ಬ್ರೇಕಿಂಗ್ ನ್ಯೂಸ್
09-08-22 01:38 pm HK News Desk ಕ್ರೈಂ
ಲಖನೌ, ಆಗಸ್ಟ್ 9: ಪ್ರಿಯಕರನ ಕತ್ತು ಸೀಳಿ ಕೊಲೆ ಮಾಡಿ, ಮೃತದೇಹವನ್ನು ಟ್ರಾಲಿ ಬ್ಯಾಗ್ನಲ್ಲು ತುಂಬಿ ಸಾಗಿಸುತ್ತಿದ್ದ ಆರೋಪಿ ಮಹಿಳೆಯನ್ನು ಉತ್ತರ ಪ್ರದೇಶದ ಪೊಲೀಸರು ಬಂಧಿಸಿದ್ದಾರೆ.
ಕೊಲೆಯಾದ ಪ್ರಿಯಕರನ್ನು 22 ವರ್ಷದ ಫಿರೋಜ್ ಎಂದು ಗುರುತಿಸಲಾಗಿದೆ. ಈತ ವೃತ್ತಿಯಲ್ಲಿ ಕ್ಷೌರಿಕನಾಗಿದ್ದ. 36 ವರ್ಷದ ಪ್ರೇಯಸಿ ಪ್ರೀತಿ ಶರ್ಮಾ ಎಂಬಾಕೆಯಿಂದ ಬರ್ಬರವಾಗಿ ಹತ್ಯೆಯಾಗಿದ್ದಾನೆ. ಮದುವೆ ಆಗಲು ನಿಕಾರಿಸಿದ್ದಕ್ಕೆ ಪ್ರೀತಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ.
ಪ್ರೀತಿ ಮತ್ತು ಫಿರೋಜ್ ಕಳೆದ 4 ವರ್ಷಗಳಿಂದ ಒಟ್ಟಿಗೆ ಬಾಳುತ್ತಿದ್ದರು ಅಂದರೆ, ಲಿವಿಂಗ್ ರಿಲೇಶನ್ ಶಿಪ್ ನಲ್ಲಿದ್ದರು. ಪ್ರೀತಿಗೆ ಈಗಾಗಲೇ ಮದುವೆ ಆಗಿದ್ದು, ಮಕ್ಕಳ ಸಾವಿನ ಬಳಿಕ ಗಂಡನಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದಳು. ಈ ವೇಳೆ ಆಕೆಗೆ ಫಿರೋಜ್ ಪರಿಚಯವಾಗಿದೆ. ಇಬ್ಬರ ನಡುವಿನ ಪರಿಚಯ ಪ್ರೀತಿಗೆ ತಿರುಗಿ ಒಟ್ಟಿಗೆ ವಾಸಿಸುತ್ತಿದ್ದರು. ಆದರೆ, ಪ್ರೀತಿ ಮದುವೆ ಆಗುವಂತೆ ದುಂಬಾಲು ಬಿದ್ದಾಗ, ಮದುವೆ ಆಗಲು ಫಿರೋಜ್ ನಿರಾಕರಿಸುತ್ತಿದ್ದ. ಕೋಮುಗಲಭೆಗೆ ಕಾರಣವಾಗಬಹುದು ಎಂಬ ಕಾರಣ ನೀಡಿ ಮದುವೆಗೆ ನಿರಾಕರಿಸುತ್ತಿದ್ದ. ಇದೇ ವಿಚಾರಕ್ಕೆ ಇಬ್ಬರ ನಡುವೆ ಜಗಳ ನಡೆದಾಗ, ತಾಳ್ಮೆ ಕಳೆದುಕೊಂಡ ಪ್ರೀತಿ, ರೇಜರ್ ತೆಗೆದುಕೊಂಡು ಫಿರೋಜ್ ಕತ್ತು ಸೀಳಿ ಕೊಲೆ ಮಾಡಿದ್ದಾಳೆ. ಬಳಿಕ ದೊಡ್ಡದಾಗ ಟ್ರಾಲಿ ಬ್ಯಾಗ್ ತೆಗೆದುಕೊಂಡು ಮೃಹದೇಹವನ್ನು ಬೀಸಾಡಿ ಬರಲು ಹೋದಾಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾಳೆ.
ಸುಮಾರು ಒಂದು ದಿನಗಳ ಕಾಲ ಮೃತದೇಹವಿದ್ದ ಬ್ಯಾಗ್ ಅನ್ನು ಅಪಾರ್ಟ್ಮೆಂಟ್ ಒಳಗೆ ಇಟ್ಟಿದ್ದಳು. ಜನಜಂಗುಳಿ ಇರುವ ಪ್ರದೇಶದಲ್ಲಿ ಎಸೆದು ಬರಲು ಯತ್ನಿಸುತ್ತಿದ್ದಳು. ಆದರೆ, ಅದೇ ಏರಿಯಾದಲ್ಲಿ ಗಸ್ತು ತಿರುಗುತ್ತಿದ್ದ ಪೊಲೀಸರು ಅನುಮಾನಗೊಂಡು ಆಕೆಯನ್ನು ತಡೆದು ಪ್ರಶ್ನಿಸಿದ್ದಾರೆ. ಅಲ್ಲದೆ, ಬ್ಯಾಗ್ ಓಪನ್ ಮಾಡುವಂತೆ ಕೇಳಿದ್ದಾರೆ. ಮೃತದೇಹ ಇದ್ದುದ್ದನ್ನು ನೋಡಿ ಆಕೆಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆರಂಭದಲ್ಲಿ ಇದೊಂದು ಅಪಘಾತ ಎಂದು ಹೇಳಿದ್ದ ಪ್ರೀತಿ, ಕೊನೆಗೆ ತಪ್ಪು ಒಪ್ಪಿಕೊಂಡು ಜೈಲು ಪಾಲಾಗಿದ್ದಾಳೆ.
Ghaziabad Police has arrested a woman identified as Preeti Sharma for allegedly killing her live-in partner identified as a barber Firoz. Police said Sharma killed Firoz by slitting his throat with a razor. She was arrested by the Police while attempting to dispose of the body that she had stuffed in a trolley bag. She was planning to leave the dead body-stuffed suitcase on a train.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm