ಬ್ರೇಕಿಂಗ್ ನ್ಯೂಸ್
18-08-22 05:11 pm HK News Desk ಕ್ರೈಂ
ಹಾಸನ, ಆಗಸ್ಟ್ 18: ನಿಧಿಯಾಸೆ ತೋರಿಸಿ ತಾನೇ ಹೂತಿಟ್ಟ ಚಿನ್ನದ ಲೇಪನದ ವಿಗ್ರಹವನ್ನು ತೆಗೆದು ಕೊಟ್ಟು ನಕಲಿ ಸ್ವಾಮೀಜಿಯೊಬ್ಬ ಬರೋಬ್ಬರಿ ಐದು ಲಕ್ಷ ರೂಪಾಯಿ ಪೀಕಿಸಿದ ಘಟನೆ ಹಾಸನದಲ್ಲಿ ಬೆಳಕಿಗೆ ಬಂದಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ದೊಡ್ಡಮಗ್ಗೆ ಗ್ರಾಮದಲ್ಲಿ ಘಟನೆ ನಡೆದಿದೆ.
ಮನೆಯ ತೋಟದಲ್ಲಿ ನಿಧಿ ಇದೆ ಎಂದು ಆಸೆ ತೋರಿಸಿ ಹಣ ಪೀಕಿಸಿದ್ದಲ್ಲದೆ, ಅವರದೇ ಜಮೀನಿನಲ್ಲಿ ಚಿನ್ನದ ವಿಗ್ರಹ ಎಂದು ಹೇಳಿ ಅಗೆದು ತೆಗೆದುಕೊಟ್ಟಿದ್ದಾನೆ. ವಂಚನೆ ತಿಳಿಯುತ್ತಿದ್ದಂತೆ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ.
ವಂಚಕನನ್ನು ಮಂಜುನಾಥ್ ಎಂದು ಗುರುತಿಸಲಾಗಿದೆ. ಮಂಜೇಗೌಡ ಹಾಗೂ ಅವರ ಪುತ್ರ ಪುನೀತ್ ಎಂಬವರು ಮೋಸ ಹೋದವರು. ಕಬ್ಬಿಣದ ವಿಗ್ರಹಕ್ಕೆ ಚಿನ್ನದ ಲೇಪನ ಹಾಕಿ, ಅದನ್ನು ರಾತ್ರಿ ವೇಳೆ ನಿಧಿ ಹುಡುಕಿ ಕೊಡುವುದಾಗಿ ಹೇಳಿ ವಿಗ್ರಹ ತೋರಿಸಿ ನಂಬಿಸಿದ್ದಾನೆ. ಕಬ್ಬಿಣದ ವಿಗ್ರಹಕ್ಕೆ ಚಿನ್ನದ ಲೇಪನ ಹಾಕಿ ತಾನೇ ಭೂಮಿಯೊಳಗೆ ಹೂತಿಟ್ಟು ಮತ್ತೆ ಅದನ್ನೇ ತೆಗೆದು ಕೊಡುವ ವಿಡಿಯೋ ಲಭ್ಯವಾಗಿದೆ. ವಿಗ್ರಹ ತೆಗೆಯುವ ವೇಳೆ ರಕ್ತ ಬೇಕೆಂದು ಮಹಿಳೆಯೊಬ್ಬರ ಕೈ ಕೊಯ್ದು ರಕ್ತ ಸುರಿಸಿದ್ದಾನೆ. ಅರಕಲಗೂಡು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಳ್ಳ ಸ್ವಾಮೀಜಿ ಮಂಜುನಾಥ್ ಮೂಲತಃ ದೊಡ್ಡಹಳ್ಳಿ ಗ್ರಾಮದವನಾಗಿದ್ದು, ಅಸಲಿ ವಿಷಯ ಬಹಿರಂಗ ಆಗುತ್ತಿದ್ದಂತೆಯೇ ಪರಾರಿಯಾಗಿದ್ದಾನೆ.
Hassan Fake swamiji cheats a couple of 5 lakhs in the name of searching treasure
27-05-26 01:41 pm
HK News Staffer
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 01:30 pm
HK News Staffer
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm