ಬ್ರೇಕಿಂಗ್ ನ್ಯೂಸ್
05-10-20 12:57 pm Headline Karnataka News Network ಕ್ರೈಂ
ನವದೆಹಲಿ, ಅಕ್ಟೋಬರ್ 5: ಹತ್ರಾಸ್ ಸಾಮೂಹಿಕ ಅತ್ಯಾಚಾರ, ಮಹಿಳೆಯ ಸಾವಿನ ಘಟನೆ ವಿರುದ್ಧ ದೇಶಾದ್ಯಂತ ಆಕ್ರೋಶ ಎದ್ದಿರುವ ನಡುವಲ್ಲೇ 25ರ ಮಹಿಳೆ ಮೇಲೆ ನಾಲ್ವರು ಸಾಮೂಹಿಕ ಅತ್ಯಾಚಾರ ಎಸಗಿ ಹಲ್ಲೆ ನಡೆಸಿದ ಮತ್ತೊಂದು ಪ್ರಕರಣ ರಾಜಧಾನಿ ದೆಹಲಿ ಹೊರವಲಯದ ಗುರುಗ್ರಾಮದಲ್ಲಿ ನಡೆದಿದೆ.
ಸಂತ್ರಸ್ತ ಮಹಿಳೆಯ ತಲೆಗೆ ತೀವ್ರ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣ ಸಂಬಂಧ ನಾಲ್ಕು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ದಿಲ್ಲಿಯಲ್ಲಿ ವಾಸವಿದ್ದ ಈ ಮಹಿಳೆ ರಾತ್ರಿ 1:30ರ ಸುಮಾರಿಗೆ ಸಿಕಂದರಪುರ ಮೆಟ್ರೋ ಸ್ಟೇಷನ್ ಬಳಿ ನಿಂತಿದ್ದಾಗ ಈ ಘಟನೆ ನಡೆದಿದೆ. ಈ ಸಂದರ್ಭದಲ್ಲಿ ವ್ಯಕ್ತಿಯೊಬ್ಬನ ಪರಿಚಯವಾಗಿದ್ದು, ಆತನ ಬೈಕ್ನಲ್ಲಿ ಡಿಎಲ್ಎಫ್ 2ನೇ ಹಂತದಲ್ಲಿದ್ದ ಆತನ ಕಚೇರಿಗೆ ಮಹಿಳೆ ತೆರಳಿದ್ದಾಳೆ. ಕಚೇರಿಗೆ ತಲುಪಿದಾಗ ಆರೋಪಿಯ ಮೂವರು ಸ್ನೇಹಿತರು ಅಲ್ಲಿದ್ದರು. ಹೀಗಾಗಿ ಮುಜುಗರ ಅನುಭವಿಸಿದ ಮಹಿಳೆ ಅಲ್ಲಿಂದ ಹೊರಡಲು ಮುಂದಾಗಿದ್ದು ಆರೋಪಿಗಳು ಬಲವಂತವಾಗಿ ಆಕೆಯನ್ನು ತಡೆದು ಹಲ್ಲೆ ನಡೆಸಿದ್ದಾರೆ. ಮಹಿಳೆಯ ತೀವ್ರ ವಿರೋಧದ ನಡುವೆಯೂ ನಾಲ್ಕು ಮಂದಿ ಅತ್ಯಾಚಾರ ಎಸಗಿ ಹಲ್ಲೆ ನಡೆಸಿದರು ಎಂದು ಸಂತ್ರಸ್ತೆಯ ಹೇಳಿಕೆಯನ್ನು ಉಲ್ಲೇಖಿಸಿ ಪೊಲೀಸರು ಹೇಳಿದ್ದಾರೆ. ಮಹಿಳೆಗೆ ಹಲ್ಲೆಗೈದು ಗೋಡೆ ಹಾಗೂ ನೆಲಕ್ಕೆ ತಲೆಯನ್ನು ಚಚ್ಚಿದ್ದಾರೆ.
ಕೃತ್ಯ ಎಸಗಿದ ಬಳಿಕ ದುಷ್ಕರ್ಮಿಗಳು ರಸ್ತೆ ಪಕ್ಕ ಆಕೆಯನ್ನು ಬಿಟ್ಟು ಪರಾರಿಯಾಗಿದ್ದರು. ತೀವ್ರ ರಕ್ತಸ್ರಾವದಿಂದ ಬಳಲಿದ್ದ ಸಂತ್ರಸ್ತೆಯನ್ನು ನೋಡಿದ ಖಾಸಗಿ ಭದ್ರತಾ ಸಿಬ್ಬಂದಿಯೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಸಂತ್ರಸ್ತೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm