ಬ್ರೇಕಿಂಗ್ ನ್ಯೂಸ್
05-10-20 10:48 am Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 5: ನಶೆ ಏರಿಸಿಕೊಳ್ಳೋಕೆ ಗಾಂಜಾ ಕಡ್ಡಿಗಳನ್ನು ಬಳಸುವುದನ್ನು ಕೇಳಿದ್ದೇವೆ. ಆದರೆ ಗಾಂಜಾ ಎಣ್ಣೆ ಬಳಕೆ ಬಗ್ಗೆ ಕೇಳಿದ್ದೀರಾ? ನಶೆ ಏರಿಸಿಕೊಳ್ಳಲು ಗಾಂಜಾವನ್ನು ಎಣ್ಣೆ ರೂಪದಲ್ಲಿ ಬಳಸುತ್ತಿರುವ ಪ್ರಕರಣ ಇದೇ ಮೊದಲ ಬಾರಿಗೆ ಕರಾವಳಿಯಲ್ಲಿ ಬೆಳಕಿಗೆ ಬಂದಿದೆ.
ಗಾಂಜಾದಿಂದ ಎಣ್ಣೆ ತೆಗೆದು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಬಂಟ್ವಾಳ ಸರ್ಕಲ್ ಟಿ.ಡಿ ನಾಗರಾಜ್ ನೇತೃತ್ವದ ತಂಡ ಬಂಧಿತನಿಂದ ಸುಮಾರು 80 ಸಾವಿರ ರೂಪಾಯಿ ಮೌಲ್ಯದ ಗಾಂಜಾ ಎಣ್ಣೆಯನ್ನು ವಶಕ್ಕೆ ಪಡೆದಿದೆ. ಬಂಧಿತನನ್ನು ವಿಟ್ಲ ಕಸಬಾ ಗ್ರಾಮದ ಉಕ್ಕುಡ ನಿವಾಸಿ ಅಬ್ದುಲ್ ಖಾದರ್ ಯಾನೆ ಅದ್ದು (25) ಎಂದು ಗುರುತಿಸಲಾಗಿದೆ. ಆತನಿಂದ ಸುಮಾರು 300 ಗ್ರಾಂ ತೂಕದ ಗಾಂಜಾ ಎಣ್ಣೆ, 40 ಗ್ರಾಂ ಮೊಗ್ಗು ಕಾಯಿ ಮಿಶ್ರಿತ ಗಾಂಜಾವನ್ನು ವಶ ಪಡಿಸಿಕೊಳ್ಳಲಾಗಿದೆ.

ಗಾಂಜಾ ಎಣ್ಣೆ ಅತಿ ಹೆಚ್ಚು ಬೆಲೆಯುಳ್ಳಂಥದ್ದು. ಅರ್ಧ ಕೆಜಿ ಎಣ್ಣೆಗೆ ಒಂದು ಲಕ್ಷಕ್ಕಿಂತ ಹೆಚ್ಚು ಬೆಲೆ ಇದೆ ಎನ್ನುತ್ತಾರೆ ಪೊಲೀಸರು. ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಗಾಂಜಾ ಎಣ್ಣೆ ತೆಗೆಯುವ ಜಾಲ ಇದ್ದು ಆರೋಪಿ ಅಬ್ದುಲ್ ಖಾದರ್ ಅಲ್ಲಿಂದ ಗಾಂಜಾ ತರಿಸಿಕೊಂಡಿದ್ದಾನೆ ಎನ್ನಲಾಗುತ್ತಿದೆ. ಗಾಂಜಾವನ್ನು ಎಣ್ಣೆಯ ರೂಪದಲ್ಲಿ ಬಳಕೆ ಮಾಡುವ ಪ್ರಕರಣ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಮೊದಲ ಬಾರಿಗೆ ಬೆಳಕಿಗೆ ಬಂದಿದೆ. ಉಳಿದಂತೆ ಗಾಂಜಾದಿಂದ ಎಣ್ಣೆ ತೆಗೆಯುವುದು ಅತ್ಯಂತ ದುಬಾರಿ ಮತ್ತು ಅಪರೂಪದ ಪ್ರಕರಣ ಎಂದು ಪೊಲೀಸರು ತಿಳಿಸಿದ್ದಾರೆ.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm