ಬ್ರೇಕಿಂಗ್ ನ್ಯೂಸ್
17-08-22 10:25 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 17: ಸುರತ್ಕಲ್ ನಲ್ಲಿ ನಡೆದ ಫಾಜಿಲ್ ಕೊಲೆ ಪ್ರಕರಣದ ಆರೋಪಿಗಳಿಗೆ ಆಶ್ರಯ ನೀಡಿದ ಆರೋಪದಲ್ಲಿ ಮತ್ತೊಬ್ಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೊಲೆ ಕೃತ್ಯದ ಬಳಿಕ ಆರೋಪಿಗಳನ್ನು ಕಾರಿನಲ್ಲಿ ತನ್ನ ಮನೆಗೆ ಕರೆದೊಯ್ದು ಉಳಿದುಕೊಳ್ಳಲು ಅವಕಾಶ ನೀಡಿದ ಬಂಟ್ವಾಳ ನಿವಾಸಿ ಹರ್ಷಿತ್ (28) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ತಪ್ಪಿಸಿಕೊಳ್ಳಲು ಬಳಸಿದ್ದ ಕಾರನ್ನೂ ವಶಕ್ಕೆ ಪಡೆಯಲಾಗಿದೆ.
ಜುಲೈ 28ರಂದು ರಾತ್ರಿ 8.30ರ ಸುಮಾರಿಗೆ ಸುರತ್ಕಲ್ ಪೇಟೆಯಲ್ಲಿ ಕೊಲೆ ಕೃತ್ಯ ನಡೆದಿತ್ತು. ವಾಚ್ ಖರೀದಿಸಲೆಂದು ಸುರತ್ಕಲ್ ಪೇಟೆಗೆ ಬಂದಿದ್ದ ಫಾಜಿಲ್ ನನ್ನು ಅಟ್ಟಾಡಿಸಿದ್ದು, ಬಟ್ಟೆ ಅಂಗಡಿಗೆ ನುಗ್ಗಿದ್ದಾಗ ಅದರೊಳಗೆ ಹೋಗಿ ತಲವಾರಿನಲ್ಲಿ ಕಡಿದು ಕೊಲೆಗೈದಿದ್ದರು. ಪ್ರಕರಣದಲ್ಲಿ ನಾಲ್ಕೇ ದಿನದಲ್ಲಿ ಏಳು ಮಂದಿ ಆರೋಪಿಗಳನ್ನು ಬಂಧಿಸಿದ್ದರು. ಏಳು ಮಂದಿಯೂ ಕೃತ್ಯದಲ್ಲಿ ನೇರ ಶಾಮೀಲಾಗಿದ್ದರು. ಬೆಳ್ಳಾರೆಯ ಪ್ರವೀಣ್ ಹತ್ಯೆಗೆ ಪ್ರತೀಕಾರಕ್ಕಾಗಿ ಕೊಲೆ ನಡೆಸಿದ್ದರು. ಹ್ಯುಂಡೈ ಇಯೋನ್ ಕಾರಿನಲ್ಲಿ ಬಂದು ಕೃತ್ಯ ಎಸಗಿದ್ದು, ಆನಂತರ ಕಾರನ್ನು ಕಾರ್ಕಳ ತಾಲೂಕಿನ ಇನ್ನಾದಲ್ಲಿ ಬಿಟ್ಟು ಹೋಗಿದ್ದರು. ಅಲ್ಲಿಂದ ಬೇರೆ ಕಾರಿನಲ್ಲಿ ಪರಾರಿಯಾಗಿದ್ದರು ಎನ್ನುವುದು ತನಿಖೆಯಲ್ಲಿ ಕಂಡುಬಂದಿತ್ತು. ಇದೀಗ ಅಲ್ಲಿಂದ ಪರಾರಿಯಾಗಲು ಬಳಸಿದ್ದ ಕಾರು ಮತ್ತು ಅದಕ್ಕೆ ಸಹಕರಿಸಿದ ವ್ಯಕ್ತಿಯನ್ನು ಬಂಧಿಸಲಾಗಿದೆ.
Mangalore One more person has been arrested in connection with the murder of Fazil in Surathkal on July 28. The accused has been identified as Harshith (28) from Bantwal
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am