ಬ್ರೇಕಿಂಗ್ ನ್ಯೂಸ್
17-08-22 10:25 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 17: ಸುರತ್ಕಲ್ ನಲ್ಲಿ ನಡೆದ ಫಾಜಿಲ್ ಕೊಲೆ ಪ್ರಕರಣದ ಆರೋಪಿಗಳಿಗೆ ಆಶ್ರಯ ನೀಡಿದ ಆರೋಪದಲ್ಲಿ ಮತ್ತೊಬ್ಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೊಲೆ ಕೃತ್ಯದ ಬಳಿಕ ಆರೋಪಿಗಳನ್ನು ಕಾರಿನಲ್ಲಿ ತನ್ನ ಮನೆಗೆ ಕರೆದೊಯ್ದು ಉಳಿದುಕೊಳ್ಳಲು ಅವಕಾಶ ನೀಡಿದ ಬಂಟ್ವಾಳ ನಿವಾಸಿ ಹರ್ಷಿತ್ (28) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ತಪ್ಪಿಸಿಕೊಳ್ಳಲು ಬಳಸಿದ್ದ ಕಾರನ್ನೂ ವಶಕ್ಕೆ ಪಡೆಯಲಾಗಿದೆ.
ಜುಲೈ 28ರಂದು ರಾತ್ರಿ 8.30ರ ಸುಮಾರಿಗೆ ಸುರತ್ಕಲ್ ಪೇಟೆಯಲ್ಲಿ ಕೊಲೆ ಕೃತ್ಯ ನಡೆದಿತ್ತು. ವಾಚ್ ಖರೀದಿಸಲೆಂದು ಸುರತ್ಕಲ್ ಪೇಟೆಗೆ ಬಂದಿದ್ದ ಫಾಜಿಲ್ ನನ್ನು ಅಟ್ಟಾಡಿಸಿದ್ದು, ಬಟ್ಟೆ ಅಂಗಡಿಗೆ ನುಗ್ಗಿದ್ದಾಗ ಅದರೊಳಗೆ ಹೋಗಿ ತಲವಾರಿನಲ್ಲಿ ಕಡಿದು ಕೊಲೆಗೈದಿದ್ದರು. ಪ್ರಕರಣದಲ್ಲಿ ನಾಲ್ಕೇ ದಿನದಲ್ಲಿ ಏಳು ಮಂದಿ ಆರೋಪಿಗಳನ್ನು ಬಂಧಿಸಿದ್ದರು. ಏಳು ಮಂದಿಯೂ ಕೃತ್ಯದಲ್ಲಿ ನೇರ ಶಾಮೀಲಾಗಿದ್ದರು. ಬೆಳ್ಳಾರೆಯ ಪ್ರವೀಣ್ ಹತ್ಯೆಗೆ ಪ್ರತೀಕಾರಕ್ಕಾಗಿ ಕೊಲೆ ನಡೆಸಿದ್ದರು. ಹ್ಯುಂಡೈ ಇಯೋನ್ ಕಾರಿನಲ್ಲಿ ಬಂದು ಕೃತ್ಯ ಎಸಗಿದ್ದು, ಆನಂತರ ಕಾರನ್ನು ಕಾರ್ಕಳ ತಾಲೂಕಿನ ಇನ್ನಾದಲ್ಲಿ ಬಿಟ್ಟು ಹೋಗಿದ್ದರು. ಅಲ್ಲಿಂದ ಬೇರೆ ಕಾರಿನಲ್ಲಿ ಪರಾರಿಯಾಗಿದ್ದರು ಎನ್ನುವುದು ತನಿಖೆಯಲ್ಲಿ ಕಂಡುಬಂದಿತ್ತು. ಇದೀಗ ಅಲ್ಲಿಂದ ಪರಾರಿಯಾಗಲು ಬಳಸಿದ್ದ ಕಾರು ಮತ್ತು ಅದಕ್ಕೆ ಸಹಕರಿಸಿದ ವ್ಯಕ್ತಿಯನ್ನು ಬಂಧಿಸಲಾಗಿದೆ.
Mangalore One more person has been arrested in connection with the murder of Fazil in Surathkal on July 28. The accused has been identified as Harshith (28) from Bantwal
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
14-10-25 10:33 pm
HK News Desk
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
Kerala, IT professional dead, RSS members: ಆರ...
13-10-25 05:31 pm
14-10-25 10:36 pm
Mangalore Correspondent
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
ಮುದುಂಗಾರುಕಟ್ಟೆ ಬಸ್ ನಿಲ್ದಾಣದಲ್ಲಿ ಯುವಕನ ಮೃತದೇಹ...
14-10-25 06:39 pm
ಬಿ.ಸಿ ರೋಡ್ ; ಹೆದ್ದಾರಿ ಬದಿ ಕಾರು ರಿಪೇರಿ ಮಾಡುತ್...
14-10-25 05:46 pm
14-10-25 04:44 pm
HK News Desk
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm