ಬ್ರೇಕಿಂಗ್ ನ್ಯೂಸ್

Forensic Expert Dr Mahabala Shetty, Dharmasthala case: ಧರ್ಮಸ್ಥಳ ಸ್ನಾನಘಟ್ಟ ಬಳಿ 20ಕ್ಕೂ ಹೆಚ್ಚು ಕೊಳೆತ ಶವಗಳನ್ನು ಪೋಸ್ಟ್ ಮಾರ್ಟಂ ಮಾಡಿದ್ದೆ, ಅವನ್ನು ಅಲ್ಲಿಯೇ ಹೂಳಲಾಗಿತ್ತು ; ಪ್ರಕರಣಕ್ಕೆ ಸ್ಫೋಟಕ ತಿರುವು ಕೊಟ್ಟ ಫಾರೆನ್ಸಿಕ್ ತಜ್ಞ ಡಾ.ಮಹಾಬಲ ಶೆಟ್ಟಿ    |    ಕನಸು ಕಮರಿಸಿದ ಅಪಘಾತ ; ವೈದ್ಯರ ಎಡವಟ್ಟು, ಸಕಾಲದಲ್ಲಿ ಚಿಕಿತ್ಸೆ ಸಿಗದೆ ಕೈಕಾಲಿನ ಶಕ್ತಿಯೇ ಊನ, ಕಂಗೆಟ್ಟ ವಿಶ್ವಕರ್ಮ ಕುಟುಂಬಕ್ಕೆ ಕ್ರಿಶ್ಚಿಯನ್ ಗೆಳೆಯರ ಆಸರೆ ! ಅರ್ಧಕ್ಕೆ ಉಳಿದುಬಿಟ್ಟ ಮನೆಗೆ ದಿಕ್ಕಿಲ್ಲದ ಸ್ಥಿತಿ, ಬೆಳಕು ಹರಿಸೀತೆ ಸಹೃದಯರ ಹಾರೈಕೆ ?!    |    Kannada Producer Ganesh, Film Dharmasthala File, Movie: 'ಧರ್ಮಸ್ಥಳ ಫೈಲ್ಸ್' ಸಿನಿಮಾ ಘೋಷಿಸಿದ ಕನ್ನಡದ ನಿರ್ಮಾಪಕ ಎ. ಗಣೇಶ್ ; ಸಮಸ್ಯೆ ಆದ್ರೆ ಚಿತ್ರತಂಡವೇ ಹೊಣೆ ಎಂಬ ಕಂಡೀಷನ್! ಕತೆ ಇನ್ನಷ್ಟೇ ಬರೆಸಬೇಕೆಂದ ಚಿತ್ರತಂಡ     |   

ಹಿಂದು ಕಾರ್ಯಕರ್ತರಿಗೆ ಇಂಟರ್ನೆಟ್ ಕರೆ ; ಇವತ್ತಲ್ಲ, ನಾಳೆ ತೆಗೆದೇ ಬಿಡುತ್ತೇವೆಂದು ಬೆದರಿಕೆ ! 

08-08-22 10:20 pm       Mangalore Correspondent   ಕ್ರೈಂ

ಹಿಂದು ಸಂಘಟನೆಯ ಕಾರ್ಯಕರ್ತರನ್ನು ಹಿಂಬಾಲಿಸುವುದು, ಇಂಟರ್ನೆಟ್ ಕರೆ ಮಾಡಿ ಜೀವ ಬೆದರಿಕೆ ಒಡ್ಡುವ ಕೃತ್ಯಗಳು ಮರುಕಳಿಸುತ್ತಿವೆ. ಈ ಬಗ್ಗೆ ಹಿಂದು ಸಂಘಟನೆ ಕಾರ್ಯಕರ್ತರೊಬ್ಬರು ತನಗೆ ಬಂದ ಬೆದರಿಕೆ ಕರೆ ಬಗ್ಗೆ ಕಂಕನಾಡಿ ನಗರ ಠಾಣೆಗೆ ದೂರು ನೀಡಿದ್ದಾರೆ. 

ಮಂಗಳೂರು, ಆಗಸ್ಟ್ 8: ಹಿಂದು ಸಂಘಟನೆಯ ಕಾರ್ಯಕರ್ತರನ್ನು ಹಿಂಬಾಲಿಸುವುದು, ಇಂಟರ್ನೆಟ್ ಕರೆ ಮಾಡಿ ಜೀವ ಬೆದರಿಕೆ ಒಡ್ಡುವ ಕೃತ್ಯಗಳು ಮರುಕಳಿಸುತ್ತಿವೆ. ಈ ಬಗ್ಗೆ ಹಿಂದು ಸಂಘಟನೆ ಕಾರ್ಯಕರ್ತರೊಬ್ಬರು ತನಗೆ ಬಂದ ಬೆದರಿಕೆ ಕರೆ ಬಗ್ಗೆ ಕಂಕನಾಡಿ ನಗರ ಠಾಣೆಗೆ ದೂರು ನೀಡಿದ್ದಾರೆ. 

ಭಾನುವಾರ ರಾತ್ರಿ 10.30ಕ್ಕೆ ಪಂಪ್ವೆಲ್ ನಿಂದ ಕಾರಿನಲ್ಲಿ ಬಿಕರ್ನಕಟ್ಟೆಯ ತನ್ನ ಮನೆಗೆ ಹೋಗುತ್ತಿದ್ದಾಗ ಬೈಕಿನಲ್ಲಿ ಇಬ್ಬರು ಯುವಕರು ಹಿಂಬಾಲಿಸಿದ್ದಾರೆ. ಮನೆಗೆ ಮುಟ್ಟುವಷ್ಟರಲ್ಲಿ ಇಂಟರ್ನೆಟ್ ಕರೆ ಬಂದಿದ್ದು ನೀನು ಈ ಬಾರಿ ಬಚಾವಾಗಿದ್ದೀಯಾ.. ನಾವು ಬಿಡೋದಿಲ್ಲ. ನೀನು ಸೇರಿ ಮೂವರಿಗೆ ಸ್ಕೆಚ್ ಹಾಕಿದ್ದೇವೆ. ಇವತ್ತಲ್ಲ ನಾಳೆ, ತೆಗೆದೇ ಬಿಡುತ್ತೇವೆ ಎಂದು ತುಳು ಭಾಷೆಯಲ್ಲಿ ಬೆದರಿಕೆ ಹಾಕಿದ್ದಾರೆ ಎಂದು ಕಂಕನಾಡಿ ನಗರ ಠಾಣೆಯಲ್ಲಿ ದೂರು ನೀಡಿದ್ದಾರೆ. ಪೊಲೀಸರು ಜೀವ ಬೆದರಿಕೆ ಬಗ್ಗೆ ಪ್ರಕರಣ ದಾಖಲಿಸಿದ್ದಾರೆ. 

ಎರಡು ದಿನಗಳ ಹಿಂದೆ ಬಳ್ಳಾಲ್ ಬಾಗಿನ ಕಾರ್ಯಕರ್ತನಿಗೂ ಇದೇ ರೀತಿ ಬೆದರಿಕೆ ಕರೆ ಬಂದಿತ್ತು. ಕರೆ ಮಾಡಿ, ತುಳು ಭಾಷೆಯಲ್ಲಿ ನಿಂದಿಸಿದ್ದಲ್ಲದೆ, ನಿನ್ನನ್ನು ತೆಗೆಯದೇ ಬಿಡಲ್ಲ ಎಂದು ಬೆದರಿಕೆ ಹಾಕಲಾಗಿತ್ತು. ಬೆದರಿಕೆ ಹಾಕಿದ್ದ ಆಡಿಯೋ ಜಾಲತಾಣದಲ್ಲಿ ವೈರಲ್ ಆಗಿತ್ತು. 

ಕಳೆದ ವಾರದ ಉಳ್ಳಾಲ ಠಾಣೆಯಲ್ಲಿ ತನ್ನನ್ನು ಹಿಂಬಾಲಿಸಿಕೊಂಡು ಬಂದ ಬಗ್ಗೆ ವ್ಯಕ್ತಿಯೊಬ್ಬರು ದೂರು ನೀಡಲು ಬಂದಿದ್ದರು. ಕೊನೆಗೆ, ಪೊಲೀಸರು ವಿಚಾರಣೆ ನಡೆಸಿದಾಗ ತಡಬಡಾಯಿಸಿದ್ದರಿಂದ ಸುಳ್ಳು ದೂರೆಂದು ಪರಿಗಣಿಸಿ ಆತನ ವಿರುದ್ಧವೇ ದೂರು ದಾಖಲಿಸಿದ್ದರು.

Mangalore Hindu activist gets life threat via internet call, says we will surely kill you, A case has been registered at Kankanady Town Police Station. We have already targeted three to kill we will kill you also.