ಬ್ರೇಕಿಂಗ್ ನ್ಯೂಸ್
05-10-20 10:48 am Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 5: ನಶೆ ಏರಿಸಿಕೊಳ್ಳೋಕೆ ಗಾಂಜಾ ಕಡ್ಡಿಗಳನ್ನು ಬಳಸುವುದನ್ನು ಕೇಳಿದ್ದೇವೆ. ಆದರೆ ಗಾಂಜಾ ಎಣ್ಣೆ ಬಳಕೆ ಬಗ್ಗೆ ಕೇಳಿದ್ದೀರಾ? ನಶೆ ಏರಿಸಿಕೊಳ್ಳಲು ಗಾಂಜಾವನ್ನು ಎಣ್ಣೆ ರೂಪದಲ್ಲಿ ಬಳಸುತ್ತಿರುವ ಪ್ರಕರಣ ಇದೇ ಮೊದಲ ಬಾರಿಗೆ ಕರಾವಳಿಯಲ್ಲಿ ಬೆಳಕಿಗೆ ಬಂದಿದೆ.
ಗಾಂಜಾದಿಂದ ಎಣ್ಣೆ ತೆಗೆದು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಬಂಟ್ವಾಳ ಸರ್ಕಲ್ ಟಿ.ಡಿ ನಾಗರಾಜ್ ನೇತೃತ್ವದ ತಂಡ ಬಂಧಿತನಿಂದ ಸುಮಾರು 80 ಸಾವಿರ ರೂಪಾಯಿ ಮೌಲ್ಯದ ಗಾಂಜಾ ಎಣ್ಣೆಯನ್ನು ವಶಕ್ಕೆ ಪಡೆದಿದೆ. ಬಂಧಿತನನ್ನು ವಿಟ್ಲ ಕಸಬಾ ಗ್ರಾಮದ ಉಕ್ಕುಡ ನಿವಾಸಿ ಅಬ್ದುಲ್ ಖಾದರ್ ಯಾನೆ ಅದ್ದು (25) ಎಂದು ಗುರುತಿಸಲಾಗಿದೆ. ಆತನಿಂದ ಸುಮಾರು 300 ಗ್ರಾಂ ತೂಕದ ಗಾಂಜಾ ಎಣ್ಣೆ, 40 ಗ್ರಾಂ ಮೊಗ್ಗು ಕಾಯಿ ಮಿಶ್ರಿತ ಗಾಂಜಾವನ್ನು ವಶ ಪಡಿಸಿಕೊಳ್ಳಲಾಗಿದೆ.

ಗಾಂಜಾ ಎಣ್ಣೆ ಅತಿ ಹೆಚ್ಚು ಬೆಲೆಯುಳ್ಳಂಥದ್ದು. ಅರ್ಧ ಕೆಜಿ ಎಣ್ಣೆಗೆ ಒಂದು ಲಕ್ಷಕ್ಕಿಂತ ಹೆಚ್ಚು ಬೆಲೆ ಇದೆ ಎನ್ನುತ್ತಾರೆ ಪೊಲೀಸರು. ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಗಾಂಜಾ ಎಣ್ಣೆ ತೆಗೆಯುವ ಜಾಲ ಇದ್ದು ಆರೋಪಿ ಅಬ್ದುಲ್ ಖಾದರ್ ಅಲ್ಲಿಂದ ಗಾಂಜಾ ತರಿಸಿಕೊಂಡಿದ್ದಾನೆ ಎನ್ನಲಾಗುತ್ತಿದೆ. ಗಾಂಜಾವನ್ನು ಎಣ್ಣೆಯ ರೂಪದಲ್ಲಿ ಬಳಕೆ ಮಾಡುವ ಪ್ರಕರಣ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಮೊದಲ ಬಾರಿಗೆ ಬೆಳಕಿಗೆ ಬಂದಿದೆ. ಉಳಿದಂತೆ ಗಾಂಜಾದಿಂದ ಎಣ್ಣೆ ತೆಗೆಯುವುದು ಅತ್ಯಂತ ದುಬಾರಿ ಮತ್ತು ಅಪರೂಪದ ಪ್ರಕರಣ ಎಂದು ಪೊಲೀಸರು ತಿಳಿಸಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm