ಬ್ರೇಕಿಂಗ್ ನ್ಯೂಸ್
12-08-22 07:50 pm HK News Desk ಕ್ರೈಂ
ರಾಮನಗರ, ಆಗಸ್ಟ್ 12 : ಅಜ್ಜಿಯೊಬ್ಬರು ಮೊಮ್ಮಗಳ ಹೆಸರಿನಲ್ಲಿ ಬ್ಯಾಂಕ್ನಲ್ಲಿ ಠೇವಣಿಯಿಟ್ಟಿದ್ದ ಹಣವನ್ನು ನಕಲಿ ದಾಖಲೆ ಹಾಗೂ ನಕಲಿ ಮೊಮ್ಮಗಳನ್ನು ಬ್ಯಾಂಕಿಗೆ ತೋರಿಸಿ ಕಬಳಿಸಿದ ಪ್ರಕರಣ ರಾಮನಗರ ಜಿಲ್ಲೆಯ ಬಿಡದಿಯಲ್ಲಿ ನಡೆದಿದೆ.
ರಾಮನಹಳ್ಳಿಯ ವೃದ್ಧೆ ನಂಜಮ್ಮ ಎಂಬವರು ಬಿಡದಿಯ ಕೆನರಾ ಬ್ಯಾಂಕ್ನಲ್ಲಿ ಮೊಮ್ಮಗಳು ಜ್ಞಾನೇಶ್ವರಿ ಹೆಸರಿನಲ್ಲಿ 5 ಲಕ್ಷ ರೂ. ಠೇವಣಿ ಇಟ್ಟಿದ್ದರು. ಕೆಲವು ಸಮಯದ ಬಳಿಕ ನಂಜಮ್ಮ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ಅಜ್ಜಿಯ ಸಂಬಂಧಿಕರಾಗಿದ್ದ ರತ್ಮಮ್ಮ ಮತ್ತು ಜಗದೀಶ್ ಎಂಬವರು ಬ್ಯಾಂಕ್ಗೆ ಜ್ಞಾನೇಶ್ವರಿ ಹೆಸರಲ್ಲಿ ಬಾಲಕಿಯನ್ನು ಕರೆತಂದಿದ್ದು ತಮ್ಮದೇ ಮಗಳು ಜ್ಞಾನೇಶ್ವರಿ. ತಾಯಿ ನಂಜಮ್ಮ ತೀರಿಕೊಂಡಿದ್ದಾರೆಂದು ಜಗದೀಶ್ ದಾಖಲೆ ತೋರಿಸಿದ್ದರು. ಅಲ್ಲದೆ, ಠೇವಣಿ ಹಣಕ್ಕೆ ಜ್ಞಾನೇಶ್ವರಿ ತಂದೆಯಾದ ತನ್ನನ್ನು ಮೈನರ್ ಗಾರ್ಡಿಯನ್ ಆಗಿಸಿ, ಜಂಟಿ ಖಾತೆಯಲ್ಲಿ ಠೇವಣಿ ವರ್ಗಾವಣೆ ಮಾಡಲು ಹೇಳಿದ್ದರು. ಅಲ್ಲದೆ ನಂಜಮ್ಮರ ಮರಣ ಪ್ರಮಾಣಪತ್ರ, ಠೇವಣಿ ಹಣದ ಬಾಂಡ್ ನಂಬರ್ ಸಹಿತ ದಾಖಲೆಗಳನ್ನು ಬ್ಯಾಂಕ್ಗೆ ನೀಡಿದ್ದರು. ಇದರ ಆಧಾರದಲ್ಲಿ ದಾಖಲೆಗಳನ್ನು ಪರಿಶೀಲಿಸಿದ ಬ್ಯಾಂಕ್ ಸಿಬ್ಬಂದಿ ಮೊಮ್ಮಗಳು ಜ್ಞಾನೇಶ್ವರಿ ಹೆಸರಿನಲ್ಲಿ ನಂಜಮ್ಮ ಇಟ್ಟಿದ್ದ 5 ಲಕ್ಷ ರೂ.ಗಳನ್ನು ಜಗದೀಶ್ ಅವರ ಹೆಸರಿನಲ್ಲಿ ತೆರೆದಿದ್ದ ಜಂಟಿ ಉಳಿತಾಯ ಖಾತೆಗೆ 2022ರ ಜೂನ್ 23ರಂದು ವರ್ಗಾವಣೆ ಮಾಡಿದ್ದರು.
ಇದಾದ ನಂತರ 2022ರ ಜುಲೈ 1ರಂದು ಮೃತ ನಂಜಮ್ಮ ಅವರ ಮಗ ಚಂದ್ರಶೇಖರ್ ಬ್ಯಾಂಕ್ಗೆ ಬಂದು ತನ್ನ ಮಗಳು ಜ್ಞಾನೇಶ್ವರಿ ಹೆಸರಿನಲ್ಲಿ ತಾಯಿ ಇಟ್ಟಿರುವ ಠೇವಣಿ ಹಣದ ಬಗ್ಗೆ ವಿಚಾರಿಸಿದ್ದರು. ಬ್ಯಾಂಕ್ ಸಿಬ್ಬಂದಿ ದಾಖಲೆ ಪರಿಶೀಲಿಸಿದಾಗ, ಇದಕ್ಕೂ ಹಿಂದೆ ರತ್ನಮ್ಮ ಹಾಗೂ ಜಗದೀಶ್ ಅವರು ಬ್ಯಾಂಕ್ಗೆ ಸಲ್ಲಿಸಿದ್ದ ದಾಖಲೆಗಳು ನಕಲಿ ಅಲ್ಲದೆ, ಬ್ಯಾಂಕ್ಗೆ ಕರೆತಂದಿದ್ದ ಜ್ಞಾನೇಶ್ವರಿಯೂ ನಕಲಿ ಎಂದು ಗೊತ್ತಾಗಿದೆ. ರತ್ನಮ್ಮ ಹಾಗೂ ಜಗದೀಶ್ ಮೋಸ ಎಸಗಿರುವ ಬಗ್ಗೆ ಬ್ಯಾಂಕ್ ಮ್ಯಾನೇಜರ್ ಕೇಶವಮೂರ್ತಿ ಬಿಡದಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
Family loot Rs 5 lakhs by showing fake grand daughter in the bank at Ramnagara.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm