ಬ್ರೇಕಿಂಗ್ ನ್ಯೂಸ್
09-08-22 01:38 pm HK News Desk ಕ್ರೈಂ
ಲಖನೌ, ಆಗಸ್ಟ್ 9: ಪ್ರಿಯಕರನ ಕತ್ತು ಸೀಳಿ ಕೊಲೆ ಮಾಡಿ, ಮೃತದೇಹವನ್ನು ಟ್ರಾಲಿ ಬ್ಯಾಗ್ನಲ್ಲು ತುಂಬಿ ಸಾಗಿಸುತ್ತಿದ್ದ ಆರೋಪಿ ಮಹಿಳೆಯನ್ನು ಉತ್ತರ ಪ್ರದೇಶದ ಪೊಲೀಸರು ಬಂಧಿಸಿದ್ದಾರೆ.
ಕೊಲೆಯಾದ ಪ್ರಿಯಕರನ್ನು 22 ವರ್ಷದ ಫಿರೋಜ್ ಎಂದು ಗುರುತಿಸಲಾಗಿದೆ. ಈತ ವೃತ್ತಿಯಲ್ಲಿ ಕ್ಷೌರಿಕನಾಗಿದ್ದ. 36 ವರ್ಷದ ಪ್ರೇಯಸಿ ಪ್ರೀತಿ ಶರ್ಮಾ ಎಂಬಾಕೆಯಿಂದ ಬರ್ಬರವಾಗಿ ಹತ್ಯೆಯಾಗಿದ್ದಾನೆ. ಮದುವೆ ಆಗಲು ನಿಕಾರಿಸಿದ್ದಕ್ಕೆ ಪ್ರೀತಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ.
ಪ್ರೀತಿ ಮತ್ತು ಫಿರೋಜ್ ಕಳೆದ 4 ವರ್ಷಗಳಿಂದ ಒಟ್ಟಿಗೆ ಬಾಳುತ್ತಿದ್ದರು ಅಂದರೆ, ಲಿವಿಂಗ್ ರಿಲೇಶನ್ ಶಿಪ್ ನಲ್ಲಿದ್ದರು. ಪ್ರೀತಿಗೆ ಈಗಾಗಲೇ ಮದುವೆ ಆಗಿದ್ದು, ಮಕ್ಕಳ ಸಾವಿನ ಬಳಿಕ ಗಂಡನಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದಳು. ಈ ವೇಳೆ ಆಕೆಗೆ ಫಿರೋಜ್ ಪರಿಚಯವಾಗಿದೆ. ಇಬ್ಬರ ನಡುವಿನ ಪರಿಚಯ ಪ್ರೀತಿಗೆ ತಿರುಗಿ ಒಟ್ಟಿಗೆ ವಾಸಿಸುತ್ತಿದ್ದರು. ಆದರೆ, ಪ್ರೀತಿ ಮದುವೆ ಆಗುವಂತೆ ದುಂಬಾಲು ಬಿದ್ದಾಗ, ಮದುವೆ ಆಗಲು ಫಿರೋಜ್ ನಿರಾಕರಿಸುತ್ತಿದ್ದ. ಕೋಮುಗಲಭೆಗೆ ಕಾರಣವಾಗಬಹುದು ಎಂಬ ಕಾರಣ ನೀಡಿ ಮದುವೆಗೆ ನಿರಾಕರಿಸುತ್ತಿದ್ದ. ಇದೇ ವಿಚಾರಕ್ಕೆ ಇಬ್ಬರ ನಡುವೆ ಜಗಳ ನಡೆದಾಗ, ತಾಳ್ಮೆ ಕಳೆದುಕೊಂಡ ಪ್ರೀತಿ, ರೇಜರ್ ತೆಗೆದುಕೊಂಡು ಫಿರೋಜ್ ಕತ್ತು ಸೀಳಿ ಕೊಲೆ ಮಾಡಿದ್ದಾಳೆ. ಬಳಿಕ ದೊಡ್ಡದಾಗ ಟ್ರಾಲಿ ಬ್ಯಾಗ್ ತೆಗೆದುಕೊಂಡು ಮೃಹದೇಹವನ್ನು ಬೀಸಾಡಿ ಬರಲು ಹೋದಾಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾಳೆ.
ಸುಮಾರು ಒಂದು ದಿನಗಳ ಕಾಲ ಮೃತದೇಹವಿದ್ದ ಬ್ಯಾಗ್ ಅನ್ನು ಅಪಾರ್ಟ್ಮೆಂಟ್ ಒಳಗೆ ಇಟ್ಟಿದ್ದಳು. ಜನಜಂಗುಳಿ ಇರುವ ಪ್ರದೇಶದಲ್ಲಿ ಎಸೆದು ಬರಲು ಯತ್ನಿಸುತ್ತಿದ್ದಳು. ಆದರೆ, ಅದೇ ಏರಿಯಾದಲ್ಲಿ ಗಸ್ತು ತಿರುಗುತ್ತಿದ್ದ ಪೊಲೀಸರು ಅನುಮಾನಗೊಂಡು ಆಕೆಯನ್ನು ತಡೆದು ಪ್ರಶ್ನಿಸಿದ್ದಾರೆ. ಅಲ್ಲದೆ, ಬ್ಯಾಗ್ ಓಪನ್ ಮಾಡುವಂತೆ ಕೇಳಿದ್ದಾರೆ. ಮೃತದೇಹ ಇದ್ದುದ್ದನ್ನು ನೋಡಿ ಆಕೆಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆರಂಭದಲ್ಲಿ ಇದೊಂದು ಅಪಘಾತ ಎಂದು ಹೇಳಿದ್ದ ಪ್ರೀತಿ, ಕೊನೆಗೆ ತಪ್ಪು ಒಪ್ಪಿಕೊಂಡು ಜೈಲು ಪಾಲಾಗಿದ್ದಾಳೆ.
Ghaziabad Police has arrested a woman identified as Preeti Sharma for allegedly killing her live-in partner identified as a barber Firoz. Police said Sharma killed Firoz by slitting his throat with a razor. She was arrested by the Police while attempting to dispose of the body that she had stuffed in a trolley bag. She was planning to leave the dead body-stuffed suitcase on a train.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm