ಬ್ರೇಕಿಂಗ್ ನ್ಯೂಸ್
17-08-22 10:25 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 17: ಸುರತ್ಕಲ್ ನಲ್ಲಿ ನಡೆದ ಫಾಜಿಲ್ ಕೊಲೆ ಪ್ರಕರಣದ ಆರೋಪಿಗಳಿಗೆ ಆಶ್ರಯ ನೀಡಿದ ಆರೋಪದಲ್ಲಿ ಮತ್ತೊಬ್ಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೊಲೆ ಕೃತ್ಯದ ಬಳಿಕ ಆರೋಪಿಗಳನ್ನು ಕಾರಿನಲ್ಲಿ ತನ್ನ ಮನೆಗೆ ಕರೆದೊಯ್ದು ಉಳಿದುಕೊಳ್ಳಲು ಅವಕಾಶ ನೀಡಿದ ಬಂಟ್ವಾಳ ನಿವಾಸಿ ಹರ್ಷಿತ್ (28) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ತಪ್ಪಿಸಿಕೊಳ್ಳಲು ಬಳಸಿದ್ದ ಕಾರನ್ನೂ ವಶಕ್ಕೆ ಪಡೆಯಲಾಗಿದೆ.
ಜುಲೈ 28ರಂದು ರಾತ್ರಿ 8.30ರ ಸುಮಾರಿಗೆ ಸುರತ್ಕಲ್ ಪೇಟೆಯಲ್ಲಿ ಕೊಲೆ ಕೃತ್ಯ ನಡೆದಿತ್ತು. ವಾಚ್ ಖರೀದಿಸಲೆಂದು ಸುರತ್ಕಲ್ ಪೇಟೆಗೆ ಬಂದಿದ್ದ ಫಾಜಿಲ್ ನನ್ನು ಅಟ್ಟಾಡಿಸಿದ್ದು, ಬಟ್ಟೆ ಅಂಗಡಿಗೆ ನುಗ್ಗಿದ್ದಾಗ ಅದರೊಳಗೆ ಹೋಗಿ ತಲವಾರಿನಲ್ಲಿ ಕಡಿದು ಕೊಲೆಗೈದಿದ್ದರು. ಪ್ರಕರಣದಲ್ಲಿ ನಾಲ್ಕೇ ದಿನದಲ್ಲಿ ಏಳು ಮಂದಿ ಆರೋಪಿಗಳನ್ನು ಬಂಧಿಸಿದ್ದರು. ಏಳು ಮಂದಿಯೂ ಕೃತ್ಯದಲ್ಲಿ ನೇರ ಶಾಮೀಲಾಗಿದ್ದರು. ಬೆಳ್ಳಾರೆಯ ಪ್ರವೀಣ್ ಹತ್ಯೆಗೆ ಪ್ರತೀಕಾರಕ್ಕಾಗಿ ಕೊಲೆ ನಡೆಸಿದ್ದರು. ಹ್ಯುಂಡೈ ಇಯೋನ್ ಕಾರಿನಲ್ಲಿ ಬಂದು ಕೃತ್ಯ ಎಸಗಿದ್ದು, ಆನಂತರ ಕಾರನ್ನು ಕಾರ್ಕಳ ತಾಲೂಕಿನ ಇನ್ನಾದಲ್ಲಿ ಬಿಟ್ಟು ಹೋಗಿದ್ದರು. ಅಲ್ಲಿಂದ ಬೇರೆ ಕಾರಿನಲ್ಲಿ ಪರಾರಿಯಾಗಿದ್ದರು ಎನ್ನುವುದು ತನಿಖೆಯಲ್ಲಿ ಕಂಡುಬಂದಿತ್ತು. ಇದೀಗ ಅಲ್ಲಿಂದ ಪರಾರಿಯಾಗಲು ಬಳಸಿದ್ದ ಕಾರು ಮತ್ತು ಅದಕ್ಕೆ ಸಹಕರಿಸಿದ ವ್ಯಕ್ತಿಯನ್ನು ಬಂಧಿಸಲಾಗಿದೆ.
Mangalore One more person has been arrested in connection with the murder of Fazil in Surathkal on July 28. The accused has been identified as Harshith (28) from Bantwal
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm