ಬ್ರೇಕಿಂಗ್ ನ್ಯೂಸ್
11-08-22 03:10 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 11: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳೆಂದು ಗುರುತಿಸಲ್ಪಟ್ಟ ಕೃತ್ಯದಲ್ಲಿ ನೇರ ಶಾಮೀಲಾಗಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೇರಳ ಗಡಿಭಾಗ ತಲಪಾಡಿ ಚೆಕ್ ಪೋಸ್ಟ್ ಬಳಿ ಬಂಧಿಸಲಾಗಿದೆ ಎಂದು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.
ಮಂಗಳೂರಿನಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಸುದ್ದಿಗೋಷ್ಟಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಸುಳ್ಯದ ಶಿಹಾಬುದ್ದೀನ್ (33), ರಿಯಾಜ್ ಅಂಕತ್ತಡ್ಕ (27) ಮತ್ತು ಬಶೀರ್ ಎಲಿಮಲೆ (28) ಬಂಧಿತರು. ಶಿಹಾಬ್ ಸುಳ್ಯದಲ್ಲಿ ಕ್ಯಾಂಪ್ಕೋ ಸಂಸ್ಥೆಗೆ ಕೊಕ್ಕೋ ಪೂರೈಕೆ ಮಾಡುವ ಕೆಲಸ ಮಾಡುತ್ತಿದ್ದ. ರಿಯಾಜ್, ಬೆಳ್ಳಾರೆ ಮತ್ತು ಸುಳ್ಯದಲ್ಲಿ ಅಂಗಡಿಗಳಿಗೆ ಚಿಕನ್ ಸಪ್ಲೈ ಮಾಡುತ್ತಿದ್ದ. ಬಶೀರ್ ಹೊಟೇಲಿನಲ್ಲಿ ಕೆಲಸ ಮಾಡುತ್ತಿದ್ದ. ಇವರನ್ನು ಸುಳ್ಯ ಇನ್ಸ್ ಪೆಕ್ಟರ್ ನವೀನಚಂದ್ರ ಜೋಗಿ ಅವರ ತಂಡವು ನಿಗಾ ಇಟ್ಟು ಬಂಧಿಸಿದೆ.

ಸಿಐಡಿ ಎಸ್ಪಿ ಅನುಚೇತ್, ಹಾಸನ ಎಸ್ಪಿ ಹರಿರಾಮ್ ಶಂಕರ್ ಪ್ರಕರಣದಲ್ಲಿ ಆರೋಪಿಗಳ ಪತ್ತೆಗೆ ಸಹಕಾರ ನೀಡಿದ್ದಾರೆ. ಅಲ್ಲದೆ, ಚಿಕ್ಕಮಗಳೂರು, ಮಂಡ್ಯ, ಉಡುಪಿ ಪೊಲೀಸರು ಸಹಕಾರ ನೀಡಿದ್ದಾರೆ. ಪ್ರವೀಣ್ ಪ್ರಕರಣದಲ್ಲಿ ಆರೋಪಿಗಳ ಪತ್ತೆಗಾಗಿ ಮುಖ್ಯಮಂತ್ರಿ ಮತ್ತು ಗೃಹ ಮಂತ್ರಿಯವರು ಒತ್ತಡಕ್ಕೆ ಒಳಗಾಗಿದ್ದರು. ಪದೇ ಪದೇ ವಾಸಸ್ಥಳ ಬದಲಿಸುತ್ತಿದ್ದರಿಂದ ಆರೋಪಿಗಳ ಪತ್ತೆ ಸವಾಲಾಗಿತ್ತು. ಕೇರಳ ಗಡಿಭಾಗದಲ್ಲಿ ನಿಗಾ ಇಟ್ಟಿದ್ದ ಪೊಲೀಸರು ಇವರು ಜಾಗ ಬದಲಿಸುತ್ತಿದ್ದ ವೇಳೆಯಲ್ಲಿ ಬಂಧಿಸಿದ್ದಾರೆ ಎಂದು ಎಡಿಜಿಪಿ ತಿಳಿಸಿದ್ದಾರೆ.
ಆರೋಪಿಗಳಿಗೆ ಯಾವುದೇ ಸಂಘಟನೆಗಳ ಲಿಂಕ್ ಇದೆಯೇ ಎಂಬ ಪ್ರಶ್ನೆಗೆ, ಇವರು ಮೇಲ್ನೋಟಕ್ಕೆ ಪಿಎಫ್ಐ- ಎಸ್ಡಿಪಿಐ ಜೊತೆ ಲಿಂಕ್ ಹೊಂದಿರುವ ಬಗ್ಗೆ ಶಂಕೆಯಿದೆ. ಆದರೆ ಈಗಲೇ ಅದರ ಬಗ್ಗೆ ನಾವು ಹೇಳಲು ಬರುವುದಿಲ್ಲ. ಅವರ ಹಿನ್ನೆಲೆ ಏನು, ಯಾಕಾಗಿ ಪ್ರವೀಣ್ ಹತ್ಯೆ ಮಾಡಿದ್ದಾರೆ ಎಂಬ ಬಗ್ಗೆ ಇನ್ನಷ್ಟು ತನಿಖೆ ನಡೆಸಬೇಕಾಗಿದೆ. ಇವರು ಕೃತ್ಯ ಎಸಗಿದ ಬಳಿಕ ಮೊದಲು ಕಾಸರಗೋಡಿನ ಮಾಲಿಕುದ್ದೀನಾರ್ ಮಸೀದಿ ಬಳಿಗೆ ಹೋಗಿದ್ದರು. ಅಲ್ಲಿಂದ ಬೇರೆ ಬೇರೆ ಕಡೆಗಳಿಗೆ ತೆರಳಿ ಅಡಗಿಕೊಂಡಿದ್ದರು. ಜಾಗ ಬದಲಿಸಲು ಯಾರೆಲ್ಲ ಸಹಾಯ ಮಾಡಿದ್ದಾರೆ, ಅವರ ಮೇಲೆ ಕ್ರಮ ಕೈಗೊಳ್ತೇವೆ. ಆರೋಪಿಗಳು ಪತ್ತೆಯಾಗದೇ ಇದ್ದರೆ ವಾರೆಂಟ್ ಹೊರಡಿಸಿ ಆಸ್ತಿ ಮುಟ್ಟುಗೋಲು ಹಾಕಲು ಮುಂದಾಗಿದ್ದೆವು. ಆದರೆ ಆರೋಪಿಗಳು ಈಗ ಸಿಕ್ಕಿಬಿದ್ದಿದ್ದಾರೆ.

ಪ್ರವೀಣ್ ಯಾಕಾಗಿ ಟಾರ್ಗೆಟ್ ಆಗಿದ್ದ ಅನ್ನೋದ್ರ ಬಗ್ಗೆ ತಿಳಿಯಲು ಇನ್ನಷ್ಟು ತನಿಖೆ ನಡೆಸಲಾಗುವುದು. ಕೃತ್ಯಕ್ಕೆ ಸ್ಪ್ಲೆಂಡರ್ ಬೈಕನ್ನು ಬಳಕೆ ಮಾಡಿದ್ದರು. ಆನಂತರ, ಪರಾರಿಯಾಗಲು ಐದಾರು ವಾಹನ ಬಳಕೆ ಮಾಡಿದ್ದಾರೆ. ಅವನ್ನು ವಶಕ್ಕೆ ಪಡೆಯಲಾಗುವುದು. ಕೃತ್ಯಕ್ಕೆ ಬಳಸಿದ್ದ ಹತ್ಯಾರುಗಳನ್ನು ವಶಕ್ಕೆ ತೆಗೆಯಲಾಗುವುದು ಎಂದರು ಎಡಿಜಿಪಿ. ಈಗಾಗಲೇ ಎನ್ಐಎ ಅಧಿಕಾರಿಗಳು ತನಿಖೆಗೆ ಸಾಥ್ ನೀಡಿದ್ದಾರೆ. ಮುಂದಿನ ತನಿಖೆಯನ್ನು ಎನ್ಐಎ ಅಧಿಕಾರಿಗಳು ಮಾಡಲಿದ್ದಾರೆ. ಯಾರೆಲ್ಲ ಸಹಕಾರ ನೀಡಿದ್ದಾರೆ ಎಂಬುದನ್ನು ಅವರು ಪತ್ತೆ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.
Praveen Bellare murder three arrested including one who was the mastermind to murder Praveen have been arrested from Kerala border says ADGP Alok Kumar.
28-07-26 08:12 pm
HK News Staffer
ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶ...
25-07-26 03:06 pm
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
28-07-26 10:28 pm
HK News Desk
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
ಜಾಲತಾಣದಲ್ಲಿ ಜೆನ್ ಜೀಗಳ ಅಬ್ಬರ ; ಕಾಕ್ರೋಚ್ ಬೆನ್ನಲ...
27-07-26 09:48 pm
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
28-07-26 08:11 pm
HK News Staffer
Lavanya Murder Case, News: ಲಾವಣ್ಯ ಹತ್ಯೆ ಪ್ರಕರ...
28-07-26 07:07 pm
ವಿಚ್ಛೇದಿತ ಮಹಿಳೆಗೆ ಫೇಸ್ಬುಕ್ನಲ್ಲಿ ಪ್ರೀತಿಯ ನಾಟ...
28-07-26 12:28 pm
12 ವರ್ಷಗಳ ಹಿಂದಿನ ಗಂಗಾಧರ ಪಾಂಗಾಳ ಕೊಲೆ ಪ್ರಕರಣ ;...
27-07-26 11:07 pm
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm