬರು ದೂರು ನೀಡಲು ಬಂದಿದ್ದರು. ಕೊನೆಗೆ, ಪೊಲೀಸರು ವಿಚಾರಣೆ ನಡೆಸಿದಾಗ ತಡಬಡಾಯಿಸಿದ್ದರಿಂದ ಸುಳ್ಳು ದೂರೆಂದು ಪರಿಗಣಿಸಿ ಆತನ ವಿರುದ್ಧವೇ ದೂರು ದಾಖಲಿಸಿದ್ದರು.
Mangalore Hindu activist gets life threat via internet call, says we will surely kill you, A case has been registered at Kankanady Town Police Station. We have already targeted three to kill we will kill you also.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm