ಬ್ರೇಕಿಂಗ್ ನ್ಯೂಸ್

Forensic Expert Dr Mahabala Shetty, Dharmasthala case: ಧರ್ಮಸ್ಥಳ ಸ್ನಾನಘಟ್ಟ ಬಳಿ 20ಕ್ಕೂ ಹೆಚ್ಚು ಕೊಳೆತ ಶವಗಳನ್ನು ಪೋಸ್ಟ್ ಮಾರ್ಟಂ ಮಾಡಿದ್ದೆ, ಅವನ್ನು ಅಲ್ಲಿಯೇ ಹೂಳಲಾಗಿತ್ತು ; ಪ್ರಕರಣಕ್ಕೆ ಸ್ಫೋಟಕ ತಿರುವು ಕೊಟ್ಟ ಫಾರೆನ್ಸಿಕ್ ತಜ್ಞ ಡಾ.ಮಹಾಬಲ ಶೆಟ್ಟಿ    |    ಕನಸು ಕಮರಿಸಿದ ಅಪಘಾತ ; ವೈದ್ಯರ ಎಡವಟ್ಟು, ಸಕಾಲದಲ್ಲಿ ಚಿಕಿತ್ಸೆ ಸಿಗದೆ ಕೈಕಾಲಿನ ಶಕ್ತಿಯೇ ಊನ, ಕಂಗೆಟ್ಟ ವಿಶ್ವಕರ್ಮ ಕುಟುಂಬಕ್ಕೆ ಕ್ರಿಶ್ಚಿಯನ್ ಗೆಳೆಯರ ಆಸರೆ ! ಅರ್ಧಕ್ಕೆ ಉಳಿದುಬಿಟ್ಟ ಮನೆಗೆ ದಿಕ್ಕಿಲ್ಲದ ಸ್ಥಿತಿ, ಬೆಳಕು ಹರಿಸೀತೆ ಸಹೃದಯರ ಹಾರೈಕೆ ?!    |    Kannada Producer Ganesh, Film Dharmasthala File, Movie: 'ಧರ್ಮಸ್ಥಳ ಫೈಲ್ಸ್' ಸಿನಿಮಾ ಘೋಷಿಸಿದ ಕನ್ನಡದ ನಿರ್ಮಾಪಕ ಎ. ಗಣೇಶ್ ; ಸಮಸ್ಯೆ ಆದ್ರೆ ಚಿತ್ರತಂಡವೇ ಹೊಣೆ ಎಂಬ ಕಂಡೀಷನ್! ಕತೆ ಇನ್ನಷ್ಟೇ ಬರೆಸಬೇಕೆಂದ ಚಿತ್ರತಂಡ     |   

ಹಾಲು ಮಾರುವ ಸೋಗಿನಲ್ಲಿ ಖೋಟಾ ನೋಟು ಜಾಲ ; ಬಿಜೆಪಿ ಮುಖಂಡ ಸೇರಿ ಮೂವರ ಬಂಧನ 

09-08-22 05:12 pm       HK News Desk   ಕ್ರೈಂ

ಹಾಲು ಮಾರುವ ಸೋಗಿನಲ್ಲಿ ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಬಿಜೆಪಿ ಮುಖಂಡ ಸಾಗರ್ ಕಾಶಪ್ಪ ಸೇರಿ ಮೂವರನ್ನು ಧಾರವಾಡ ಜಿಲ್ಲೆ ಕುಂದಗೋಳ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಹುಬ್ಬಳ್ಳಿ, ಆಗಸ್ಟ್ 9 : ಹಾಲು ಮಾರುವ ಸೋಗಿನಲ್ಲಿ ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಬಿಜೆಪಿ ಮುಖಂಡ ಸಾಗರ್ ಕಾಶಪ್ಪ ಸೇರಿ ಮೂವರನ್ನು ಧಾರವಾಡ ಜಿಲ್ಲೆ ಕುಂದಗೋಳ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 500 ರೂ. ಮುಖಬೆಲೆಯ 47 ಖೋಟಾ ನೋಟು ಮತ್ತು ಕಲರ್ ಜೆರಾಕ್ಸ್ ಯಂತ್ರವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಧಾರವಾಡ ಬಿಜೆಪಿ ಗ್ರಾಮಾಂತರ ಜಿಲ್ಲೆಯ ಸಾಮಾಜಿಕ ಜಾಲತಾಣದ ಸದಸ್ಯನಾಗಿರುವ ಸಾಗರ ಕಾಶಪ್ಪನವರ ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿಗಳಿದ್ದವು.‌ ಅದರಂತೆ, ಕುಂದಗೋಳ ಸಿಪಿಐ ಮಾರುತಿ ಗುಳಾರಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಕುಂದಗೋಳದಲ್ಲಿ ಹಾಲಿನ ಅಂಗಡಿ ಇಟ್ಟುಕೊಂಡಿರುವ ಸಾಗರ್, ಬೇರೆ ಕಡೆಯಿಂದ ಖೋಟಾ ನೋಟು ತಂದು ಹಾಲಿನ ವ್ಯಾಪಾರದ ಜೊತೆಗೆ ಕುಂದಗೋಳ ಸುತ್ತಮುತ್ತ ನಕಲಿ ನೋಟು ಚಲಾವಣೆ ನಡೆಸುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ.

ಈತನ ಮಿಲ್ಕ್ ಪಾರ್ಲರ್ ಕುಂದಗೋಳ ಪಟ್ಟಣದ ಪೊಲೀಸ್ ಠಾಣೆಯ ಕೂಗಳತೆ ದೂರದಲ್ಲಿದ್ದು ಖೋಟಾ ನೋಟನ್ನು ಸಾರ್ವಜನಿಕರಿಗೆ ನೀಡುತ್ತಿದ್ದಾಗಲೇ ಪೊಲೀಸರು ಅರೆಸ್ಟ್​ ಮಾಡಿದ್ದಾರೆ.

Bjp leader among three arrested for fake note business in Hubbali. The police have succeeded in seizing colour printers and notes of different denominations.