ಬ್ರೇಕಿಂಗ್ ನ್ಯೂಸ್
13-08-22 09:17 pm HK News Desk ಕ್ರೈಂ
ಹಾಸನ, ಆಗಸ್ಟ್ 13: ಕೋರ್ಟ್ ಆವರಣದಲ್ಲೇ ತನ್ನ ಪತ್ನಿಯ ಕತ್ತನ್ನೇ ಕೊಯ್ದು ಗಂಡನೇ ಬರ್ಬರವಾಗಿ ಹತ್ಯೆಗೈದ ಭಯಾನಕ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಶನಿವಾರ ನಡೆದಿದೆ. ಪತ್ನಿ ಚೈತ್ರಾಳನ್ನು ಕೊಂದ ಆರೋಪಿ ಹೊಳೆನರಸೀಪುರ ತಾಲೂಕಿನ ತಟ್ಟೆಕೆರೆ ಗ್ರಾಮದ ಶಿವಕುಮಾರ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಶಿವಕುಮಾರ್, ಹೊನಮಾರನಹಳ್ಳಿ ಗ್ರಾಮದ ನಿವಾಸಿ ಚೈತ್ರಾಳನ್ನು 7 ವರ್ಷಗಳ ಹಿಂದೆ ಮದುವೆಯಾಗಿದ್ದ. ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಎರಡೂ ಮಕ್ಕಳು ಹೆಣ್ಣು ಎಂಬ ಕಾರಣಕ್ಕೆ ಪತ್ನಿಗೆ ಚಿತ್ರಹಿಂಸೆ ಕೊಡುತ್ತಿದ್ದ. ಇದೇ ವಿಚಾರದಲ್ಲಿ ಕೊರೊನಾ ಲಾಕ್ಡೌನ್ ವೇಳೆ ಭಾರೀ ಗಲಾಟೆ ಆಗಿತ್ತು. ಚೈತ್ರಾಳ ಸರ, ಕಿವಿಯೋಲೆ ಕಿತ್ತುಕೊಂಡು ಗಂಡನೇ ಹಲ್ಲೆ ಮಾಡಿದ್ದ. ಗಂಡನ ಕಾಟ ತಾಳಲಾರದೆ ಚೈತ್ರಾ ತವರು ಮನೆಯಲ್ಲೇ ಇದ್ದಳು. ಇತ್ತೀಚೆಗೆ ಗಂಡನಿಂದ ವಿಚ್ಚೇದನ ಕೋರಿ ಚೈತ್ರಾ ಕೋರ್ಟ್ ಮೆಟ್ಟಿಲೇರಿದ್ದಳು. ಆದರೆ ಅಲ್ಲಿಗೆ ಬಂದಿದ್ದ ಶಿವಕುಮಾರ್, ಕೋರ್ಟ್ ಆವರಣದಲ್ಲಿಯೇ ಪತ್ನಿಯನ್ನು ಕೊಲೆ ಮಾಡಿದ್ದಾನೆ.
ಪುಟ್ಟ ಮಕ್ಕಳಿಗೆ ತಾಯಿ ಇಲ್ಲದಂಗೆ ಮಾಡಿಬಿಟ್ಟ ಎಂದು ಚೈತ್ರಾಳ ಚಿಕ್ಕಮ್ಮ ಆಸ್ಪತ್ರೆಯ ಶವಾಗಾರದ ಬಳಿ ಗೋಳಾಡುತ್ತಿದ್ದರು. ಗಂಡನಿಂದ ವಿಚ್ಚೇದನ ಮತ್ತು ಜೀವನಾಂಶ ಕೋರಿ ಚೈತ್ರಾ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು ಶನಿವಾರ ಹೊಳೆನರಸೀಪುರ ಕೋರ್ಟ್ಗೆ ಚೈತ್ರಾ ಆಗಮಿಸಿದ್ದರು. ಮಧ್ಯಾಹ್ನ 12.30ರ ಸುಮಾರಿಗೆ ಕೋರ್ಟ್ ಆವರಣದ ಶೌಚಗೃಹಕ್ಕೆ ಚೈತ್ರಾ ತೆರಳಿದ್ದಾಗ ಹೊಂಚುಹಾಕಿ ಕಾಯುತ್ತಿದ್ದ ಶಿವಕುಮಾರ್, ಆಕೆಯ ಕತ್ತು ಕೊಯ್ದು ಪರಾರಿಯಾಗಲು ಯತ್ನಿಸಿದ್ದಾನೆ. ಗಂಭೀರ ಸ್ಥಿತಿಯಲ್ಲಿದ್ದ ಚೈತ್ರಾಳನ್ನು ಕೂಡಲೇ ಹಾಸನದ ಹಿಮ್ಸ್ ಆಸ್ಪತ್ರೆಗೆ ಕರೆದೊಯ್ದರೂ ಬದುಕಲಿಲ್ಲ.
ಇತ್ತ ಚೈತ್ರಾಳ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಜಗತ್ತಿನ ಪರಿವೆ ಇಲ್ಲದ ಪುಟ್ಟ ಮಕ್ಕಳು ಸಂಬಂಧಿಕರ ಗೋಳಾಟ ನೋಡಿ ಮಂಕಾಗಿದ್ದಾರೆ.
A man murdered his estranged wife inside a court premises in Holenarasipur town on Saturday.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm