ಬ್ರೇಕಿಂಗ್ ನ್ಯೂಸ್
17-08-22 10:25 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 17: ಸುರತ್ಕಲ್ ನಲ್ಲಿ ನಡೆದ ಫಾಜಿಲ್ ಕೊಲೆ ಪ್ರಕರಣದ ಆರೋಪಿಗಳಿಗೆ ಆಶ್ರಯ ನೀಡಿದ ಆರೋಪದಲ್ಲಿ ಮತ್ತೊಬ್ಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೊಲೆ ಕೃತ್ಯದ ಬಳಿಕ ಆರೋಪಿಗಳನ್ನು ಕಾರಿನಲ್ಲಿ ತನ್ನ ಮನೆಗೆ ಕರೆದೊಯ್ದು ಉಳಿದುಕೊಳ್ಳಲು ಅವಕಾಶ ನೀಡಿದ ಬಂಟ್ವಾಳ ನಿವಾಸಿ ಹರ್ಷಿತ್ (28) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ತಪ್ಪಿಸಿಕೊಳ್ಳಲು ಬಳಸಿದ್ದ ಕಾರನ್ನೂ ವಶಕ್ಕೆ ಪಡೆಯಲಾಗಿದೆ.
ಜುಲೈ 28ರಂದು ರಾತ್ರಿ 8.30ರ ಸುಮಾರಿಗೆ ಸುರತ್ಕಲ್ ಪೇಟೆಯಲ್ಲಿ ಕೊಲೆ ಕೃತ್ಯ ನಡೆದಿತ್ತು. ವಾಚ್ ಖರೀದಿಸಲೆಂದು ಸುರತ್ಕಲ್ ಪೇಟೆಗೆ ಬಂದಿದ್ದ ಫಾಜಿಲ್ ನನ್ನು ಅಟ್ಟಾಡಿಸಿದ್ದು, ಬಟ್ಟೆ ಅಂಗಡಿಗೆ ನುಗ್ಗಿದ್ದಾಗ ಅದರೊಳಗೆ ಹೋಗಿ ತಲವಾರಿನಲ್ಲಿ ಕಡಿದು ಕೊಲೆಗೈದಿದ್ದರು. ಪ್ರಕರಣದಲ್ಲಿ ನಾಲ್ಕೇ ದಿನದಲ್ಲಿ ಏಳು ಮಂದಿ ಆರೋಪಿಗಳನ್ನು ಬಂಧಿಸಿದ್ದರು. ಏಳು ಮಂದಿಯೂ ಕೃತ್ಯದಲ್ಲಿ ನೇರ ಶಾಮೀಲಾಗಿದ್ದರು. ಬೆಳ್ಳಾರೆಯ ಪ್ರವೀಣ್ ಹತ್ಯೆಗೆ ಪ್ರತೀಕಾರಕ್ಕಾಗಿ ಕೊಲೆ ನಡೆಸಿದ್ದರು. ಹ್ಯುಂಡೈ ಇಯೋನ್ ಕಾರಿನಲ್ಲಿ ಬಂದು ಕೃತ್ಯ ಎಸಗಿದ್ದು, ಆನಂತರ ಕಾರನ್ನು ಕಾರ್ಕಳ ತಾಲೂಕಿನ ಇನ್ನಾದಲ್ಲಿ ಬಿಟ್ಟು ಹೋಗಿದ್ದರು. ಅಲ್ಲಿಂದ ಬೇರೆ ಕಾರಿನಲ್ಲಿ ಪರಾರಿಯಾಗಿದ್ದರು ಎನ್ನುವುದು ತನಿಖೆಯಲ್ಲಿ ಕಂಡುಬಂದಿತ್ತು. ಇದೀಗ ಅಲ್ಲಿಂದ ಪರಾರಿಯಾಗಲು ಬಳಸಿದ್ದ ಕಾರು ಮತ್ತು ಅದಕ್ಕೆ ಸಹಕರಿಸಿದ ವ್ಯಕ್ತಿಯನ್ನು ಬಂಧಿಸಲಾಗಿದೆ.
Mangalore One more person has been arrested in connection with the murder of Fazil in Surathkal on July 28. The accused has been identified as Harshith (28) from Bantwal
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm