ಬ್ರೇಕಿಂಗ್ ನ್ಯೂಸ್
04-10-20 02:47 pm Headline Karnataka News Network ಕ್ರೈಂ
ಮಂಗಳೂರು, ಅಕ್ಟೋಬರ್. 04 : ಮನೆಯಲ್ಲಿ ಯಾರೂ ಇಲ್ಲದ ವೇಳೆ ಸಮಯ ನೋಡಿಕೊಂಡು ಮನೆಗೆ ನುಗ್ಗಿ ಚಿನ್ನಾಭರಣ ಕಳವುಗೈದ ಮೂವರು ಮಹಿಳೆಯರನ್ನು ಕದ್ರಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಹಾಸನ ಜಿಲ್ಲೆಯ ಹೊಳೆ ನರಸೀಪುರದ ಶಿವಗಾಮಿ(37), ಮಂಜು(26), ಲಚುಮಿ(30) ಎಂದು ಗುರುತಿಸಲಾಗಿದೆ.
ಮಂಗಳೂರು ನಗರದ ಶಿವಬಾಗ್ ನ ತಾರೆತೋಟದ ಬಳಿ ಸೆಪ್ಟೆಂಬರ್ 13 ರಂದು ರೂಪಾ ಎಂಬವರು ಮಧ್ಯಾಹ್ನ ಹೊತ್ತಿಗೆ ಮಕ್ಕಳ ಜೊತೆ ಅಂಗಡಿಗೆ ತೆರಳಿದ್ದರು. ಸ್ವಲ್ಪ ಹೊತ್ತಿನಲ್ಲಿ ಮರಳಿ ಬಂದಾಗ ಮನೆಯ ಬಾಗಿಲು ತೆರೆದಿತ್ತು. ಮನೆಯಲ್ಲಿದ್ದ 1.60 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ 18 ,000 ನಗದು ಕಳವಾಗಿತ್ತು. ಬಳಿಕ ರೂಪಾ, ಕದ್ರಿ ಠಾಣೆಗೆ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಮೂವರು ಮಹಿಳಾ ಕಳ್ಳಿಯರನ್ನು ಬಂಧಿಸಿದ್ದಾರೆ.
ಅಪರಾಧಿಗಳಿಂದ ಕಳವಾಗಿದ್ದ ಚಿನ್ನಾಭರಣ ಹಾಗೂ ಕಳವು ಮಾಡಲು ಉಪಯೋಗಿಸಿದ ಸಾಧನಗಳನ್ನು ವಶಕ್ಕೆ ಪಡೆಯಲಾಗಿದೆ.
ಮಂಗಳೂರು ನಗರದ ಪೊಲೀಸ್ ಆಯುಕ್ತರಾದ ವಿಕಾಸ್ ಕುಮಾರ್, ಉಪ ಪೊಲೀಸ್ ಆಯುಕ್ತ ಅರುನಂಶಗಿರಿ, ಉಪ ಪೊಲೀಸ್ ಆಯುಕ್ತ ಅಪರಾಧ ಹಾಗೂ ಸಂಚಾರ ವಿಭಾಗ ವಿನಯ್ ಗಾವಂಕರ್, ಸಹಾಯಕ ಪೊಲೀಸ್ ಆಯುಕ್ತ ಎಂ ಜಗದೀಶ್, ಪೂರ್ವ ಪೊಲೀಸ್ ಠಾಣೆಯ ನಿರೀಕ್ಷಕರಾದ ಸವಿತೃ ತೇಜ ಪಿ.ಡಿ, ಪಿ ಎಸ್ ಐ ಅನಿತಾ ನಿಕ್ಕಂ, ಪಿ ಎಸ್ ಐ ಜ್ಞಾನಶೇಕರ್, ಎ ಎಸ್ ಐ ಶಶಿಧರ್ ಶೆಟ್ಟಿ ಜನಾರ್ಧನ ನಾಯ್ಕ್ ಮತ್ತು ಸಿಬ್ಬಂದಿಗಳಾದ ಜಯಾನಂದ, ಉಮೇಶ್ ಕೊಟ್ಟಾರಿ, ಆಶಿತ್, ದಿನೇಶ್, ರಾಘವೇಂದ್ರ, ನಾಗರಾಜ, ದೇವಿ ಪ್ರಸಾದ್, ಪ್ರಮೀಳಾ ರವರು ಆರೋಪಿಗಳ ಪತ್ತೆ ಕಾರ್ಯದಲ್ಲಿ ಭಾಗವಹಿಸಿದ್ದರು.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
04-04-26 10:53 pm
HK News Staffer
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm