ಬ್ರೇಕಿಂಗ್ ನ್ಯೂಸ್
04-10-20 02:47 pm Headline Karnataka News Network ಕ್ರೈಂ
ಮಂಗಳೂರು, ಅಕ್ಟೋಬರ್. 04 : ಮನೆಯಲ್ಲಿ ಯಾರೂ ಇಲ್ಲದ ವೇಳೆ ಸಮಯ ನೋಡಿಕೊಂಡು ಮನೆಗೆ ನುಗ್ಗಿ ಚಿನ್ನಾಭರಣ ಕಳವುಗೈದ ಮೂವರು ಮಹಿಳೆಯರನ್ನು ಕದ್ರಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಹಾಸನ ಜಿಲ್ಲೆಯ ಹೊಳೆ ನರಸೀಪುರದ ಶಿವಗಾಮಿ(37), ಮಂಜು(26), ಲಚುಮಿ(30) ಎಂದು ಗುರುತಿಸಲಾಗಿದೆ.
ಮಂಗಳೂರು ನಗರದ ಶಿವಬಾಗ್ ನ ತಾರೆತೋಟದ ಬಳಿ ಸೆಪ್ಟೆಂಬರ್ 13 ರಂದು ರೂಪಾ ಎಂಬವರು ಮಧ್ಯಾಹ್ನ ಹೊತ್ತಿಗೆ ಮಕ್ಕಳ ಜೊತೆ ಅಂಗಡಿಗೆ ತೆರಳಿದ್ದರು. ಸ್ವಲ್ಪ ಹೊತ್ತಿನಲ್ಲಿ ಮರಳಿ ಬಂದಾಗ ಮನೆಯ ಬಾಗಿಲು ತೆರೆದಿತ್ತು. ಮನೆಯಲ್ಲಿದ್ದ 1.60 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ 18 ,000 ನಗದು ಕಳವಾಗಿತ್ತು. ಬಳಿಕ ರೂಪಾ, ಕದ್ರಿ ಠಾಣೆಗೆ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಮೂವರು ಮಹಿಳಾ ಕಳ್ಳಿಯರನ್ನು ಬಂಧಿಸಿದ್ದಾರೆ.
ಅಪರಾಧಿಗಳಿಂದ ಕಳವಾಗಿದ್ದ ಚಿನ್ನಾಭರಣ ಹಾಗೂ ಕಳವು ಮಾಡಲು ಉಪಯೋಗಿಸಿದ ಸಾಧನಗಳನ್ನು ವಶಕ್ಕೆ ಪಡೆಯಲಾಗಿದೆ.
ಮಂಗಳೂರು ನಗರದ ಪೊಲೀಸ್ ಆಯುಕ್ತರಾದ ವಿಕಾಸ್ ಕುಮಾರ್, ಉಪ ಪೊಲೀಸ್ ಆಯುಕ್ತ ಅರುನಂಶಗಿರಿ, ಉಪ ಪೊಲೀಸ್ ಆಯುಕ್ತ ಅಪರಾಧ ಹಾಗೂ ಸಂಚಾರ ವಿಭಾಗ ವಿನಯ್ ಗಾವಂಕರ್, ಸಹಾಯಕ ಪೊಲೀಸ್ ಆಯುಕ್ತ ಎಂ ಜಗದೀಶ್, ಪೂರ್ವ ಪೊಲೀಸ್ ಠಾಣೆಯ ನಿರೀಕ್ಷಕರಾದ ಸವಿತೃ ತೇಜ ಪಿ.ಡಿ, ಪಿ ಎಸ್ ಐ ಅನಿತಾ ನಿಕ್ಕಂ, ಪಿ ಎಸ್ ಐ ಜ್ಞಾನಶೇಕರ್, ಎ ಎಸ್ ಐ ಶಶಿಧರ್ ಶೆಟ್ಟಿ ಜನಾರ್ಧನ ನಾಯ್ಕ್ ಮತ್ತು ಸಿಬ್ಬಂದಿಗಳಾದ ಜಯಾನಂದ, ಉಮೇಶ್ ಕೊಟ್ಟಾರಿ, ಆಶಿತ್, ದಿನೇಶ್, ರಾಘವೇಂದ್ರ, ನಾಗರಾಜ, ದೇವಿ ಪ್ರಸಾದ್, ಪ್ರಮೀಳಾ ರವರು ಆರೋಪಿಗಳ ಪತ್ತೆ ಕಾರ್ಯದಲ್ಲಿ ಭಾಗವಹಿಸಿದ್ದರು.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm