ಬ್ರೇಕಿಂಗ್ ನ್ಯೂಸ್
13-08-22 04:37 pm Udupi Correspondent ಕ್ರೈಂ
ಪಡುಬಿದ್ರಿ, ಆಗಸ್ಟ್ 13 : ಮಹಿಳೆಯರಿದ್ದ ಮನೆಗೆ ಬಂದಿದ್ದ ಯುವಕನೊಬ್ಬ ಅವರಲ್ಲಿ ಒಬ್ಬರನ್ನು ಮದುವೆಯಾಗುವುದಾಗಿ ನಂಬಿಸಿ ಅವರು ಧರಿಸಿದ್ದ ಆಭರಣಗಳನ್ನೇ ಉಪಾಯದಿಂದ ಹೊತ್ತೊಯ್ದ ಘಟನೆ ಪಲಿಮಾರಿನಲ್ಲಿ ನಡೆದಿದ್ದು, ಈ ಬಗ್ಗೆ ಅಕ್ಕ-ತಂಗಿ ಪಡುಬಿದ್ರಿ ಪೊಲೀಸರಿಗೆ ದೂರು ನೀಡಿದ್ದಾರೆ.
ಕಳೆದ ಮೇ ತಿಂಗಳ ಮೊದಲ ವಾರದಲ್ಲಿ ತನ್ನನ್ನು ಹರೀಶ್ ಪುತ್ತೂರು ಎಂದು ಪರಿಚಯಿಸಿದ್ದ ಅಪರಿಚಿತ ವ್ಯಕ್ತಿಯೊಬ್ಬ ಆ ಮನೆಗೆ ಬಂದಿದ್ದ. ವಿಶ್ವಕರ್ಮ ಸಮುದಾಯದ ವ್ಯಕ್ತಿಯೆಂದು ಹೇಳಿಕೊಂಡಿದ್ದಲ್ಲದೆ, ತನಗೆ ಕುಂದಾಪುರದಲ್ಲಿ 80 ಲಕ್ಷ ರೂಪಾಯಿ ಮೌಲ್ಯದ ಆಸ್ತಿ ಇದೆಯೆಂದು ಹೇಳಿಕೊಂಡಿದ್ದ. ಅದನ್ನು ಮಾರಾಟ ಮಾಡಲು ನೋಡುತ್ತಿದ್ದೇನೆ. ಆದರೆ, ಆಸ್ತಿ ದಾಖಲೆ ಪತ್ರಗಳು ಬ್ಯಾಂಕಿನಲ್ಲಿದ್ದು, ಅದನ್ನು ಮರಳಿ ಪಡೆಯಲು ಒಂದಷ್ಟು ಹಣ ಬೇಕಾಗಿದೆ ಎಂದು ಹೇಳಿದ್ದಾನೆ.
ಮನೆಯಲ್ಲಿದ್ದ ಶೋಭಾ ಮತ್ತು ಆಕೆಯ ಅಕ್ಕ ಶ್ಯಾಮಲಾ ತಮ್ಮಲ್ಲಿ ಹಣ ಇಲ್ಲವೆಂದು ಹೇಳಿದ್ದಾರೆ. ಆನಂತರ, ಯುವಕ ಅಕ್ಕ-ತಂಗಿಯರನ್ನು ನಂಬಿಸಿದ್ದು, ನೀವು ಏನಾದ್ರೂ ಮಾಡಿ ಹಣ ಕೊಟ್ಟರೆ ಅದಕ್ಕೆ ಒಂದಷ್ಟು ಬಡ್ಡಿ ಸೇರಿಸಿ ಮರಳಿ ಕೊಡುತ್ತೇನೆ, ಎರಡೇ ದಿನದಲ್ಲಿ ಹಣ ಹಿಂತಿರುಗಿಸುತ್ತೇನೆ ಎಂದು ನಂಬಿಸಿದ್ದಾನೆ. ನಮ್ಮಲ್ಲಿ ಹಣ ಇಲ್ಲವೆಂದು ಹೇಳಿದಾಗ, ಒಮ್ಮೆಗೆ ಬಂಗಾರ ಇದ್ದರೂ ಆಗಬಹುದು ಎಂದು ಹೇಳಿದ್ದಾನೆ. ಕೊನೆಗೆ ಯುವಕನ ಬಣ್ಣನೆ ಮಾತುಗಳನ್ನು ನಂಬಿದ ಅಕ್ಕ-ತಂಗಿಯರು ತಮ್ಮಲ್ಲಿದ್ದ ಉಂಗುರ, ಕಿವಿಯೋಲೆ, ಎರಡೂವರೆ ಪವನ್ ತೂಕದ ಚಿನ್ನದ ಸರ ತೆಗೆದು ಕೊಟ್ಟಿದ್ದಾರೆ. ಒಟ್ಟು 1.65 ಲಕ್ಷ ಮೌಲ್ಯದ ಚಿನ್ನದ ಒಡವೆಗಳನ್ನು ಆತನಿಗೆ ಕೊಟ್ಟಿದ್ದಾರೆ.
ಅಲ್ಲಿಂದ ಹಿಂತಿರುಗುವ ಸಂದರ್ಭದಲ್ಲಿ ಎರಡೇ ದಿನದಲ್ಲಿ ಹಿಂತಿರುಗಿ ಕೊಡುತ್ತೇನೆ. ತನ್ನ ಜಾಗ ಸೇಲ್ ಆಗಲಿದ್ದು, ಮೇ 16ರಂದು ಖಂಡಿತ ಬರುತ್ತೇನೆ ಎಂದು ಭರವಸೆ ಕೊಟ್ಟು ಹೋಗಿದ್ದ. ಆದರೆ ಚಿನ್ನಾಭರಣ ತೆಗೆದುಕೊಂಡು ಹೋದವನು ಮತ್ತೆ ಬಂದಿಲ್ಲ. ಅಂದು ಮನೆಯಲ್ಲಿ ಎರಡು ದಿನಗಳ ಕಾಲ ಉಳಿದುಕೊಂಡು ನಂಬಿಕೆ ಹುಟ್ಟಿಸಿದ್ದ. ಮುಂದೆ ಮದುವೆ ಆಗೋದಾಗಿಯೂ ಭರವಸೆ ನೀಡಿದ್ದ. ಮೋಸ ಮಾಡುವ ಉದ್ದೇಶದಿಂದಲೇ ಚಿನ್ನ ತೆಗೆದುಕೊಂಡು ಹೋಗಿದ್ದಾನೆ ಎಂದು ಪಡುಬಿದ್ರಿ ಠಾಣೆಗೆ ನೀಡಿರುವ ದೂರಿನಲ್ಲಿ ಶೋಭಾ ತಿಳಿಸಿದ್ದಾರೆ.
A case is filed at Padubidri police station in which it is accused that a stranger, who introduced himself as Harish Puttur and belonging to Vishwakarma community, came to the house of Shobha, resident of Palimaru on May 6 and took Rs 1.65 lac worth golden ornaments and cheater her.The accused stranger said to complainant Shobha that his property at Kundapur is sold for Rs 80 lac and the documents are in bank and he needs money to get the documents.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm