ಬ್ರೇಕಿಂಗ್ ನ್ಯೂಸ್
13-08-22 09:17 pm HK News Desk ಕ್ರೈಂ
ಹಾಸನ, ಆಗಸ್ಟ್ 13: ಕೋರ್ಟ್ ಆವರಣದಲ್ಲೇ ತನ್ನ ಪತ್ನಿಯ ಕತ್ತನ್ನೇ ಕೊಯ್ದು ಗಂಡನೇ ಬರ್ಬರವಾಗಿ ಹತ್ಯೆಗೈದ ಭಯಾನಕ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಶನಿವಾರ ನಡೆದಿದೆ. ಪತ್ನಿ ಚೈತ್ರಾಳನ್ನು ಕೊಂದ ಆರೋಪಿ ಹೊಳೆನರಸೀಪುರ ತಾಲೂಕಿನ ತಟ್ಟೆಕೆರೆ ಗ್ರಾಮದ ಶಿವಕುಮಾರ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಶಿವಕುಮಾರ್, ಹೊನಮಾರನಹಳ್ಳಿ ಗ್ರಾಮದ ನಿವಾಸಿ ಚೈತ್ರಾಳನ್ನು 7 ವರ್ಷಗಳ ಹಿಂದೆ ಮದುವೆಯಾಗಿದ್ದ. ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಎರಡೂ ಮಕ್ಕಳು ಹೆಣ್ಣು ಎಂಬ ಕಾರಣಕ್ಕೆ ಪತ್ನಿಗೆ ಚಿತ್ರಹಿಂಸೆ ಕೊಡುತ್ತಿದ್ದ. ಇದೇ ವಿಚಾರದಲ್ಲಿ ಕೊರೊನಾ ಲಾಕ್ಡೌನ್ ವೇಳೆ ಭಾರೀ ಗಲಾಟೆ ಆಗಿತ್ತು. ಚೈತ್ರಾಳ ಸರ, ಕಿವಿಯೋಲೆ ಕಿತ್ತುಕೊಂಡು ಗಂಡನೇ ಹಲ್ಲೆ ಮಾಡಿದ್ದ. ಗಂಡನ ಕಾಟ ತಾಳಲಾರದೆ ಚೈತ್ರಾ ತವರು ಮನೆಯಲ್ಲೇ ಇದ್ದಳು. ಇತ್ತೀಚೆಗೆ ಗಂಡನಿಂದ ವಿಚ್ಚೇದನ ಕೋರಿ ಚೈತ್ರಾ ಕೋರ್ಟ್ ಮೆಟ್ಟಿಲೇರಿದ್ದಳು. ಆದರೆ ಅಲ್ಲಿಗೆ ಬಂದಿದ್ದ ಶಿವಕುಮಾರ್, ಕೋರ್ಟ್ ಆವರಣದಲ್ಲಿಯೇ ಪತ್ನಿಯನ್ನು ಕೊಲೆ ಮಾಡಿದ್ದಾನೆ.
ಪುಟ್ಟ ಮಕ್ಕಳಿಗೆ ತಾಯಿ ಇಲ್ಲದಂಗೆ ಮಾಡಿಬಿಟ್ಟ ಎಂದು ಚೈತ್ರಾಳ ಚಿಕ್ಕಮ್ಮ ಆಸ್ಪತ್ರೆಯ ಶವಾಗಾರದ ಬಳಿ ಗೋಳಾಡುತ್ತಿದ್ದರು. ಗಂಡನಿಂದ ವಿಚ್ಚೇದನ ಮತ್ತು ಜೀವನಾಂಶ ಕೋರಿ ಚೈತ್ರಾ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು ಶನಿವಾರ ಹೊಳೆನರಸೀಪುರ ಕೋರ್ಟ್ಗೆ ಚೈತ್ರಾ ಆಗಮಿಸಿದ್ದರು. ಮಧ್ಯಾಹ್ನ 12.30ರ ಸುಮಾರಿಗೆ ಕೋರ್ಟ್ ಆವರಣದ ಶೌಚಗೃಹಕ್ಕೆ ಚೈತ್ರಾ ತೆರಳಿದ್ದಾಗ ಹೊಂಚುಹಾಕಿ ಕಾಯುತ್ತಿದ್ದ ಶಿವಕುಮಾರ್, ಆಕೆಯ ಕತ್ತು ಕೊಯ್ದು ಪರಾರಿಯಾಗಲು ಯತ್ನಿಸಿದ್ದಾನೆ. ಗಂಭೀರ ಸ್ಥಿತಿಯಲ್ಲಿದ್ದ ಚೈತ್ರಾಳನ್ನು ಕೂಡಲೇ ಹಾಸನದ ಹಿಮ್ಸ್ ಆಸ್ಪತ್ರೆಗೆ ಕರೆದೊಯ್ದರೂ ಬದುಕಲಿಲ್ಲ.
ಇತ್ತ ಚೈತ್ರಾಳ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಜಗತ್ತಿನ ಪರಿವೆ ಇಲ್ಲದ ಪುಟ್ಟ ಮಕ್ಕಳು ಸಂಬಂಧಿಕರ ಗೋಳಾಟ ನೋಡಿ ಮಂಕಾಗಿದ್ದಾರೆ.
A man murdered his estranged wife inside a court premises in Holenarasipur town on Saturday.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm