ಬ್ರೇಕಿಂಗ್ ನ್ಯೂಸ್
10-08-22 12:16 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 10: ದನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಕಾರ್ಯಾಚರಣೆಗೆ ತೆರಳಿದ್ದ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆಗೆ ಯತ್ನಿಸಿದ್ದ ಪ್ರಕರಣದಲ್ಲಿ ಬಜ್ಪೆ ಪೊಲೀಸರು ಅದ್ಯಪಾಡಿ ನಿವಾಸಿಯನ್ನು ಬಂಧಿಸಿದ್ದಾರೆ. ಅದ್ಯಪಾಡಿ ಮೋಂತಿಬೈಲು ನಿವಾಸಿ ಮೊಹಮ್ಮದ್ ಅಜರುದ್ದೀನ್ (31) ಬಂಧಿತ.
ಪೊಲೀಸರು ಆತನನ್ನು ವಶಕ್ಕೆ ಪಡೆಯಲು ಮನೆಗೆ ತೆರಳಿದ್ದಾಗ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ಬೈದು ತಪ್ಪಿಸಿಕೊಂಡಿದ್ದ. ಘಟನೆ ಸಂಬಂಧಿಸಿ ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಪೊಲೀಸ್ ಕಮಿಷನರ್ ಶಶಿಕುಮಾರ್ ಸೂಚನೆಯಂತೆ ಆರೋಪಿಯನ್ನು ಬಂಧಿಸಿದ್ದಾರೆ.
ಇತ್ತೀಚೆಗೆ ಮೂಡುಬಿದ್ರೆಯ ಕಲ್ಲಬೆಟ್ಟು ಮತ್ತು ಕಾರ್ಕಳದ ಬಂಗ್ಲೆಗುಡ್ಡೆಯಲ್ಲಿ ದನ ಕಳ್ಳತನಗೈದ ಪ್ರಕರಣದಲ್ಲಿ ಭಾಗಿಯಾಗಿದ್ದ ಅಜರುದ್ದೀನನ್ನು ಪೊಲೀಸರು ವಶಕ್ಕೆ ಪಡೆಯಲು ಹೋಗಿದ್ದಾಗ ಘಟನೆ ನಡೆದಿತ್ತು. ಮನೆ ಕಳ್ಳತನ ಮತ್ತು ದನ ಕಳವು ವಿಚಾರದಲ್ಲಿ ಕಾರ್ಕಳ, ಮೂಡುಬಿದ್ರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಹೊಯ್ಸಳ ಪೊಲೀಸರ ಮೇಲೆ ಹಲ್ಲೆ ಯತ್ನ
ಮತ್ತೊಂದು ಇದೇ ರೀತಿಯ ಪ್ರಕರಣದಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಕ್ಕಾಗಿ ಬಂದರು ಪೊಲೀಸರು ಆಟೋ ಚಾಲಕ ವಿನೋದ್ ಪೂಜಾರಿ ಎಂಬಾತನನ್ನು ಬಂಧಿಸಿದ್ದಾರೆ. ನಗರದ ಸ್ಟೇಟ್ ಬ್ಯಾಂಕ್ ಬಳಿ ರಾವ್ ಅಂಡ್ ಸರ್ಕಲ್ ಪ್ರದೇಶದಲ್ಲಿ ಹೊಯ್ಸಳ ಪೊಲೀಸರು ಟ್ರಾಫಿಕ್ ಜಾಮ್ ಸರಿಪಡಿಸುತ್ತಿದ್ದಾಗ ಆಟೋ ಚಾಲಕ ಕುಡಿದ ಮತ್ತಿನಲ್ಲಿ ಹಲ್ಲೆಗೆ ಯತ್ನಿಸಿದ್ದಲ್ಲದೆ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ. ಈ ಬಗ್ಗೆ ಬಂದರು ಠಾಣೆಯಲ್ಲಿ ಕೇಸು ದಾಖಲಾಗಿದ್ದು ಆರೋಪಿಯನ್ನು ಬಂಧಿಸಿದ್ದಾರೆ.
Bajpe police have arrested accused Mohammed Azharuddin (31) alias Azhar, a resident of Adyapadi Montibail for abusing, assaulting and obstructing the police from carrying out their duties. On police interrogation, it came to light that Azhar was involved in cases of cattle thefts recently in Kallabettuva in Moodbidri and Bangelgudde in Karkala. Azhar was said to be absconding and avoiding arrest.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm